Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿದ್ಯಾರ್ಥಿನಿ ಮೇಲೆ BMTC ಬಸ್ ಹರಿದ...

ವಿದ್ಯಾರ್ಥಿನಿ ಮೇಲೆ BMTC ಬಸ್ ಹರಿದ ಪ್ರಕರಣ: ತರಗತಿ ಬಹಿಷ್ಕರಿಸಿ ಧರಣಿ ಮುಂದುವರಿಸಿದ ವಿದ್ಯಾರ್ಥಿಗಳು

ಬೆಂಗಳೂರು ವಿವಿ ಜ್ಞಾನಭಾರತಿ ಆವರಣದಲ್ಲಿ ಖಾಸಗಿ ವಾಹನಗಳಿಗೆ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ12 Oct 2022 8:38 PM IST
share
ವಿದ್ಯಾರ್ಥಿನಿ ಮೇಲೆ BMTC ಬಸ್ ಹರಿದ ಪ್ರಕರಣ: ತರಗತಿ ಬಹಿಷ್ಕರಿಸಿ ಧರಣಿ ಮುಂದುವರಿಸಿದ ವಿದ್ಯಾರ್ಥಿಗಳು

ಬೆಂಗಳೂರು, ಅ. 12: ಬೆಂಗಳೂರು ವಿವಿಯ ಜ್ಞಾನಭಾರತಿ ಆವರಣದಲ್ಲಿ ಸರಣಿ ಅಪಘಾತ ಸಂಬವಿಸುತ್ತಿದ್ದು, ವಿವಿ ಆವರಣದಲ್ಲಿ ಸಾರ್ವಜನಿಕ ವಾಹನ ನಿಷೇಧ ಮಾಡುವಂತೆ ಬುಧವಾರ ತರಗತಿಗಳನ್ನು ಬಹಿಷ್ಕರಿಸಿ ರಸ್ತೆ ತಡೆದು ವಿದ್ಯಾರ್ಥಿಗಳು ಧರಣಿ ನಡೆಸಿದರು.

ರಸ್ತೆ ಅಪಘಾತದಿಂದಾಗಿ ಶಿಲ್ಪ ಎಂಬ ವಿದ್ಯಾರ್ಥಿನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಪಘಾತಕ್ಕೆ ಕಾರಣವಾದ ಬಿಎಂಟಿಸಿ ಡ್ರೈವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಪಘಾತ ಸಂಭವಿಸಿ ಎರಡು ದಿನಗಳು ಕಳೆದರೂ, ಉನ್ನತ ಶಿಕ್ಷಣ ಸಚಿವರು, ಸಾರಿಗೆ ಸಚಿವರು ವಿದ್ಯಾರ್ಥಿನಿ ದಾಖಲಾಗಿದ್ದ ಆಸ್ವತ್ರೆಗೆ ಬೇಟಿ ನೀಡಿಲ್ಲ. ಸಚಿವರು ಬರುವವರೆಗೂ ಧರಣಿ  ಕೈಬಿಡುವುದಿಲ್ಲ ಎಂದು  ವಿದ್ಯಾರ್ಥಿಗಳು ತಿಳಿಸಿದರು.  

ವಿವಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಬೇಕು. ವಿವಿ ರಸ್ತೆಗಳಲ್ಲಿ ವೈಜ್ಞಾನಿಕವಾಗಿ ಹಂಪ್ ಅಳವಡಿಸಬೇಕು. ಅನೈತಿಕ ಚಟುವಟಿಕೆಗೆ ಕಡಿವಾಣ ಹಾಕಿ ಉತ್ತಮ ಶೈಕ್ಷಣಿಕ ಪರಿಸರ ರೂಪಿಸಬೇಕು. ವಿವಿ ಆವರಣದೊಳಕ್ಕೆ ಮದ್ಯ ಸೇವಿಸಿ ಬರುವವರ ತಪಾಸಣೆ ನಡೆಸಬೇಕು. ವಿವಿ ಐಡಿ ಕಾರ್ಡ್ ಹೊಂದಿರುವ ವಿವಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಧರಣಿ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಖಾಸಗಿ ವಾಹನಗಳಿಗೆ ನಿಷೇಧ: ಬೆಂಗಳೂರು ವಿವಿ ಆವರಣದೊಳಗೆ ಖಾಸಗಿ ವಾಹನ ಸಂಚಾರ ನಿಷೇಧ ಮಾಡುವ ವಿಚಾರವಾಗಿ ಬೆಂಗಳೂರು ವಿವಿಯಲ್ಲಿ ಬುಧವಾರ ಸಭೆ ನಡೆದಿದೆ. ಕುಲಪತಿ, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಖಾಸಗಿ ವಾಹನಗಳಿಗೆ ಸಮಯವನ್ನು ನಿಗದಿ ಮಾಡಿದ್ದು, ಬೆಳಿಗ್ಗೆ 6 ರಿಂದ ರಾತ್ರಿ 8ರವರೆಗೆ ಮಾತ್ರ ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಆವರಣದಲ್ಲಿರುವ ರಸ್ತೆಗಳಿಗೆ ಹಂಪ್ಸ್ ಗಳನ್ನು  ಅಳವಡಿಸಲು ಹಾಗೂ ರಸ್ತೆಗಳಲ್ಲಿ ಸಿಸಿ ಕ್ಯಾಮಾರಗಳನ್ನು ಅಳವಡಿಸಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರಕಾರದ ಅನುಮತಿ ದೊರೆತ ಬಳಿಕ ಕ್ರಮ ವಹಿಸುವುದಾಗಿ ಬೆಂಗಳೂರು ವಿವಿಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: 'ಹೇ ದೋಸ್ತಿ ಹಮ್ ನಹೀ ಚೋಡೆಂಗೆ': ಸಿದ್ದರಾಮಯ್ಯ- ಡಿಕೆಶಿ ಫೋಟೊ ಹಂಚಿಕೊಂಡ ಸುರ್ಜೆವಾಲಾ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X