ವಿದ್ಯಾರ್ಥಿನಿ ಮೇಲೆ ಬಸ್ ಹರಿದ ಪ್ರಕರಣ: ಬಿಎಂಟಿಸಿ ಚಾಲಕ ಸೆರೆ
ಬೆಂಗಳೂರು, ಅ.10: ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ಚಾಲಕನನ್ನು ಇಲ್ಲಿನ ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಗಾಯಾಳು ವಿದ್ಯಾರ್ಥಿನಿ ಶಿಲ್ಪಾ ಅವರ ಗೆಳತಿ ರಾಧಿಕಾ ಎಂಬುವರು ನೀಡಿದ ದೂರಿನ್ವಯ ಚಾಲಕ ಸುರೇಶ್ ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: BMTC ಬಸ್ ಹರಿದು ವಿದ್ಯಾರ್ಥಿನಿ ಗಂಭೀರ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಬಂಧನ
Next Story