Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲ್ವೆ ಉದ್ಯೋಗಿಗಳಿಗೆ ಬೋನಸ್ ಘೋಷಣೆ: 78...

ರೈಲ್ವೆ ಉದ್ಯೋಗಿಗಳಿಗೆ ಬೋನಸ್ ಘೋಷಣೆ: 78 ದಿನಗಳ ವೇತನ ನೀಡಲು ಸಂಪುಟದ ಅಸ್ತು

ವಾರ್ತಾಭಾರತಿವಾರ್ತಾಭಾರತಿ12 Oct 2022 7:34 PM IST
share
ರೈಲ್ವೆ ಉದ್ಯೋಗಿಗಳಿಗೆ ಬೋನಸ್ ಘೋಷಣೆ: 78 ದಿನಗಳ ವೇತನ ನೀಡಲು ಸಂಪುಟದ ಅಸ್ತು

ಹೊಸದಿಲ್ಲಿ,ಅ.12: 2021-22ನೇ ಹಣಕಾಸು ವರ್ಷಕ್ಕೆ ಆರ್ಪಿಎಫ್/ಆರ್ಪಿಎಸ್ಎಫ್ (RPF/RPSF) ಸಿಬ್ಬಂದಿಗಳನ್ನು ಹೊರತುಪಡಿಸಿ ಗೆಜೆಟೆಡ್ ಅಲ್ಲದ ರೈಲ್ವೆ(Railway) ಉದ್ಯೋಗಿಗಳಿಗೆ 78 ದಿನಗಳ ವೇತನಕ್ಕೆ ಸಮನಾದ ಉತ್ಪಾದಕತೆ ಸಂಯೋಜಿತ ಬೋನಸ್ (ಪಿಎಲ್ಬಿ) ನೀಡಲು ಸರಕಾರವು ಬುಧವಾರ ಒಪ್ಪಿಗೆ ನೀಡಿದೆ.‌ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಲಭ್ಯ ದತ್ತಾಂಶಗಳಂತೆ ಸುಮಾರು 11.27 ಲ.ಗೆಜೆಟೆಡ್ ಅಲ್ಲದ ರೈಲ್ವೆ ಉದ್ಯೋಗಿಗಳು ಸರಕಾರದ ನಿರ್ಧಾರದ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಬೋನಸ್ ಪಾವತಿಗೆ(Bonus payment) 1,832.09 ಕೋ.ರೂ.ಗಳ ವೆಚ್ಚವನ್ನು ಅಂದಾಜಿಸಲಾಗಿದೆ.

ಪಿಎಲ್ಬಿ ಪಾವತಿಗಾಗಿ (Payment of PLB) ವೇತನ ಲೆಕ್ಕಾಚಾರ ಮಿತಿಯನ್ನು ಮಾಸಿಕ 7,000 ರೂ.ಗಳಿಗೆ ನಿಗದಿಗೊಳಿಸಲಾಗಿದೆ. ಅರ್ಹ ರೈಲ್ವೆ ಉದ್ಯೋಗಿಗೆ 78 ದಿನಗಳಿಗೆ ನೀಡಲಾಗುವ ಗರಿಷ್ಠ ಮೊತ್ತವು 17,951 ರೂ. ಆಗಿರಲಿದೆ.

ಆರ್ಥಿಕತೆಯ ವೇಗವರ್ಧಕವೂ ಆಗಿರುವ ಪ್ರಯಾಣಿಕರು ಮತ್ತು ಸರಕು ಸಾಗಣೆ ಸೇವೆಗಳಲ್ಲಿ (Passenger and freight services)ರೈಲ್ವೆ ಸಿಬ್ಬಂದಿಗಳು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ಎಂದು ರೈಲ್ವೆ ಸಚಿವಾಲಯವು ಈ ಮೊದಲು ಹೇಳಿತ್ತು. ವಾಸ್ತವದಲ್ಲಿ ಲಾಕ್ಡೌನ್ ಸಂದರ್ಭಗಳಲ್ಲಿಯೂ ಆಹಾರ,ರಸಗೊಬ್ಬರ, ಕಲ್ಲಿದ್ದಲು ಇತ್ಯಾದಿಗಳಂತಹ ಅಗತ್ಯ ಸರಕುಗಳು ಮತ್ತು ಇತರ ಸಾಮಗ್ರಿಗಳ ಅನಿರ್ಬಂಧಿತ ಸಾಗಾಣಿಕೆಯನ್ನು ರೈಲ್ವೆ ಸಿಬ್ಬಂದಿಗಳು ಖಚಿತಪಡಿಸಿದ್ದರು. ಕಾರ್ಯಾಚರಣೆ ಪ್ರದೇಶಗಳಲ್ಲಿ ಇಂತಹ ಸರಕುಗಳ ಕೊರತೆಯಾಗದಂತೆ ರೈಲ್ವೆಯು ಮುತುವರ್ಜಿ ವಹಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X