Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅ.15ರಿಂದ ಅಮೃತಜ್ಯೋತಿ ನೋಂದಣಿ ಅಭಿಯಾನ...

ಅ.15ರಿಂದ ಅಮೃತಜ್ಯೋತಿ ನೋಂದಣಿ ಅಭಿಯಾನ ಪ್ರಾರಂಭ: ಸಚಿವ ಸುನಿಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ13 Oct 2022 11:33 PM IST
share
ಅ.15ರಿಂದ ಅಮೃತಜ್ಯೋತಿ ನೋಂದಣಿ ಅಭಿಯಾನ ಪ್ರಾರಂಭ: ಸಚಿವ ಸುನಿಲ್ ಕುಮಾರ್

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್‍ದಾರರಿಗೆ 75 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಅಮೃತ ಜ್ಯೋತಿ’ ಯೋಜನೆ ನೋಂದಣಿಗಾಗಿ ಅ.15ರಿಂದ 30ರವರೆಗೆ ಬೃಹತ್ ಅಭಿಯಾನ ನಡೆಸಬೇಕು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ.

ಗುರುವಾರ ನಗರದ ಬೆಸ್ಕಾಂ ಬೆಳಕು ಭವನದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಯೋಜನೆ ಜಾರಿಗೆ ಸಂಬಂಧಪಟ್ಟಂತೆ ಇರುವ ತಾಂತ್ರಿಕ ಅಡಚಣೆ ವಿಚಾರದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆದ್ಯತೆಯ ಮೇಲೆ ಮಾಡಬೇಕಾದ ಯೋಜನೆಗಳಲ್ಲಿ ವಿಪರೀತ ತಾಂತ್ರಿಕ ಅಂಶಗಳನ್ನು ತುರುಕದಂತೆ ಸಲಹೆ ನೀಡಿದರು.

ಈ ಹಿನ್ನೆಲೆಯಲ್ಲಿ ಫಲಾನುಭವಿಗಳ ನೋಂದಣಿಗೆ ಹದಿನೈದು ದಿನಗಳ ಅಭಿಯಾನ ನಡೆಸುವಂತೆ ಸೂಚನೆ ನೀಡಿದ ಅವರು, ಅ.15ರಿಂದ 30 ರವರೆಗೆ ನೋಂದಣಿ ಕಾರ್ಯ ನಡೆಸಬೇಕು. ಎಷ್ಟು ಸಾಧ್ಯವೋ ಅಷ್ಟು ಹೆಚ್ಚಿನ ಪ್ರಮಾಣದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಈಗಾಗಲೇ 2.50 ಲಕ್ಷ ಅರ್ಜಿಗಳು ಸ್ವೀಕಾರವಾಗಿದೆ. ಅಭಿಯಾನ ಮುಕ್ತಾಯಗೊಳ್ಳುವವರೆಗೆ 10 ಲಕ್ಷ ಫಲಾನುಭವಿಗಳ ನೋಂದಣಿಯಾಗಬೇಕು. ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಫಲಾನುಭವಿಗಳ ಬೃಹತ್ ಸಮಾವೇಶ ನಡೆಸುವುದಕ್ಕೆ ಇಂದಿನಿಂದಲೇ ಸಿದ್ಧತೆ ನಡೆಸಬೇಕು. ಚಿತ್ರದುರ್ಗ, ಚಾಮರಾಜನಗರ, ಬೀದರ್, ಬಾಗಲಕೋಟೆಯಲ್ಲಿ ಸಮಾವೇಶ ನಡೆಸಲಾಗುವುದು. ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳುವಂತೆ ಸುನೀಲ್ ಕುಮಾರ್ ಸೂಚನೆ ನೀಡಿದರು.

ಬೆಳಕು ನಿರಂತರ: ಬೆಳಕು ಯೋಜನೆ ಅಡಿ ವಿದ್ಯುತ್ ಸಂಪರ್ಕ ನೀಡುವ ಪ್ರಕ್ರಿಯೆಯನ್ನು ಕಾಲ ಕಾಲಕ್ಕೆ ಪರಿಶೀಲನೆ ನಡೆಸಬೇಕು. ನವೆಂಬರ್ 15ರೊಳಗೆ ಎಲ್ಲ ಜಿಲ್ಲೆಗಳಲ್ಲಿ ಇದುವರೆಗೆ ಬಂದ ಅರ್ಜಿಗಳಿಗೆ ಸಂಪರ್ಕ ನೀಡಬೇಕು. ಹೊಸ ಅರ್ಜಿಗಳಿಗೂ ಸಂಪರ್ಕ ಕೊಡುವಂತೆ ಅವರು ನಿರ್ದೇಶನ ನೀಡಿದರು.

ಮತ್ತೊಂದು ಅಭಿಯಾನ: ಟಿಸಿ ಹಾಗೂ ಫೀಡರ್ ನಿರ್ವಹಣೆಗಾಗಿ ಮತ್ತೆ ಅಭಿಯಾನ ನಡೆಸಬೇಕು. ಇದರಿಂದ ತಾಂತ್ರಿಕ ವೆಚ್ಚ ಕಡಿಮೆ ಮಾಡುವುದಕ್ಕೆ ಸಾಧ್ಯವಿದೆ. ಹೀಗಾಗಿ ನ.1 ರಿಂದ 15 ರವರೆಗೆ ಹಾಗೂ ಡಿ.1ರಿಂದ 15ರವರೆಗೆ ಟಿಸಿ ಹಾಗೂ ಫೀಡರ್ ನಿರ್ವಹಣಾ ಅಭಿಯಾನ ನಡೆಸುವಂತೆ ಸುನೀಲ್ ಕುಮಾರ್ ಸೂಚನೆ ನೀಡಿದರು.

ಸಭೆಯಲ್ಲಿ ಇಂಧನ ಇಲಾಖೆ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಜಿ.ಕುಮಾರನಾಯಕ್, ಎಲ್ಲ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ತಾಂತ್ರಿಕ ನಿರ್ದೇಶಕರು, ಮುಖ್ಯ ಎಂಜಿನಿಯರ್‍ಗಳು ಭಾಗವಹಿಸಿದ್ದರು. 

ಇ-ಗವರ್ನೆನ್ಸ್ ಕಾರ್ಯದರ್ಶಿಗೆ ಕರೆ: ಅಮೃತ ಜ್ಯೋತಿ ಅನುಷ್ಠಾನಕ್ಕೆ ಇ-ಗವರ್ನೆನ್ಸ್ ರೂಪಿಸಿರುವ ಸಾಫ್ಟ್ ವೇರ್ ನಿಂದ ತಾಂತ್ರಿಕ ಅಡಚಣೆಯುಂಟಾಗುತ್ತಿದೆ ಎಂದು ಅಧಿಕಾರಿಗಳು ಅಳಲು ತೋಡಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಇ-ಗವರ್ನೆನ್ಸ್ ಕಾರ್ಯದರ್ಶಿ ಪೊನ್ನುರಾಜು ಅವರಿಗೆ ಕರೆ ಮಾಡಿದ ಸಚಿವ ಸುನೀಲ್ ಕುಮಾರ್ ತಕ್ಷಣ ಸಭೆಗೆ ಹಾಜರಾಗುವಂತೆ ಸೂಚನೆ ನೀಡಿದರು.

ಕೆಲವೇ ನಿಮಿಷಗಳಲ್ಲಿ ಸಭೆಗೆ ಆಗಮಿಸಿದ ಪೊನ್ನುರಾಜ್, ಎರಡು, ಮೂರು ಹಂತದಲ್ಲಿ ಸರಳೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ಒಟಿಪಿ ಬದಲು ಆಧಾರ್ ಕಾರ್ಡ್ ನಲ್ಲಿ ಇರುವ ಹೆಸರು ಆಧರಿಸಿ ಫಲಾನುಭವಿಗಳ ಆಯ್ಕೆ ಮಾಡುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಡೆಮೊ ನಡೆಯುತ್ತಿದೆ. ಕೆಲವೇ ದಿನದಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸುತ್ತೇವೆ ಎಂದು ವಿವರಣೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X