Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈದರಾಬಾದ್: 903 ಕೋ.ರೂ.ಆನ್‌ಲೈನ್‌...

ಹೈದರಾಬಾದ್: 903 ಕೋ.ರೂ.ಆನ್‌ಲೈನ್‌ ಹೂಡಿಕೆ ವಂಚನೆ, 10 ಜನರ ಬಂಧನ

ವಾರ್ತಾಭಾರತಿವಾರ್ತಾಭಾರತಿ13 Oct 2022 9:46 PM IST
share
ಹೈದರಾಬಾದ್: 903 ಕೋ.ರೂ.ಆನ್‌ಲೈನ್‌ ಹೂಡಿಕೆ ವಂಚನೆ, 10 ಜನರ ಬಂಧನ

ಹೈದರಾಬಾದ್,ಅ.13: 903 ಕೋ.ರೂ.ಗಳ ಆನ್ಲೈನ್ ವಂಚನೆಗೆ ಸಂಬಂಧಿಸಿದಂತೆ ಓರ್ವ ಚೀನಿ ಮತ್ತು ಓರ್ವ ತೈವಾನ್ ಪ್ರಜೆ ಸೇರಿದಂತೆ 10 ಜನರನ್ನು ಹೈದರಾಬಾದ್ ಪೊಲೀಸರು ಬುಧವಾರ ಬಂಧಿಸಿದ್ದಾರೆ.

 ಜಾಲವು ಆನ್ಲೈನ್ ಹೂಡಿಕೆ ಆ್ಯಪ್ಗಳ ಮೂಲಕ ಕಾನೂನುಬಾಹಿರವಾಗಿ ಸಂಗ್ರಹಿಸಿದ ಹಣವನ್ನು ಅಮೆರಿಕದ ಡಾಲರ್ಗಳನ್ನಾಗಿ ಪರಿವರ್ತಿಸಲು ಮನಿ ಎಕ್ಸ್ಚೇಂಜ್ ಮತ್ತು ವಿದೇಶಿ ವಿನಿಮಯ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿತ್ತು. ಹೀಗೆ ಪರಿವರ್ತನೆಗೊಂಡ ಹಣವನ್ನು ಹವಾಲಾ ಕಾರ್ಯಾಚರಣೆಗಳ ಮೂಲಕ ವಿದೇಶಗಳಿಗೆ ರವಾನಿಸಲಾಗುತ್ತಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

‘ಲೋಕ್ಸಾಂ’ಎಂಬ ಹೂಡಿಕೆ ಆ್ಯಪ್ನಲ್ಲಿ ತಾನು 1.6 ಲ.ರೂ.ಗಳನ್ನು ತೊಡಗಿಸಿದ್ದು,ತನ್ನನ್ನು ವಂಚಿಸಲಾಗಿದೆ ಎಂದು ಆರೋಪಿಸಿ ಹೈದರಾಬಾದ್ ನಿವಾಸಿಯೋರ್ವ ಸಲ್ಲಿಸಿದ್ದ ದೂರಿನ ಆಧಾರದಲ್ಲಿ ಪೊಲೀಸರು ಈ ಬಂಧನಗಳನ್ನು ನಡೆಸಿದ್ದಾರೆ.

ದೂರುದಾರನ ಹಣವನ್ನು ಇಂಡಸ್ಇಂಡ್ ಬ್ಯಾಂಕಿನಲ್ಲಿಯ ಶಿಂಡೈ ಟೆಕ್ನಾಲಜೀಸ್ ಪ್ರೈ.ಲಿ.ಹೆಸರಿನ ಖಾತೆಯಲ್ಲಿ ಜಮೆ ಮಾಡಲಾಗಿತ್ತು ಎನ್ನುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಪುಣೆಯಲ್ಲಿ ಬಂಧಿಸಲ್ಪಟ್ಟಿರುವ ವೀರೇಂದ್ರ ಸಿಂಗ್ ಎಂಬಾತ ಈ ಖಾತೆಯನ್ನು ತೆರದಿದ್ದ. ಜಾಕ್ ಹೆಸರಿನ ಚೀನಿ ಪ್ರಜೆಯ ಆದೇಶದಂತೆ ತಾನು ಖಾತೆಯನ್ನು ತೆರೆದಿದ್ದೆ ಎಂದು ಸಿಂಗ್ ಪೊಲೀಸರೆದುರು ಬಾಯ್ಬಿಟ್ಟಿದ್ದಾನೆ ಎಂದು ಹೈದರಾಬಾದ್ ಪೊಲೀಸ್ ಆಯುಕ್ತ ಸಿ.ವಿ.ಆನಂದ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

ಶಿಂಡೈನ ಖಾತೆಯು ಬೆಟೆಂಚ್ ನೆಟ್ವರ್ಕ್ಸ್ ಎಂಬ ಇನ್ನೊಂದು ಕಂಪನಿಯೊಂದಿಗೆ ಜೋಡಣೆಗೊಂಡಿತ್ತು. ಇಂತಹುದೇ 15 ಖಾತೆಗಳನ್ನು ದಿಲ್ಲಿಯ ನಿವಾಸಿ ಸಂಜಯ ಕುಮಾರ ಎಂಬಾತ ತೆರೆದಿದ್ದ. ಈ ಖಾತೆಗಳ ವಿವರಗಳನ್ನು ಬಂಧಿತ ತೈವಾನ್ ಪ್ರಜೆ ಚು ಚುನ್-ಯು ಜೊತೆಗೆ ಹಂಚಿಕೊಂಡಿದ್ದ ಆತ ಪ್ರತಿ ಖಾತೆಗೆ 1.20 ಲ.ರೂ.ಗಳ ಕಮಿಷನ್ ಪಡೆದುಕೊಂಡಿದ್ದ. ಶಿಂಡೈನಿಂದ 38 ವಿವಿಧ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾಯಿಸಲಾಗಿತ್ತು. ಅಂತಿಮವಾಗಿ ರಾಜನ್ ಮನಿ ಕಾರ್ಪ್ ಮತ್ತು ಕೆಡಿಎಸ್ ಫಾರೆಕ್ಸ್ ಪ್ರೈ.ಲಿ.ಮೂಲಕ ಅದನ್ನು ಡಾಲರ್ಗಳನ್ನಾಗಿ ಪರಿವರ್ತಿಸಿ ವಿದೇಶಗಳಿಗೆ ಕಳುಹಿಸಲಾಗಿತ್ತು ಎಂದು ಆನಂದ ವಿವರಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 1.91 ಕೋ.ರೂ.ಗಳನ್ನು ಸ್ತಂಭನಗೊಳಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X