Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಾವು ತೈಲವನ್ನು ಆಯುಧವಾಗಿ ಬಳಸುವುದಿಲ್ಲ...

ನಾವು ತೈಲವನ್ನು ಆಯುಧವಾಗಿ ಬಳಸುವುದಿಲ್ಲ : ಅಮೆರಿಕಕ್ಕೆ ಸೌದಿ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ13 Oct 2022 11:38 PM IST
share
ನಾವು ತೈಲವನ್ನು ಆಯುಧವಾಗಿ ಬಳಸುವುದಿಲ್ಲ : ಅಮೆರಿಕಕ್ಕೆ ಸೌದಿ ತಿರುಗೇಟು

ರಿಯಾದ್, ಅ.13: ತೈಲ ಉತ್ಪಾದನೆ ಕಡಿತಗೊಳಿಸುವ ನಿರ್ಧಾರವನ್ನು ಮುಂದೂಡಿದರೆ ಅದು ವಿಶ್ವದ ಮೇಲೆ ನಕಾರಾತ್ಮಕ ಪರಿಣಾಮಕ್ಕೆ ಕಾರಣವಾಗಲಿದೆ ಎಂದು ಸೌದಿ (Saudi)ಅರೆಬಿಯಾವು ಅಮೆರಿಕಕ್ಕೆ ಸ್ಪಷ್ಟಪಡಿಸಿದೆ ಎಂದು ಸೌದಿಯ ವಿದೇಶಾಂಗ ಇಲಾಖೆ  ಹೇಳಿದೆ.

ತೈಲ ಉತ್ಪಾದನೆ ಕಡಿತಗೊಳಿಸುವ ಬಗ್ಗೆ ಒಪೆಕ್( ಪೆಟ್ರೋಲಿಯಂ ರಫ್ತು ದೇಶಗಳ ಸಂಘಟನೆ) ಹಾಗೂ ಅದರ ಮಿತ್ರದೇಶಗಳು ಕೈಗೊಂಡಿರುವ ನಿರ್ಧಾರವನ್ನು ಖಂಡಿಸಿದ್ದ ಅಮೆರಿಕದ ಅಧ್ಯಕ್ಷ ಜೋ ಬೈಡನ್(Joe Biden) , ಈ ನಿರ್ಧಾರದಲ್ಲಿ ದೂರದೃಷ್ಟಿಯ ಕೊರತೆಯಿದೆ ಮತ್ತು ಇದು ಅಮೆರಿಕ-ಸೌದಿ ಅರೆಬಿಯಾ ಸಂಬಂಧದ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸೌದಿ ಅರೆಬಿಯಾ, ಅಂತರಾಷ್ಪ್ರಿಯಯ ಘರ್ಷಣೆಯ ಸಂದರ್ಭ ಸೌದಿ ಅರೆಬಿಯಾ ಯಾವ ಪಕ್ಷದ ಪರವೂ ನಿಲ್ಲುವುದಿಲ್ಲ ಮತ್ತು ರಾಜಕೀಯ ಕಾರಣಗಳಿಗಾಗಿ ಯಾವುದೇ ನಿರ್ಧಾರಗಳನ್ನು ಒಪೆಕ್ ಸಂಘಟನೆ ಕೈಗೊಳ್ಳುವುದಿಲ್ಲ. ಎಲ್ಲಾ ಆರ್ಥಿಕ ವಿಶ್ಲೇಷಣೆಗಳು ಸೂಚಿಸಿರುವ  ಪ್ರಕಾರ, ಒಪೆಕ್ ನಿರ್ಧಾರವನ್ನು ಒಂದು ತಿಂಗಳು ಮುಂದೂಡುವುದು ಋಣಾತ್ಮಕ ಆರ್ಥಿಕ ಪರಿಣಾಮಕ್ಕೆ ಕಾರಣವಾಗಲಿದೆ ಎಂದು ಅಮೆರಿಕಕ್ಕೆ ಸ್ಪಷ್ಟಪಡಿಸಲಾಗಿದೆ   ಎಂದು ಹೇಳಿದೆ.

ಸೌದಿ ಅರೆಬಿಯಾವು ತೈಲವನ್ನು ರಾಜಕೀಯಗೊಳಿಸುವುದಿಲ್ಲ. ತೈಲವನ್ನು ಆಯುಧದ ರೀತಿಯಲ್ಲಿ ನಾವು ಪರಿಗಣಿಸುವುದಿಲ್ಲ. ತೈಲವನ್ನು ನಮ್ಮ ಸರಕು ಎಂದು ನೋಡುತ್ತೇವೆ. ತೈಲ ಮಾರುಕಟ್ಟೆಗೆ ಸ್ಥಿರತೆ ತರುವುದು ನಮ್ಮ ಉದ್ದೇಶವಾಗಿದೆ. ಹಲವು ದಶಕಗಳಿಂದಲೂ ಈ ವಿಷಯದಲ್ಲಿ ನಮ್ಮ ದಾಖಲೆಗಳು ಅತ್ಯಂತ ಸ್ಪಷ್ಟವಾಗಿದೆ ಎಂದು ಸೌದಿ ಅರೆಬಿಯಾದ ವಿದೇಶಾಂಗ ಇಲಾಖೆಯ ಸಹಾಯಕ ಸಚಿವ ಅದಿಲ್ ಅಲ್-ಜುಬೇರ್ ಹೇಳಿದ್ದಾರೆ.

ಅಮೆರಿಕ-ಸೌದಿಯ ಮಧ್ಯೆ, ತೀವ್ರವಾದ ಮತ್ತು ಭಯೋತ್ಪಾದನೆಯ ವಿರುದ್ಧದ ಹೋರಾಟದ ರೀತಿಯ ಶಾಶ್ವತ ಹಿತಾಸಕ್ತಿಗೆ ಸಂಬಂದಿಸಿದ ಸಂಬಂಧವಿದ್ದು ಇದು ಅತ್ಯಂತ ಬಲಿಷ್ಟ ಸಂಬಂಧವಾಗಿದೆ ಎಂದವರು ಹೇಳಿದ್ದಾರೆ.

ಬೇಡಿಕೆ ಮತ್ತು ಹೂಡಿಕೆಯ ವಿಷಯದಲ್ಲಿ ಮಾರುಕಟ್ಟೆಯಲ್ಲಿ ಸ್ಥಿರತೆ ಸಾಧಿಸುವುದು ನಮ್ಮ ಈಗಿನ ಆದ್ಯತೆಯಾಗಿದೆ. ಒಪೆಕ್ ಹಾಗೂ ಮಿತ್ರರಾಷ್ಟçಗಳ ನಡುವಿನ ಒಪ್ಪಂದವು ಸರ್ವಾನುಮತದಿಂದ ಕೂಡಿತ್ತು ಮತ್ತು ಮಾರುಕಟ್ಟೆಯ ಚಂಚಲತೆಯನ್ನು ನಿಗ್ರಹಿಸುವ ಉದ್ದೇಶ ಹೊಂದಿದೆ  ಎಂದು ಸೌದಿ ಅರೆಬಿಯಾದ ಇಂಧನ ಸಚಿವ ಯುವರಾಜ ಅಬ್ದುಲಝೀಝ್ ಬಿನ್ ಸಲ್ಮಾನ್ (Abdulaziz bin Salman)ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X