Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೇರಳಕಟ್ಟೆ: ʼಹಳ್ಳಿಯತ್ತ ಸಾಹಿತ್ಯದ...

ನೇರಳಕಟ್ಟೆ: ʼಹಳ್ಳಿಯತ್ತ ಸಾಹಿತ್ಯದ ಚಿತ್ತ' ಕಾರ್ಯಕ್ರಮ

ಇಬ್ರಾಹಿಂ ಖಲೀಲ್ ಪುತ್ತೂರು `ಅದೃಷ್ಟವಂತ ಕವಿ'

ವಾರ್ತಾಭಾರತಿವಾರ್ತಾಭಾರತಿ9 Oct 2022 11:23 PM IST
share
ನೇರಳಕಟ್ಟೆ: ʼಹಳ್ಳಿಯತ್ತ ಸಾಹಿತ್ಯದ ಚಿತ್ತ ಕಾರ್ಯಕ್ರಮ

ಪುತ್ತೂರು: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಮತ್ತು ಚಿಗುರೆಲೆ ಸಾಹಿತ್ಯ ಬಳಗ ವತಿಯಿಂದ ನೆಟ್ಲ ಮುಡ್ನೂರು ಗ್ರಾ.ಪಂ. ಸಹಯೋಗದಲ್ಲಿ `ಹಳ್ಳಿಯತ್ತ ಸಾಹಿತ್ಯದ ಚಿತ್ತ' ಕಾರ್ಯಕ್ರಮ ಪಂಚಾಯತ್‌ನ ನೇರಳಕಟ್ಟೆ ಸಭಾಭವನದಲ್ಲಿ ಅ.8ರಂದು ನಡೆಯಿತು.

ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತುನ ಬಂಟ್ವಾಳ ತಾ. ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಉದ್ಘಾಟಿಸಿದರು . ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ ರವರು ಮಾತನಾಡಿ ಸಾಹಿತ್ಯ ಕ್ಷೇತ್ರದಲ್ಲಿ ಯುವಜನತೆ ತೊಡಗಿಸಿಕೊಳ್ಳಬೇಕು. ಸಾಹಿತಿಯೊಬ್ಬ ಉತ್ತಮ ಸಮಾಜ ನಿರ್ಮಾಣ ಮಾಡುತ್ತಾನೆ, ಹಾಗಾಗಿ ಚಿಗುರೆಲೆ ಸಾಹಿತ್ಯ ಬಳಗದ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನ ಶ್ಲಾಘನೀಯ ಎಂದರು.

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಗೌರವ ಕಾರ್ಯದರ್ಶಿ ವಿ. ಸುಬ್ರಹ್ಮಣ್ಯ ಭಟ್ ಮಾತನಾಡಿ ಸಾಹಿತ್ಯದ ಚಿತ್ತ ಹಳ್ಳಿಯತ್ತ ಹೋದರೆ ಹೆಚ್ಚು ಸಾಹಿತ್ಯ ಕೃಷಿ ಬೆಳೆಯುತ್ತವೆ. ಮಕ್ಕಳಲ್ಲಿ ಸಾಹಿತ್ಯದ ಜಾಗೃತಿ ಮೂಡಿಸಲು ಗ್ರಾಮ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಹೇಳಿದರು.

ಕವಿಗೋಷ್ಟಿಯ ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಮಾಹಿತಿ, ಶಿಕ್ಷಣ ಮತ್ತು ಸಂವಹನ ಸಂಯೋಜಕ ಡೊಂಬಯ್ಯ ಇಡ್ಕಿದು ಮಾತನಾಡಿ, ಕವಿತೆಗೆ ನಿಖರವಾದ ವಿವರಣೆಯೊಂದು ಇರುವುದಿಲ್ಲ. ಕವನದಲ್ಲಿ ರೂಪಕಗಳ ಮೇಲೆ ರೂಪಕಗಳನ್ನು ತಂದರೆ ಅದೂ ಬಹಳ ಕೃತಕವಾಗಿ ಅನಿಸುತ್ತದೆ ಎಂದು ಅವರು ಹೇಳಿದರು. 

ನೆಟ್ಲಮುಡ್ನೂರು ಗ್ರಾ.ಪಂ ಅಧ್ಯಕ್ಷ ಸಚ್ಚಿದಾನಂದ, ಚಲನಚಿತ್ರ ನಟಿ ವಸಂತಲಕ್ಷ್ಮೀ ಪುತ್ತೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾರಂಭದಲ್ಲಿ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯ ಪೂವಪ್ಪ ನೇರಳಕಟ್ಟೆ, ಕ.ಸಾ.ಪ ಬಂಟ್ವಾಳ ತಾಲೂಕು ಘಟಕದ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ, ವಿಟ್ಲ ಹೋಬಳಿ ಕಸಾಪ ಅಧ್ಯಕ್ಷ, ಪತ್ರಕರ್ತ ಗಣೇಶ ಪ್ರಸಾದ ಪಾಂಡೇಲು ಭಾಗವಹಿಸಿದ್ದರು. 

ಕವಿಗೋಷ್ಠಿಯಲ್ಲಿ ತುಳಸಿ ಕೈರಂಗಳ, ಗ್ರೀಷ್ಮಾ, ಧೃತಿ ಏಮಾಜೆ, ಕೌಶೀಲ, ಫಾತಿಮತ್ ಶಿಫಾನಾ, ಮಾನಸ ವಿಜಯ್ ಕೈತಂಜೆ, ಗೋಪಾಲಕೃಷ್ಣ ನೇರಳಕಟ್ಟೆ, ಅಶೋಕ್ ಎನ್. ಕಡೆಶಿವಾಲಯ, ಆನಂದ ರೈ ಅಡ್ಕಸ್ಥಳ, ಅನ್ನಪೂರ್ಣ ಎನ್.ಕೆ, ಹರೀಶ್ ಮಂಜೊಟ್ಟಿ, ಇಬ್ರಾಹಿಂ ಖಲೀಲ್, ರಾಧಾಕೃಷ್ಣ ಎರುಂಬು , ನಿನಾದ್ ಕೈರಂಗಳ, ರಮ್ಮ ಎಂ. ಶ್ರೀನಿವಾಸ್, ಆತ್ಮಿಕಾ, ಲೇಖನಾ,ಪ್ರಗತಿ, ದೀಪ್ತಿ ಅಡ್ಡಂತ್ತಡ್ಕ, ನವ್ಯಶ್ರೀ ಸ್ವರ್ಗ, ಪ್ರಜ್ಞಾ ಕುಲಾಲ್ ಕಾವು, ಸುಪ್ರೀತಾ ಚರಣ್ ಪಾಲಪ್ಪೆ, ಚಂದ್ರಮೌಳಿ ಕಡಂದೇಲು, ಮಂಜುನಾಥ ಎನ್. ಪುತ್ತೂರು, ನಿಭಾ ಬಟ್ಲಡ್ಕ, ವಿಂಧ್ಯಾ ಎಸ್. ರೈ, ಕಾವ್ಯಶ್ರೀ ಅಳಿಕೆ, ಸಾರ್ಥಕ್. ಟಿ., ಬಮಿತ.ಎಂ. ಹೆಚ್., ರಹಾನ ಎಂ., ಅಪೂರ್ವ ಕಾರಂತ್, ಮುಸ್ತಫಾ ಬೆಳ್ಳಾರೆ, ಹರಿಣಾಕ್ಷಿ ನೇರಳಕಟ್ಟೆ, ಶಶಿಧರ್ ಏಮಾಜೆ, ನಾರಾಯಣ ಕುಂಬ್ರ ಸ್ವರಚಿತ ಕವನ ವಾಚಿಸಿದರು.

ಶಶಿಧರ್ ಏಮಾಜೆ ಪ್ರಸ್ತಾವನೆಗೈದರು. ಸುಪ್ರೀತಾ ಚರಣ್ ಪಾಲಪ್ಪೆ ಪ್ರಾರ್ಥಿಸಿದರು, ಚಿಗುರೆಲೆ ಸಾಹಿತ್ಯ ಬಳಗದ ನಾರಾಯಣ ಕುಂಬ್ರ ಸ್ವಾಗತಿಸಿ, ದೀಪ್ತಿ ಅಡ್ಡಂತ್ತಡ್ಕ ವಂದಿಸಿದರು. ತುಳಸಿ ಕೈರಂಗಳ ಸಭಾ ಕಾರ್ಯಕ್ರಮ ನಿರೂಪಿಸಿದರು. ರಾಧಾಕೃಷ್ಣ ಎರುಂಬು ಹಾಗೂ ಅನ್ನಪೂರ್ಣ ಎನ್.ಕೆ ಕಾರ್ಯಕ್ರಮ ನಿರ್ವಹಿಸಿದರು. ರಾಷ್ಟ್ರ ಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

ಅದೃಷ್ಟವಂತ ಕವಿ

ಕವಿಗೋಷ್ಠಿಯಲ್ಲಿ 35ಕ್ಕೂ ಮಿಕ್ಕ ಕವಿಗಳು ಭಾಗವಹಿಸಿದ್ದು, ಕಾರ್ಯಕ್ರಮದ ಕೊನೆಯಲ್ಲಿ ಓರ್ವ ಅದೃಷ್ಟವಂತ ಕವಿಯ ಹೆಸರನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಇಬ್ರಾಹಿಂ ಖಲೀಲ್ ಪುತ್ತೂರು `ಅದೃಷ್ಟವಂತ ಕವಿ' ಆಗಿ ಆಯ್ಕೆಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X