Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋಟೇಶ್ವರ ಪುಷ್ಕರಣಿ ಸಮೀಪದ ಮನೆಗಳ ಬಾವಿ...

ಕೋಟೇಶ್ವರ ಪುಷ್ಕರಣಿ ಸಮೀಪದ ಮನೆಗಳ ಬಾವಿ ನೀರು ಮಲೀನ

ವಾರ್ತಾಭಾರತಿವಾರ್ತಾಭಾರತಿ9 Oct 2022 8:19 PM IST
share
ಕೋಟೇಶ್ವರ ಪುಷ್ಕರಣಿ ಸಮೀಪದ ಮನೆಗಳ ಬಾವಿ ನೀರು ಮಲೀನ

ಕುಂದಾಪುರ, ಅ.9: ಅಕ್ಕಿ ಮಿಲ್ ಒಂದರಿಂದ ಹೊರಬಿಡುವ ಕಲುಷಿತ ನೀರು ಸೇರಿ ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಕೋಟಿತೀರ್ಥ ಪುಷ್ಕರಣಿಯ ಮೀನುಗಳು ಸಾಯುತ್ತಿರುವ ಘಟನೆ ನಡೆದ ಬೆನ್ನಲ್ಲೇ ಕೋಟಿತೀರ್ಥ ಸಮೀಪದ ಹಲವು ಮನೆಗಳ ಬಾವಿ ನೀರು ಮಲೀನಗೊಂಡಿರುವ ಬಗ್ಗೆ ವರದಿಯಾಗಿದೆ.

ಕಳೆದ ಕೆಲ ದಿನಗಳ ಹಿಂದಿನಿಂದ ಪುಷ್ಕರಣಿಯಲ್ಲಿ ಮೀನುಗಳು ಸಾಯುತ್ತಿ ರುವುದು ಮಾತ್ರವಲ್ಲದೆ ನೀರು ಕೂಡ ದಪ್ಪ, ರಾಡಿಯಾಗಿ ಪದರದಂತೆ ಗೋಚರಿಸುತ್ತಿತ್ತು. ಸ್ಥಳೀಯರ ಮನವಿಯಂತೆ ಗ್ರಾಪಂ ಸಂಬಂದಪಟ್ಟವರು ಭೇಟಿ ನೀಡಿದ್ದು ಬಳಿಕ ತಾ.ಪಂ, ಗ್ರಾ.ಪಂ ನಿಯೋಗ ಹಾಗೂ ಆರೋಗ್ಯ ಇಲಾಖೆ, ದೇವಸ್ಥಾನ ವ್ಯವಸ್ಥಾಪನ ಸಮಿತಿ ಕೂಡ ನೀರನ್ನು ಪರಿಶೀಲನೆಗಾಗಿ ಪ್ರಯೋಗಾಲಯಕ್ಕೆ ಕಳಿಸಿತ್ತು. ಅಲ್ಲದೆ ಸಮೀಪದ ರೈಸ್ ಮಿಲ್‌ನ ನೀರು ಕೆರೆ ನೀರಿಗೆ ಹರಿದು ಈ ಸಮಸ್ಯೆಯಾಗುತ್ತಿಕುವ ದೂರಿನ ಹಿನ್ನೆಲೆ ಅದರ ಮುಖ್ಯಸ್ಥರನ್ನು ಕರೆದು ಕ್ರಮಕೈ ಗೊಳ್ಳುವಂತೆ ಸೂಚಿಸಲಾಗಿತ್ತು.

ಇದೀಗ ಕಳೆದೆರಡು ದಿನದಿಂದ ಈ ಪರಿಸರದ ಹತ್ತಾರು ಮನೆಗಳ ಬಾವಿ ನೀರು ಕಪ್ಪುಬಣ್ಣಕ್ಕೆ ತಿರುಗಿದ್ದು ಎಣ್ಣೆ ಜಿಡ್ಡಿನಂತೆ ನೀರಿನ ಮೇಲ್ಪದರದಲ್ಲಿ ಕಂಡು ಬರುತ್ತಿದೆ. ಚರಂಡಿ ಜೊತೆಗೆ ವಸತಿ ಪ್ರದೇಶದ ಕೃಷಿ ಭೂಮಿಯಲ್ಲಿ ಕಲುಷಿತ ನೀರು ನಿಂತಿದ್ದರಿಂದ ಬಾವಿ ನೀರು ಕೆಟ್ಟಿದ್ದು ಅನಾರೋಗ್ಯ ಭೀತಿ ಉಂಟಾಗಿದೆ. ಶೀಘ್ರ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

"ಕಲುಷಿತ ನೀರು ಬಿಡುವ ಕಾರಣದಿಂದ ಮಾಲಿನ್ಯದಿಂದಾಗಿ ದೇವಸ್ಥಾನದ ಪರಿಸರ ಹಾಗೂ ವಸತಿ ಪ್ರದೇಶದಲ್ಲಿ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಗ್ರಾಪಂಗೆ ಮನವಿ ನೀಡಿದ್ದು ಸ್ಥಳ ಪರಿಶೀಲನೆ ನಡೆಸಿದ್ದರು. ಇದೀಗ ಮನೆಗಳ ಬಾವಿ ನೀರು ಸಂಪೂರ್ಣ ಹಾಳಾಗಿದೆ. ಕುಡಿಯಲು ಹಾಗೂ ಇತರ ಬಳಕೆಗೂ ಅಸಾಧ್ಯ ವಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಗ್ರಾಪಂ ಈ ಬಗ್ಗೆ ಕ್ರಮವಹಿಸಿ ಶಾಶ್ವತ ಪರಿಹಾರ ಮಾಡಬೇಕು".
-ಡಾ.ಕೆ.ಸೋಮಶೇಖರ್ ಉಡುಪ, ಸ್ಥಳೀಯರು

"ಕಳೆದ ಮೂರು ವರ್ಷಗಳಿಂದ ಈ ಸಮಸ್ಯೆ ಅನುಭವಿಸುತ್ತಲೇ ಬಂದಿದ್ದು ಮನೆಯಲ್ಲಿ ಮಕ್ಕಳು ಇರುವ ಕಾರಣ ಆತಂಕವಾಗುತ್ತದೆ. ಹಲವು ಬಾರಿ ಮನವಿ ನೀಡಿದ್ದೇವೆ. ಈ ಮೊದಲು ಮಿಲ್ಲಿನವರು ಅವರದ್ದೇ ಗದ್ದೆಗೆ ನೀರು ಬಿಡುತ್ತಿದ್ದಾಗ ಬಾವಿ ನೀರು ಹಾಳಾಗುತ್ತಿತ್ತು. ಈ ಬಗ್ಗೆ ಧ್ವನಿಯೆತ್ತಿದಾಗ ತಾತ್ಕಾಲಿಕವಾಗಿ ಸಮಸ್ಯೆ ಪರಿಹಾರವಾಗಿತ್ತು. ಆದರೆ ಕಳೆದೆರಡು ದಿನಗಳಿಂದ ಮತ್ತೆ ವಸತಿ ಪ್ರದೇಶದ ಭೂಮಿಯಲ್ಲಿ ಕಲುಷಿತ ನೀರು ನಿಂತ ಕಾರಣದಿಂದಾಗಿ ಬಾವಿ ನೀರು ಮಲೀನವಾಗಿ ನೀರು ಕುಡಿಯಲು ಅಸಾಧ್ಯವಾಗಿದೆ".
- ಕೆ.ರಘುರಾಮ ಉಡುಪ, ಸ್ಥಳೀಯರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X