Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿಂದುಳಿದ ಜಾತಿಗಳ ಮೀಸಲಾತಿಯಲ್ಲಿ...

ಹಿಂದುಳಿದ ಜಾತಿಗಳ ಮೀಸಲಾತಿಯಲ್ಲಿ ಸರಕಾರದಿಂದ ದ್ವಂದ್ವ ನೀತಿ: ಅಹಿಂದ

ವಾರ್ತಾಭಾರತಿವಾರ್ತಾಭಾರತಿ13 Oct 2022 11:02 PM IST
share
ಹಿಂದುಳಿದ ಜಾತಿಗಳ ಮೀಸಲಾತಿಯಲ್ಲಿ ಸರಕಾರದಿಂದ ದ್ವಂದ್ವ ನೀತಿ: ಅಹಿಂದ

ಮಂಗಳೂರು, ಅ.13: ರಾಜ್ಯದಲ್ಲಿ ಮುಸ್ಲಿಮರು ಹಾಗೂ ಹಿಂದುಳಿದ ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣ ರಂಗದಲ್ಲಿ ಈಗ ಇರುವ ಶೇಕಡಾವಾರು ಮೀಸಲಾತಿ ಜೊತೆಗೆ ಹೆಚ್ಚುವರಿಯಾಗಿ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕಲ್ಪಿಸಿ ಪ್ರಾತಿನಿಧ್ಯ ನೀತಿಯನ್ನು ಜಾರಿಗೊಳಿಸಬೇಕು ಎಂದು ಅಲ್ಪಸಂಖ್ಯಾತರು, ಹಿಂದುಳಿಸಲ್ಪಟ್ಟ ಜಾತಿಗಳು ಹಾಗೂ ದಲಿತರ ಜನ ಚಳವಳಿ (ಅಹಿಂದ)ಯ ದ.ಕ. ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಹಿಂದ ದ.ಕ. ಜಿಲ್ಲಾಧ್ಯಕ್ಷ ವಾಸುದೇವ ಬೋಳೂರು,  ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರತ್ಯೇಕವಾಗಿರುವ ಶೇ.4 ಮೀಸಲಾತಿಯನ್ನು ರದ್ದುಗೊಳಿಸಿ ಅವರನ್ನು 101 ಹಿಂದುಳಿದ ಜಾತಿಗಳ ‘2ಎ’ ಗುಂಪಿಗೆ ಸೇರಿಸಲು ರಾಜ್ಯ ಸರ್ಕಾರದ ನೂತನ ಮೀಸಲಾತಿ ನೀತಿಯಲ್ಲಿ ಉದ್ದೇಶಿಸಲಾಗಿದೆ. ಇದು ಸರಕಾರದ ದ್ವಂದ್ವ ನೀತಿ ಎಂದರು.

ರಾಜ್ಯದಲ್ಲಿ ಶೇ. 14ರಷ್ಟಿರುವ ಮುಸ್ಲಿಮರಿಗೆ ಉದ್ಯೋಗ ಮತ್ತು ಮೀಸಲಾತಿಯ ಶೇ. 4 ಮೀಸಲಾತಿಯನ್ನು ರದ್ದು ಮಾಡಿ ಅದನ್ನು ಶೇ. 15 ಮೀಸಲಾತಿ ಇರುವ 101 ಹಿಂದುಳಿದ ಜಾತಿಗಳ 2ಎ ಗುಂಪಿಗೆ ಸೇರಿಸಿ ಆ ಮೂಲಕ ಶೇ. 19 ಮೀಸಲಾತಿ ಕಲ್ಪಿಸುವುದಲ್ಲದೆ ಪಂಚಮಶಾಲಿ ಜಾತಿಯನ್ನು ಕೂಡಾ ಸೇರಿಸಲು ನಿರ್ಧರಿಸಲಾಗಿದೆ. ಇದರಿಂದ 101 ಹಿಂದುಳಿದ ಜಾತಿಗಳಿಗೆ ಮೀಸಲಾತಿಯಲ್ಲಿ ನಷ್ಟವಾಗಲಿದೆ. ಸದ್ರಿ ಹಿಂದುಳಿದ ಜಾತಿಗಳು, ಪಂಚಮಶಾಲಿ ಮತ್ತು ಮುಸ್ಲಿಮರ ಮಧ್ಯೆ ಮೀಸಲಾತಿಗಾಗಿ ಪೈಪೋಟಿ ಮತ್ತು ಅಸಹಿಷ್ಣುತೆ ಜಾಸ್ತಿಯಾಗಲಿದೆ ಎಂದು ಅವರು ಆಕ್ಷೇಪಿಸಿದರು.

ಪಂಚಮಶಾಲಿಗಳನ್ನು 2ಎ ಗುಂಪಿಗೆ ಸೇರಿಸದೆ ಅವರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ಚುನಾವಣಾ ಮೀಸಲಾತಿಯಲ್ಲೂ ಸಮಸ್ಯೆ

ಸಂಘಟನೆ ಉಪಾಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಮಾತನಾಡಿ, ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 101 ಹಿಂದುಳಿದ ಜಾತಿಗಳೊಂದಿಗೆ ಮುಸ್ಲಿಮರನ್ನು ‘ಎ’ ಮೀಸಲಾತಿಯಲ್ಲಿ ಈಗಾಗಲೇ ಒಳಗೊಳಿಸಲಾಗಿದೆ. ಇದರಿಂದ ಚುನಾವಣೆಯ ಸ್ಥಾನಕ್ಕಾಗಿ ಹಿಂದುಳಿದ ವರ್ಗ ಮತ್ತು ಮುಸ್ಲಿಮರ ನಡುವೆ ಅಪನಂಬಿಕೆ ಜಾಸ್ತಿಯಾಗಿ ಕೋಮು ವೈಷಮ್ಯಕ್ಕೂ ಕಾರಣವಾಗಿದೆ. ಕೂಡಲೆ ‘ಎ’ ಗುಂಪಿನಿಂದ ಮುಸ್ಲಿಮರನ್ನು ಪ್ರತ್ಯೇಕಿಸಬೇಕು. ಹಿಂದುಳಿದ ಜಾತಿಗಳು, ಪಂಚಮಸಾಲಿಗಳು, ಮುಸ್ಲಿಮರಿಗೆ ಪ್ರತ್ಯೇಕ ಪ್ರಾತಿನಿಧ್ಯದ ಮೀಸಲಾತಿ ಜಾರಿಗೆ ತರಬೇಕು. ಆಗ ಮಾತ್ರ ಎಲ್ಲ ವರ್ಗಗಳಿಗೂ ಸೂಕ್ತ ನ್ಯಾಯ ದೊರಕಿದಂತಾಗುತ್ತದೆ ಎಂದು ಒತ್ತಾಯಿಸಿದರು.

ಸಂಘಟನೆಯ ಉಪಾಧ್ಯಕ್ಷ ಪದ್ಮನಾಭ ನರಿಂಗಾನ, ಪ್ರಧಾನ ಕಾರ್ಯದರ್ಶಿ ಯೂಸುಫ್ ವಕ್ತಾರ್ ಉಳ್ಳಾಲ, ಸಂಚಾಲಕ ಭರತೇಶ್ ಅಮೀನ್ ಬಜಾಲ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X