Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮನಪಾದಿಂದ ಅಂಬೇಡ್ಕರ್ ವೃತ್ತ ನಿರ್ಮಾಣ...

ಮನಪಾದಿಂದ ಅಂಬೇಡ್ಕರ್ ವೃತ್ತ ನಿರ್ಮಾಣ ವಿಳಂಬ; ಸಂವಿಧಾನ ಶಿಲ್ಪಿಗೆ ಅಗೌರವ: ಆಕ್ಷೇಪ

ಮಂಗಳೂರು ಉಪ ವಿಭಾಗ ದಲಿತರ ಕುಂದುಕೊರತೆ ಸಭೆ

ವಾರ್ತಾಭಾರತಿವಾರ್ತಾಭಾರತಿ11 Oct 2022 5:54 PM IST
share
ಮನಪಾದಿಂದ ಅಂಬೇಡ್ಕರ್ ವೃತ್ತ ನಿರ್ಮಾಣ ವಿಳಂಬ; ಸಂವಿಧಾನ ಶಿಲ್ಪಿಗೆ ಅಗೌರವ: ಆಕ್ಷೇಪ

ಮಂಗಳೂರು, ಅ. 11: ನಗರದ ಹೃದಯ ಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ನಿರ್ಮಾಣಕ್ಕೆ 98 ಲಕ್ಷ ರೂ. ಅನುದಾನ ಮೀಸಲಾಗಿಟ್ಟಿದ್ದರೂ ಅದನ್ನು ನಿರ್ಮಿಸದೆ ಮಂಗಳೂರು ಮಹಾನಗರ ಪಾಲಿಕೆ ಸಂವಿಧಾನ ಶಿಲ್ಪಿಗೆ ಅಗೌರವ ತೋರುತ್ತಿದೆ ಎಂದು ದಲಿತ ಮುಖಂಡರಿಂದ ಆಕ್ಷೇಪ ವ್ಯಕ್ತವಾಗಿದೆ.

ಮಂಗಳೂರು ಸಹಾಯಕ ಉಪ ವಿಭಾಗಾಧಿಕಾರಿ (ಎಸಿ) ಮದನ್ ಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ, ಪಂಗಡದವರ ಕುಂದು ಕೊರತೆ ಸಮಿತಿ ಸಭೆಯಲ್ಲಿ ದಲಿತ ಮುಖಂಡ ಎಸ್. ಪಿ. ಆನಂದ ವಿಷಯ ಪ್ರಸ್ತಾಪಿಸಿದರು.

ನಗರದಲ್ಲಿ ಅಷ್ಟೊಂದು ಸಂಖ್ಯೆಯಲ್ಲಿ ಕೆಲವೇ ಸಮಯದಲ್ಲಿ ವೃತ್ತಗಳು ನಿರ್ಮಾಣವಾಗುತ್ತಿದ್ದರೂ, ಹಲವು ವರ್ಷ ಗಳ ಬೇಡಿಕೆಯಾದ ಅಂಬೇಡ್ಕರ್ ವೃತ್ತ ನಿರ್ಮಾಣಕ್ಕೆ ಹಣ ಮೀಸಲಾಗಿಟ್ಟರೂ ಮನಪಾ ಕಾಮಗಾರಿ ನಡೆಸಲು ವಿಳಂಬ ತೋರುತ್ತಿದೆ ಎಂದು ಆರೋಪಿಸಿದರು.

ಎಸಿ ಮದನ್ ಮೋಹನ್ ಪ್ರತಿಕ್ರಿಯಿಸಿ ಅಂಬೇಡ್ಕರ್ ವೃತ್ತ ನಾಮಕಾರಣವಾಗಿದ್ದರೂ ಕಾಮಗಾರಿ ಆರಂಭವಾಗದ ಬಗ್ಗೆ ಸಭೆಯಲ್ಲಿ ಚರ್ಚೆಯಾದ ಬಗ್ಗೆ ಸಂಬಂಧಪಟ್ಟವರಿಗೆ ತಿಳಿಸುವುದಾಗಿ ಹೇಳಿದರು.

ದಲಿತರ ವಸತಿ ಪ್ರದೇಶದಲ್ಲಿ ಮದ್ಯದಂಗಡಿಗೆ ಪರವಾನಿಗೆ ನೀಡದಂತೆ ಆಗ್ರಹ

ಸುರತ್ಕಲ್ ತಡಂಬೈಲ್ ಬಳಿ ಸುಮಾರು ೪೦೦ರಷ್ಟು ದಲಿತ ಕುಟುಂಬಗಳು ವಾಸಿಸುತ್ತಿದ್ದಾರೆ. ಅಲ್ಲಿ ಈಗಾಗಲೇ ಇತರ ಅನಧಿಕೃತ ಮಾದಕ ದ್ರವ್ಯಗಳಿಂದ ಕುಟುಂಬಗಳು ತೊಂದರೆಗಳಾಗಿವೆ. ಈ ನಡುವೆ ಅಲ್ಲಿ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡಬಾರದು ಎಂದು ದಲಿತ ಮುಖಂಡರು ಆಗ್ರಹಿಸಿದರು.

ಮದ್ಯದಂಗಡಿ ಪರವಾನಿಗೆಗೆ ಆಕ್ಷೇಪಣೆ ಬಂದಿರುವುದಾಗಿ ಅಬಕಾರಿ ಇಲಾಖೆಗೆ ಪತ್ರ ಬರೆಯುವುದಾಗಿ ಎಸಿ ಮದನ್ ಮೋಹನ್ ಪ್ರತಿಕ್ರಿಯಿಸಿದರು.

ಡಾ. ಅಂಬೇಡ್ಕರ್, ಮಹಾತ್ಮಗಾಂಧಿ ಭಾವಚಿತ್ರ ಇಡುವ ಬಗ್ಗೆ ಸೂಚನೆ

ಕೋ ಅಪರೇಟಿವ್ ಸೊಸೈಟಿಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮಗಾಂಧಿ ಫೋಟೋ ಇಡುವುದಿಲ್ಲ. ಸರಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳಲ್ಲಿ ಸಂವಿಧಾನ ಶಿಲ್ಪಿ ಹಾಗೂ ಮಹಾತ್ಮಾಗಾಂಧಿಯ ಬಗ್ಗೆ ಅಸಡ್ಡೆ ತೋರಿಸಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಕ್ರಮವಾಗುತ್ತಿಲ್ಲ ಎಂದು ದಲಿತ ಮುಖಂಡರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.

ಸರಕಾರದ ನಿಯಮಾನುಸಾರ ಯಾವೆಲ್ಲಾ ಸರಕಾರಿ ಹಾಗೂ ಇತರ ಸಂಸ್ಥೆಗಳಲ್ಲಿ ಈ ಮಹಾತ್ಮರ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಬೇಕೋ ಆ ನಿಯಮ ಪಾಲನೆಯಾಗಬೇಕು. ಪಾಲನೆಯಾಗದಿದ್ದಲ್ಲಿ ಕ್ರಮ ವಹಿಸಿದ ಬಗ್ಗೆ ಮುಂದಿನ ಸಭೆಗೆ ವರದಿ ನೀಡಬೇಕು ಎಂದು ಮದನ್ ಮೋಹನ್ ಸೂಚನೆ ನೀಡಿದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಸಾಲಕ್ಕೆ ಅರ್ಜಿ ವಿಲೇಗೆ ವಿಳಂಬ ಮಾಡಲಾಗುತ್ತಿದೆ. ವಿಧಾನಸಭಾ ಕ್ಷೇತ್ರ ವೊಂದರಲ್ಲಿ ಒಂದು ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಸಲಾಗುತ್ತದೆ. ಆದರೆ ಶಾಸಕರ ಕೋಟಾದಡಿ ನಾಲ್ಕೈದು ಅರ್ಜಿಗಳನ್ನು ಮಾತ್ರವೇ ಪರಿಗಣಿಸಲಾಗುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿಯೇ ಫಲಾನುಭವಿಗಳ ಆಯ್ಕೆ ನಡೆಸಲು ಕ್ರಮ ವಹಿಸಬೇಕು ಎಂದು ದಲಿತ ಮುಖಂಡರು ಸಭೆಯಲ್ಲಿ ಆಗ್ರಹಿಸಿದರು.

ಸಭೆಯಲ್ಲಿ ಚರ್ಚೆಯಾದ ಬೇಡಿಕೆಯ ಕುರಿತಂತೆ ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಎಸಿ ಮದನ್ ಮೋಹನ್ ತಿಳಿಸಿದರು.

ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಡತ ಕಾಣೆ!

ಹಕ್ಕುಪತ್ರ, ಭೂ ನಕ್ಷೆಗೆ ಸಂಬಂಧಿಸಿದ ಕಡತಗಳು ಬಂಟ್ವಾಳ ತಾಲೂಕು ಕಚೇರಿಯಲ್ಲ್ ಕಾಣೆಯಾಗುತ್ತದೆ. ೨೦೧೭ರಲ್ಲಿ ಭೂ ಪರಿವರ್ತನೆಗೊಂಡು ಹಕ್ಕುಪತ್ರ ಆಗಿರುವ ಭೂ ನಕ್ಷೆಗಳಿಗೆ ಸಂಬಂಧಿಸಿ ಸುಮಾರು ೧೫ ಮಂದಿಯ ಕಡತವೇ ಕಾಣುತ್ತಿಲ್ಲ. ವಿಟ್ಲ ಕಡಬ  ಕಚೇರಿಯಲ್ಲಿ ಹೊಸ ಕಡತ ಕೂಡಾ ಕಣ್ಮರೆಯಾಗಿದೆ ಎಂದು ದಲಿತ ಮುಖಂಡರೊಬ್ಬರು ಆಕ್ಷೇಪಿಸಿದರು.

ಈ ಬಗ್ಗೆ ತಹಶೀಲ್ದಾರರಿಂದ ಪರಿಶೀಲನೆ ಮಾಡಿಸಿ ಕ್ರಮ ವಹಿಸುವುದಾಗಿ ಎಸಿ ಮದನ್ ಮೋಹನ್ ತಿಳಿಸಿದರು.
ಸಭೆಯಲ್ಲಿ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ ವ್ಯಾಪ್ತಿಗೊಳಪಟ್ಟ ದಲಿತರ ಕುಂದುಕೊರತೆಗಳ ಬಗ್ಗೆ ಚರ್ಚೆ, ಹಿಂದಿನ ಸಭೆಯ ಪಾಲನಾ ವರದಿಯನ್ನು ಮಂಡಿಸಲಾಯಿತು.

ಸಭೆಯಲ್ಲಿ ಕೆಲವೊಂದು  ಅನುಪಸ್ಥಿತರಿದ್ದ ಅಧಿಕಾರಿಗಳಿಗೆ ನೋಟೀಸು ನೀಡುವಂತೆ ಎಸಿ ಮದನ್ ಮೋಹನ್ ಸೂಚಿಸಿದರು.

ಮಂಗಳೂರು ತಹಶೀಲ್ದಾರ್ ಪುಟ್ಟರಾಜು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮನೀಶ್ ನಾಯಕ್, ಸುನೀತಾ ಕುಮಾರಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X