Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್ ನ ಸಾಲದ ಹೊರೆ ತಗ್ಗಿಸಬೇಕಿದ್ದರೆ...

ಬ್ರಿಟನ್ ನ ಸಾಲದ ಹೊರೆ ತಗ್ಗಿಸಬೇಕಿದ್ದರೆ 2 ಲಕ್ಷ ಉದ್ಯೋಗ ಕಡಿತ ಅನಿವಾರ್ಯ: ವರದಿ

ವಾರ್ತಾಭಾರತಿವಾರ್ತಾಭಾರತಿ8 Oct 2022 10:49 PM IST
share

ಲಂಡನ್, ಅ.8: ಬ್ರಿಟನ್ ಸರಕಾರದ ಸಾಲದ ಹೊರೆ ತಗ್ಗಬೇಕಿದ್ದರೆ ಮುಂದಿನ ಕೆಲ ವರ್ಷಗಳಲ್ಲಿ 2 ಲಕ್ಷದಷ್ಟು ಸರಕಾರಿ ಉದ್ಯೋಗ ಕಡಿತಗೊಳಿಸುವ ಅನಿವಾರ್ಯತೆಯಿದೆ ಎಂದು ಇನ್ಸ್ಟಿಟ್ಯೂಟ್ ಫಾರ್ ಫಿಸ್ಕಲ್ ಸ್ಟಡೀಸ್(ಐಎಫ್ಎಸ್)ನ ವರದಿ ಹೇಳಿದೆ.

ಸಾರ್ವಜನಿಕ ವಲಯದ ವೇತನಗಳ ವೆಚ್ಚ ಈ ವರ್ಷ 5% ಹೆಚ್ಚಲಿದ್ದು ಇದು ಹಣದುಬ್ಬರ ಪ್ರಮಾಣದ 50%ದಷ್ಟು ಆಗಿದೆ ಮತ್ತು 2021ರ ಬಜೆಟ್ನಲ್ಲಿ ನಿಗದಿಗೊಳಿಸಿದ ವೆಚ್ಚದ ಯೋಜನೆಗಿಂತ ಹೆಚ್ಚಾಗಿದೆ. ಹೆಚ್ಚುವರಿ ಸಾಲ ಪಡೆಯದೆ ಸರಕಾರಿ ಉದ್ಯೋಗಿಗಳಿಗೆ ವೇತನ ಪಾವತಿಗೆ ಬ್ರಿಟನ್ ಸರಕಾರ ಈ ವರ್ಷವೇ  46,386 ಕೋಟಿ ರೂ. ಹೆಚ್ಚುವರಿ ಉಳಿತಾಯ ಸಂಗ್ರಹಿಸಬೇಕಾಗಿದೆ ಎಂದು ವರದಿ ಹೇಳಿದೆ. ತೆರಿಗೆ ಕಡಿತದ ವಾಗ್ದಾನ ಮಾಡಿರುವ ಬ್ರಿಟನ್ನ ವಿತ್ತಸಚಿವ ಕ್ವಾಸಿ ಕ್ವರ್ಟೆಂಗ್ ಸಾರ್ವಜನಿಕ ಹಣಕಾಸು ವ್ಯವಸ್ಥೆಯನ್ನು ಸುಸ್ಥಿತಿಯಲ್ಲಿಡಲು ಭಾರೀ ಸವಾಲನ್ನು ಎದುರಿಸಬೇಕಾಗಿದೆ. ಸಾಲ ಪಡೆಯದೆ ಸರಕಾರಿ ಉದ್ಯೋಗಿಗಳಿಗೆ ವೇತನ ಪಾವತಿಸಬೇಕಿದ್ದರೆ ಈ ವರ್ಷ ಸುಮಾರು 1 ಲಕ್ಷ ಉದ್ಯೋಗ ಕಡಿತ ಅನಿವಾರ್ಯ. 2023ರಲ್ಲಿ ಹಣದುಬ್ಬರದೊಂದಿಗೆ ವೇತನವೂ ಹೆಚ್ಚಿದರೆ, ವೆಚ್ಚವನ್ನು ನಿಯಂತ್ರಣದಲ್ಲಿ ಇರಿಸಲು ಹೆಚ್ಚುವರಿ 1 ಲಕ್ಷ ಉದ್ಯೋಗ ಕಡಿತ ಅನಿವಾರ್ಯ ಎಂದು ಐಎಫ್ಎಸ್ ಹೇಳಿದೆ.

ಇಲಾಖೆಗಳಿಗೆ `ದಕ್ಷತೆಗೆ' ಆದ್ಯತೆ ನೀಡುವಂತೆ ಸರಕಾರ ಸೂಚಿಸಿದೆ. ಇದು ಉದ್ಯೋಗ ಕಡಿತದ ಕೋಡ್ವರ್ಡ್ ಎಂದೇ ಭಾವಿಸಲಾಗುತ್ತದೆ. ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಉದ್ಯೋಗಿಗಳ ಸಂಖ್ಯೆಯಲ್ಲಿ 2,50,000ದಷ್ಟು ಹೆಚ್ಚಳವಾಗಿರುವುದರಿಂದ ಉದ್ಯೋಗ ಕಡಿತಕ್ಕೆ ಸಂಭಾವ್ಯ ಅವಕಾಶವಿದೆ. 5 ಲಕ್ಷದಷ್ಟು ನಾಗರಿಕ ಸೇವಾ ಪಡೆಯಲ್ಲಿ ಐದನೇ ಒಂದರಷ್ಟು ಕಡಿತ ಮಾಡುವ ಬಗ್ಗೆ ಸರಕಾರ ಈಗಾಗಲೇ ಗಂಭೀರ ಯೋಜನೆಗಳನ್ನು ಮುಂದಿರಿಸಿದೆ. ಬ್ಯಾಂಕ್ ಆಫ್ ಇಂಗ್ಲೆAಡಿನ ವಾರ್ಷಿಕ ಸಾಲ ಬಡ್ಡಿ ಬಿಲ್ ಅನ್ನು ಗಮನಾರ್ಹಮಟ್ಟದಲ್ಲಿ ಕಡಿಮೆಗೊಳಿಸುವ ಯೋಜನೆಯನ್ನು ಸರಕಾರ ಪರಿಶೀಲಿಸುತ್ತಿದೆ.

ಈ ಮಧ್ಯೆ, ವೇತನ ಹೆಚ್ಚಳಕ್ಕೆ ಆಗ್ರಹಿಸಿ ನರ್ಸ್ ಹಾಗೂ ಶಿಕ್ಷಕರು ಸೇರಿದಂತೆ ಸಾರ್ವಜನಿಕ ಕ್ಷೇತ್ರದ ಉದ್ಯೋಗಿಗಳು ಮುಷ್ಕರದ ಬೆದರಿಕೆ ಒಡ್ಡಿರುವುದು ಸರಕಾರದ ಮೇಲಿನ ಒತ್ತಡವನ್ನು ಇನ್ನಷ್ಟು ಹೆಚ್ಚಿಸಿದೆ. ಆದ್ದರಿಂದ ವಿತ್ತಸಚಿವ ಕ್ವಾಸಿ ಕ್ವರ್ಟೆಂಗ್ಗೆ ಸುಲಭದ ಆಯ್ಕೆಯಿಲ್ಲ . ಹೆಚ್ಚುವರಿ ಅನುದಾನವಿಲ್ಲದೆ  ವೇತನ ಹೆಚ್ಚಿಸುವ ಘೋಷಣೆಯು ಇಲಾಖೆಯ ಬಜೆಟ್ನ ಮೇಲೆ ಅಗಾಧ ಹೊರೆಯಾಗಲಿದೆ ಮತ್ತು ಇನ್ಯಾವುದೋ ಕ್ಷೇತ್ರದಲ್ಲಿ ಕಡಿತದ ಅಗತ್ಯವನ್ನು ಅನಿವಾರ್ಯಗೊಳಿಸಲಿದೆ ಎಂದು ಐಎಫ್ಎಸ್ನ ಸಂಶೋಧಕ ಅರ್ಥಶಾಸ್ತ್ರಜ್ಞ ಬೀ ಬೊಯ್ಲ್ಯೂ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X