ಮುಂದಿನ ದಿನಗಳಲ್ಲಿ ಬ್ರಹ್ಮಾವರ ರುಡ್ಸೆಟ್ನಲ್ಲಿ ಉಚಿತ ತರಬೇತಿ

ಬ್ರಹ್ಮಾವರ, ಅ.11: ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ, ಕೆನರಾ ಬ್ಯಾಂಕ್ಗಳ ಸಹಯೋಗದೊಂದಿಗೆ ನಡೆಯುವ ಉಡುಪಿ ಜಿಪಂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ವತಿಯಿಂದ ಉಚಿತ ಊಟ, ವಸತಿ, ಸಮವಸ್ತ್ರ, ತರಬೇತಿ ಕಿಟ್ನೊಂದಿಗೆ ನಿರುದ್ಯೋಗಿ ಯುವಕ-ಯುವತಿರಿಗೆ ಪಾಸ್ಟ್ ಪುಡ್ ತಯಾರಿಕೆ, ಕ್ಯಾಂಡಲ್ ತಯಾರಿಕೆ, ಕೃತಕ ಆರಣಗಳ ತಯಾರಿಕೆ, ಹೈನುಗಾರಿಕೆ ಮತ್ತು ಎರಹುಳ ಗೊಬ್ಬರ ತಯಾರಿಕೆ ತರಬೇತಿಗಳನ್ನು ಬ್ರಹ್ಮಾವರದ ರುಡ್ಸೆಟ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
ಈ ತರಬೇತಿ ಪಡೆಯಲು ಬಯಸುವರು 18ರಿಂದ 45 ವರ್ಷದ ಒಳಗಿ ನವರು ಗ್ರಾಮೀಣ ಭಾಗದ ಬಿ.ಪಿ.ಎಲ್ ಕುಟುಂಬದ ಸದಸ್ಯರಾಗಿ ಇರಬೇಕು. ಕನ್ನಡ ಓದಲು ಬರೆಯಲು ಬರುವ, ನಿಮ್ಮ ಹೆಸರು, ವಿಳಾಸ, ನಿಮ್ಮ ಮೊಬೈಲ್ (ವಾಟ್ಸಪ್ನಂ), ನೀವು ಪಡೆಯಲು ಇಚ್ಚಿಸುವ ತರಬೇತಿಗೆ ಅರ್ಜಿ ಬರೆದು ಇದರ ಜೊತೆ ನಿಮ್ಮ ಬಿ.ಪಿ.ಎಲ್. ರೇಶನ್ ಕಾರ್ಡ್, ಆಧಾರ ಕಾರ್ಡ್ ಇರಿಸಿ ತಕ್ಷಣ ವಾಟ್ಸಪ್ ನಂ.: 9591233748/ 9611544930/ 9448348569/ 9844086383/ 9632561145/ 8861325564ಕ್ಕೆ ಕಳುಹಿಸಿ ಕೊಡ ಬಹುದು. ಇಮೇಲ್:rudbvr@gmail.com ವೆಬ್ ಸೈಟ್ ವಿಳಾಸ: www.rudsetitraining.org ಆನ್ಲೈನ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.







