Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಲವು ರಾಜ್ಯಗಳಲ್ಲಿ ಮಳೆ ಹಾನಿ; ಆಹಾರ...

ಹಲವು ರಾಜ್ಯಗಳಲ್ಲಿ ಮಳೆ ಹಾನಿ; ಆಹಾರ ಧಾನ್ಯಗಳ ಬೆಲೆ ಏರಿಕೆ ಸಾಧ್ಯತೆ: ತಜ್ಞರು ಅಭಿಪ್ರಾಯ

ವಾರ್ತಾಭಾರತಿವಾರ್ತಾಭಾರತಿ12 Oct 2022 7:20 AM IST
share
ಹಲವು ರಾಜ್ಯಗಳಲ್ಲಿ ಮಳೆ ಹಾನಿ; ಆಹಾರ ಧಾನ್ಯಗಳ ಬೆಲೆ ಏರಿಕೆ ಸಾಧ್ಯತೆ: ತಜ್ಞರು ಅಭಿಪ್ರಾಯ

ಹೊಸದಿಲ್ಲಿ: ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಿಂದಾಗಿ ಕೊಯ್ಲು ಕಾರ್ಯಕ್ಕೆ ಅಡ್ಡಿಯಾಗಿದ್ದು, ಬೇಸಿಗೆ ಬೆಳೆಯ ತುಂಬಿದ ತೆನೆಗಳು ಹಾನಿಗೀಡಾದ ಹಿನ್ನೆಲೆಯಲ್ಲಿ ಅಕ್ಕಿ, ಸಿರಿ ಧಾನ್ಯಗಳು, ಸೋಯಾಬಿಲ್, ಬೇಳೆಕಾಳುಗಳು ಮುಂತಾದ ಆಹಾರ ಧಾನ್ಯಗಳು, ಹತ್ತಿ ಮತ್ತು ತೋಟಗಾರಿಕೆ ಬೆಳೆಗಳ ಬೆಲೆ ಹೆಚ್ಚುವ ಸಾಧ್ಯತೆ ಇದೆ ಎಂದು ಕೃಷಿಕರು ಮತ್ತು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ಪ್ರದೇಶ, ರಾಜಸ್ಥಾನ, ಹರ್ಯಾಣ, ಮಧ್ಯಪ್ರದೇಶ ಮತ್ತು ಪಂಚಾಬ್‍ನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹೊಲಗದ್ದೆಗಳಲ್ಲಿ ನೀರು ತುಂಬಿ ಬೆಳೆಗಳು ತೊಯ್ದಿವೆ. ಇದು ಕಾಳುಗಳ ನಷ್ಟಕ್ಕೆ ಕಾರಣವಾಗಲಿದೆ ಎಂದು ರೈತರು ಆತಂಕಿತರಾಗಿದ್ದಾರೆ.

ಕಳೆದ ಎರಡು ವಾರಗಳಿಂದ ಗುಜರಾತ್ ಕರಾವಳಿಯಿಂದ ಹಿಡಿದು ಉತ್ತರ ಹಾಗೂ ಕೇಂದ್ರ ಭಾರತದ ರಾಜ್ಯಗಳಲ್ಲಿ ತೇವಾಂಶ ಅತ್ಯಧಿಕವಾಗಿದ್ದು, ಉತ್ತರ ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಇದರಿಂದಾಗಿ ಜೂನ್-ಸೆಪ್ಟೆಂಬರ್ ಅವಧಿಯ ಮುಂಗಾರು ಮಳೆಯ ಹಿಂತೆಗೆತ ವಿಳಂಬವಾಗುತ್ತಿದೆ.

ಉತ್ತರ ಪ್ರದೇಶದ ಸುಮಾರು 30 ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದಾಗಿ ಬೆಳೆ ಹಾನಿ ಸಂಭವಿಸಿದ್ದು, ಆಲೂಗಡ್ಡೆ ಬಿತ್ತನೆ ವಿಳಂಬವಾಗಿದೆ ಹಾಗೂ ಬಾಜ್ರಾ ಸೇರಿದಂತೆ ಹಲವು ಬೆಳೆಗಳು ವ್ಯಾಪಕ ಹಾನಿಗೀಡಾಗಿವೆ ಎಂದು ರಾಜ್ಯ ಕಂದಾಯ ಇಲಾಖೆ ಹಿರಿಯ ಅಧಿಕಾರಿ ಹರ್ಷತ್ ಗೋಯೆಲ್ ಹೇಳಿದ್ದಾರೆ.

ದೇಶದಲ್ಲಿ ಈ ವರ್ಷ ಮುಂಗಾರು ಮಳೆಯಲ್ಲಿ ಭಾರಿ ವ್ಯತ್ಯಯವಾಗಿದ್ದು, ಭತ್ತ ಬೆಳೆಯುವ ರಾಜ್ಯಗಳಾದ ಬಿಹಾರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮಳೆ ಕೊರತೆ ಉಂಟಾಗಿದ್ದು, ವಿಳಂಬವಾಗಿ ಮುಂಗಾರು ಆರಂಭವಾಗಿತ್ತು. ಇದೀಗ ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮಳೆ ಮುಂದುವರಿಯವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬೆಳೆದು ನಿಂತ ಪೈರು ಹಾನಿಗೆ ಕಾರಣವಾಗಲಿದೆ ಎಂದು ಕೃಷಿಕರು ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಈ ಬಗ್ಗೆ hindustantimes.com ವರದಿ ಮಾಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X