Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೀಚ್‌ಗಳಲ್ಲಿ ಜಾಗೃತಿ: ಮಹಿಳಾ...

ಬೀಚ್‌ಗಳಲ್ಲಿ ಜಾಗೃತಿ: ಮಹಿಳಾ ಬೈಕರ್ಸ್‌ಗಳಿಂದ 1300 ಕಿ.ಮೀ. ಸಂಚಾರ

ವಾರ್ತಾಭಾರತಿವಾರ್ತಾಭಾರತಿ12 Oct 2022 7:01 PM IST
share
ಬೀಚ್‌ಗಳಲ್ಲಿ ಜಾಗೃತಿ: ಮಹಿಳಾ ಬೈಕರ್ಸ್‌ಗಳಿಂದ 1300 ಕಿ.ಮೀ. ಸಂಚಾರ

ಉಡುಪಿ, ಅ.12: ಕಡಲ ತೀರದ ರಕ್ಷಣೆ, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿ ಸುವ ಉದ್ದೇಶದಿಂದ ‘ಸೇವ್ ಮರೈನ್ ಲೈಫ್’ ಬೈಕ್ ಯಾತ್ರೆಯ ಮೂಲಕ ಬೆಂಗಳೂರಿನ ಸ್ವಾತಿ ಆರ್. ಮತ್ತು ಅನಿತಾ ಎಂ. ಮಂಗಳವಾರ ಹೂಡೆ ಕಡಲ ತೀರದಲ್ಲಿ ಜಾಗೃತಿ ಮೂಡಿಸಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

ಭಾರತ ಸರಕಾರ, ನೆಹರು ಯುವ ಕೇಂದ್ರ ಉಡುಪಿ, ಸ್ವಚ್ಛ ಭಾರತ್ ಫ್ರೆಂಡ್ಸ್, ತೋನ್ಸೆ ಗ್ರಾಮ ಪಂಚಾಯತ್, ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿ ಯೂರು ರಾಷ್ಟ್ರೀಯ ಸೇವಾ ಯೋಜನೆ, ನಿರ್ಮಲ್ ತೋನ್ಸೆ, ಲಯನ್ಸ್ ಕ್ಲಬ್ ಸಂತೆಕಟ್ಟೆ, ಆರ್ಗನೈಸೇಶನ್ ಫಾರ್ ರೂರಲ್ ಡೆವಲಪ್ಮೆಂಟ್ ಎಜ್ಯುಕೇಶನ್ ಆಂಡ್ ರಿಸರ್ಚ್ ಆಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ನೆಹರೂ ಯುವ ಕೇಂದ್ರ ಉಡುಪಿ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿಸೋಜ ಶುಭಹಾರೈಸಿದರು.

ಕನ್ನಡದ ಮೊದಲ ಮಹಿಳಾ ಮೋಟೋ ವ್ಲಾಗರ್ ಮತ್ತು ಇಂಡಿಯನ್ ಬುಕ್ ಆಫ್ ರೆಕಾರ್ಡ್ ಖ್ಯಾತಿಯ ಬೆಂಗಳೂರಿನ ಸ್ವಾತಿ ಆರ್. ಮಾತನಾಡಿ,  ಸಿಂಗಲ್ ಯೂಸ್ ಪ್ಲಾಸ್ಟಿಕ್ ಪರಿಸರಕ್ಕೆ ಅತ್ಯಂತ ಮಾರಕವಾಗಿದ್ದು ಜನರ ಮನೋಭಾವದಲ್ಲಿ ಬದಲಾವಣೆಯಾದರೆ ಪರಿಸರ ಸಂರಕ್ಷಣೆಯ ಕೆಲಸ ಸುಲಭ ಸಾಧ್ಯ. ಉಡುಪಿ ಜಿಲ್ಲೆಯ ಎಲ್ಲಾ ಕಡಲ ತೀರಗಳಿಗೆ ಬ್ಲೂ ಫ್ಲ್ಯಾಗ್ ಮನ್ನಣೆ ಸಿಗುವಂತಾಗಬೇಕು ಎಂದರು.

ಸೇವ್ ಮರೈನ್ ಲೈಫ್ ಬೈಕ್ ಯಾತ್ರೆಗೆ ಅ.9ರಂದು ಬೆಂಗಳೂರಿನ ವಿಧಾನ ಸೌಧದ ಎದುರು ಚಾಲನೆ ನೀಡಲಾಗಿದ್ದು, ಅ.17ರವರೆಗೆ ಈ ಜಾಗೃತಿ ಯಾತ್ರೆ ನಡೆಯಲಿದೆ. ಸುಮಾರು 1300 ಕಿ.ಮೀ. ದೂರ ರಾಜ್ಯದ ಎಲ್ಲ ಕಡಲ ತೀರಗಳಿಗೆ ಬೈಕ್ ಮೂಲಕವೇ ಸಂಚರಿಸಿ, ಆಯ್ದ ಕಡೆಗಳಲ್ಲಿ ಜಾಗೃತಿ ಮೂಡಿಸಿ ಸ್ವಚ್ಛತಾ ಅಭಿಯಾನ ನಡೆಸಲಾಗುತ್ತದೆ. ಶೈಕ್ಷಣಿಕ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜತೆಗೆ ಸಂವಾದ ಕಾರ್ಯಕ್ರಮ ನಡೆಸುವುದು ಕೂಡ ಯಾತ್ರೆಯ ಭಾಗವಾಗಿದೆ ಎಂದು ಸ್ವಾತಿ ಆರ್. ಹೇಳಿದರು.

ಈ ಸಂದರ್ಭದಲ್ಲಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ಸುಷ್ಮಾ, ನಿರ್ಮಲ್ ತೋನ್ಸೆ ಅಧ್ಯಕ್ಷ ವೆಂಕಟೇಶ್ ಕುಂದರ್, ಲಯನ್ಸ್ ಕ್ಲಬ್ ಸಂತೆಕಟ್ಟೆ ಅಧ್ಯಕ್ಷ ಪ್ರವೀಣ್ ಕರ್ವಾಲೋ, ಕಾರ್ಯದರ್ಶಿ ಸುದರ್ಶನ್ ನಾಯಕ್, ಕೋಶಾಧಿಕಾರಿ ಗಣೇಶ್ ಡಿ., ರಾಘವೇಂದ್ರ ಪ್ರಭು ಕರ್ವಾಲು, ಉದಯ ನಾಯ್ಕ್, ಜೂಲಿಯಸ್ ಲೂವಿಸ್, ಗಣೇಶ್ ಪ್ರಸಾದ್ ನಾಯಕ್, ಅಸ್ವಿನಿ, ಶ್ರದ್ಧಾ, ಸಂಜನಾ, ಸಮೀಕ್ಷಾ, ರಕ್ಷಿತ್, ಸುಕಾಂತ್ ಯು.ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X