Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಜಾಬ್‌ ಧರಿಸಿದ ಮುಸ್ಲಿಂ ಮಹಿಳೆ ಒಂದು...

ಹಿಜಾಬ್‌ ಧರಿಸಿದ ಮುಸ್ಲಿಂ ಮಹಿಳೆ ಒಂದು ದಿನ ದೇಶದ ಪ್ರಧಾನಿಯಾಗುತ್ತಾಳೆ: ಅಸದುದ್ದೀನ್ ಉವೈಸಿ

ವಾರ್ತಾಭಾರತಿವಾರ್ತಾಭಾರತಿ14 Oct 2022 4:36 PM IST
share
ಹಿಜಾಬ್‌ ಧರಿಸಿದ ಮುಸ್ಲಿಂ ಮಹಿಳೆ ಒಂದು ದಿನ ದೇಶದ ಪ್ರಧಾನಿಯಾಗುತ್ತಾಳೆ: ಅಸದುದ್ದೀನ್ ಉವೈಸಿ

ಹೊಸದಿಲ್ಲಿ: ಹಿಜಾಬ್‌(Hijab) ಧರಿಸಿದ ಮಾತ್ರಕ್ಕೆ ಮುಸ್ಲಿಂ ಮಹಿಳೆಯರು ಇತರ ಮಹಿಳೆಯರಿಗಿಂತ ಯಾವುದೇ ರೀತಿಯಲ್ಲಿ ಕಡಿಮೆಯಾಗುವುದಿಲ್ಲ, ಒಂದು ದಿನ ಹಿಜಾಬ್‌ ಧರಿಸಿದ ಮುಸ್ಲಿಂ ಮಹಿಳೆ ಈ ದೇಶದ ಪ್ರಧಾನಿಯಾಗುವಳು, ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸದುದ್ದೀನ್‌ ಉವೈಸಿ(Asaduddin Owaisi) ಹೇಳಿದ್ದಾರೆ.

ಹಿಜಾಬ್‌ ನಿಷೇಧ ಕುರಿತಂತೆ ಸುಪ್ರೀಂ ಕೋರ್ಟಿನ(Supreme Court) ಭಿನ್ನ ತೀರ್ಪಿನ ನಂತರ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಉವೈಸಿ ಮೇಲಿನಂತೆ ಹೇಳಿದರು.

ಮುಸ್ಲಿಂ ಮಹಿಳೆಯರು ಶಿರ ಮುಚ್ಚುವ ವಸ್ತ್ರ ಧರಿಸಿದ್ದಾರೆಂಬ ಮಾತ್ರಕ್ಕೆ ಅವರು ತಮ್ಮ ಮನಸ್ಸನ್ನು ಮುಚ್ಚಿದ್ದಾರೆ ಎಂದರ್ಥವಲ್ಲ ಎಂದು ಅವರು ಹೇಳಿದರು.

ʻʻಹಿಂದೆಯೂ ಹೇಳಿದ್ದೇನೆ, ಮತ್ತೆ ಹೇಳುತ್ತೇನೆ. ನನ್ನ ಜೀವಮಾನದಲ್ಲಿ ಅಲ್ಲದೇ ಇದ್ದರೂ ನನ್ನ ನಂತರ ಹಿಜಾಬ್‌ ಧರಿಸಿರುವ ಮುಸ್ಲಿಂ ಮಹಿಳೆ ಈ ದೇಶದ ಪ್ರಧಾನಿಯಾಗುತ್ತಾಳೆ ಎಂದು ನಾನು ಹೇಳಿದಾಗ ಹಲವು ಜನರಿಗೆ ಹೊಟ್ಟೆಯುರಿ, ಎದೆಯುರಿಯಾಗಿದೆ,ʼʼಎಂದು ಅವರು ಹೇಳಿದರು.

ʻʻಹಿಂದು, ಸಿಖ್‌ ಮತ್ತು ಕ್ರೈಸ್ತ ವಿದ್ಯಾರ್ಥಿಗಳಿಗೆ ತಮ್ಮ ಧರ್ಮದ ಸಂಕೇತವನ್ನು ಧರಿಸಿ ತರಗತಿಗೆ ಅನುಮತಿಸುತ್ತಾರೆ, ಆದರೆ ಮುಸ್ಲಿಮರನ್ನು ತಡೆಯುತ್ತಾರೆ. ಮುಸ್ಲಿಮರ ಬಗ್ಗೆ ಅವರೇನು ಅಂದುಕೊಂಡಿರುವರು? ಮುಸ್ಲಿಮರು ನಮಗಿಂತ ಕೆಳಗಿನ ಹಂತದಲ್ಲಿರುವವರೆಂದು,ʼʼ ಎಂದು ಉವೈಸಿ ಹೇಳಿದರು.

ʻʻಹಿಜಾಬ್‌ ಧರಿಸಿದ ಮಹಿಳೆ ದೇಶದ ಪ್ರಧಾನಿಯಾಗಬೇಕೆಂಬುದು ನನ್ನ ಕನಸು. ಅದರಲ್ಲಿ ತಪ್ಪೇನಿದೆ? ಹಿಜಾಬ್‌ ಧರಿಸಬಾರದು ಎಂದು ಹೇಳುತ್ತೀರಿ. ಮತ್ತೇನು ಧರಿಸಬೇಕು? ಬಿಕಿನಿ? ಅದನ್ನೂ ಧರಿಸುವ ಹಕ್ಕಿದೆ. ನಮ್ಮ ಮಕ್ಕಳು ಹಿಜಾಬ್‌ ತೆಗೆಯಬೇಕು ಮತ್ತು ನಾನು ಗಡ್ಡ ಇರಿಸಬಾರದೆಂದು ನೀವೇಕೆ ಬಯಸುತ್ತೀರಿ. ಇಸ್ಲಾಂ ಮತ್ತು ಮುಸ್ಲಿಂ ಸಂಸ್ಕೃತಿ ನನ್ನಲ್ಲಿರಬಾರದೆಂದು ನೀವೇಕೆ ಬಯಸುತ್ತೀರಿ,ʼʼಎಂದು ಅವರು ಕೇಳಿದರು.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಮಾತುಗಳನ್ನು ಉಲ್ಲೇಖಿಸಿದ ಉವೈಸಿ, ಹಿಜಾಬ್‌ ಘನತೆ ಮತ್ತು ಖಾಸಗಿತನದ ವಿಚಾರ ಎಂದರು.

ಬಿಜೆಪಿ ಮತ್ತು ಆರೆಸ್ಸೆಸ್‌ ನಿರ್ಧಾರಗಳ ಬಗ್ಗೆ ಪರಿವೆಯಿಲ್ಲ, ಮುಸ್ಲಿಂ ಹುಡುಗಿಯರು ತಮ್ಮ ಆಯ್ಕೆಯಂತೆ ಹಿಜಾಬ್‌ ಧರಿಸುವರು ಎಂದು ಅವರು ಹೇಳಿದರು. ʻʻಭಾರತದ ಸಂವಿಧಾನ ಅದಕ್ಕೆ ಅನುಮತಿಸುತ್ತದೆ. ನೀವು ನಿಮಗಿಷ್ಟವಾದುದನ್ನು ಧರಿಸಿ, ನಾವು ನಮಗಿಷ್ಟವಾಗಿದ್ದನ್ನು ಧರಿಸುತ್ತೇವೆ,ʼʼ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X