Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಿ ನೋಟಿಫಿಕೇಷನ್ ಆರೋಪ: ಸುಳ್ಳು ಮಾಹಿತಿ...

ಡಿ ನೋಟಿಫಿಕೇಷನ್ ಆರೋಪ: ಸುಳ್ಳು ಮಾಹಿತಿ ಬಿಡುಗಡೆ ಮಾಡಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಿದ್ದರಾಮಯ್ಯ ಒತ್ತಾಯ

''ಬಿಜೆಪಿ ನನ್ನನ್ನು ಗುರಿಯಾಗಿರಿಸಿಕೊಂಡು ಅಪಪ್ರಚಾರ ನಡೆಸುತ್ತಿದೆ''

ವಾರ್ತಾಭಾರತಿವಾರ್ತಾಭಾರತಿ17 Oct 2022 3:42 PM IST
share
ಡಿ ನೋಟಿಫಿಕೇಷನ್ ಆರೋಪ: ಸುಳ್ಳು ಮಾಹಿತಿ ಬಿಡುಗಡೆ ಮಾಡಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ''ಲಾಲ್‍ಭಾಗ್ ಸಿದ್ಧಾಪುರದ ಜಮೀನುಗಳ ಕುರಿತು ಸುಳ್ಳು ಮಾಹಿತಿಯನ್ನು ಬಿಡುಗಡೆ ಮಾಡಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು ಜೊತೆಗೆ 2008 ರಿಂದ ಇದುವರೆಗೆ ಬೆಂಗಳೂರು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ ಮಾಡಿರುವ ಭೂ ಉಪಯೋಗ ಬದಲಾವಣೆಯ [ಚೇಂಜ್ ಆಫ್ ಲ್ಯಾಂಡ್ ಯೂಸ್] ಪ್ರತಿ ಪ್ರಕರಣದ ಮಾಹಿತಿಯನ್ನೂ ಕೂಡಲೆ ಬಿಡುಗಡೆ ಮಾಡಬೇಕು'' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. 

''ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಸಹಿಸದ ಬಿಜೆಪಿಯವರಿಗೆ ಮೆದುಳು ಮತ್ತು ನಾಲಿಗೆಯ ಮಧ್ಯದ ಸಂಪರ್ಕವು ಸಂಪೂರ್ಣ ಕಡಿದು ಹೋಗಿದೆ. ಅದರಲ್ಲೂ ವಿಶೇಷವಾಗಿ ನನ್ನನ್ನು ಗುರಿಯಾಗಿರಿಸಿಕೊಂಡು ಅಪಪ್ರಚಾರ ಪ್ರಾರಂಭಿಸಿದ್ದಾರೆ. ಅದರ ಭಾಗವಾಗಿಯೆ ಕಳೆದ ವಾರ ಬಿಜೆಪಿಯ ಸುಳ್ಳಿನ ಮರಿ ಯಂತ್ರವೊಂದು ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಿದೆಯೆಂದು ಕೆಲವು ಮಾಧ್ಯಮಗಳು ಅದಕ್ಕೆ ಭರಪೂರ ಪ್ರಚಾರ ಕೊಟ್ಟವು'' ಎಂದು ಹೇಳಿದ್ದಾರೆ. 

''ಚುನಾವಣೆ ಹತ್ತಿರಕ್ಕೆ ಬಂದಂತೆಲ್ಲ ಬಿಜೆಪಿಯ ಸುಳ್ಳಿನ ಅಭಿಯಾನ ತೀವ್ರಗೊಳ್ಳುತ್ತದೆ. ಆದ್ದರಿಂದ ಜನರು ಮೆದುಳು ಮತ್ತು ಹೃದಯ ಎರಡನ್ನೂ ಕಳೆದುಕೊಂಡಿರುವ ಬಿಜೆಪಿಯ ಸುಳ್ಳಿನ ಯಂತ್ರಗಳು ಹರಿ ಬಿಡುವ ಮಾತುಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು'' ಎಂದು ಆಗ್ರಹಿಸಿದ್ದಾರೆ.

'''ಕಳೆದ ವಾರ ನಾನು ಪಾದಯಾತ್ರೆಯಲ್ಲಿದ್ದಾಗ ಬಿಜೆಪಿಯವರು ಬಿಡುಗಡೆ ಮಾಡಲಾದ ಮಾಹಿತಿ ಇದು; ಲಾಲ್‍ಭಾಗ್ ಸಿದ್ಧಾಪುರ ಗ್ರಾಮದ ಸರ್ವೆನಂ 27/1, 28/4, 5,6 ರಲ್ಲಿನ 2 ಎಕರೆ 39.5 ಗುಂಟೆ ಜಮೀನನ್ನು ಸಿದ್ದರಾಮಯ್ಯನವರು ಡಿನೋಟಿಫಿಕೇಷನ್ ಮಾಡಿದ್ದಾರೆ, ರೀಡೂ ಮಾಡಿದ್ದಾರೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಹಾಗಿದ್ದರೆ ವಾಸ್ತವ ಸಂಗತಿ ಏನು? ಬಿಡಿಎನಿಂದ ನಾನು ಪಡೆದುಕೊಂಡ ಮಾಹಿತಿ ಪ್ರಕಾರ, ಈ ಜಮೀನುಗಳನ್ನು 1948 ರಲ್ಲಿ  ಕನಕನಪಾಳ್ಯ 8 ನೇ ಬ್ಲಾಕ್‍ಗೆಂದು ಭೂ ಸ್ವಾಧೀನಪಡಿಸಿಕೊಂಡು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಆದರೆ ಯಾವ ಕಾರಣದಿಂದಲೊ ಏನೊ ಸದರಿ ಜಮೀನುಗಳನ್ನು ಭೂಸ್ವಾಧೀನದಿಂದ ಕೈ ಬಿಟ್ಟು 11/2/1954 ಮತ್ತು 28/12/1954 ರ ದಿನಾಂಕಗಳಂದು ‘ದಿ ಮೈಸೂರು ಗೆಜೆಟ್’ ನಲ್ಲಿ ಪ್ರಕಟವಾಗಿದೆಯೆಂಬ ಮಾಹಿತಿ ಇದೆ'' ಎಂದು ತಿಳಿಸಿದ್ದಾರೆ. 

''ಬಿಜೆಪಿಯವರಿಗೆ ಈ ಎಲ್ಲ ವಾಸ್ತವಾಂಶಗಳು ಗೊತ್ತಿದ್ದರೂ ಸಹ ಸುಳ್ಳಿನ ದುರ್ಗಂಧದ ವಿಷವನ್ನು ಜನರ ಮನಸ್ಸಿನಲ್ಲಿ ತುಂಬಲು ಪ್ರಯತ್ನಿಸುತ್ತಿದ್ದಾರೆ. 1954 ರಲ್ಲೆ ಡಿ ನೋಟಿಫಿಕೇಷನ್ ಆಗಿರುವ ಜಮೀನುಗಳನ್ನು ಸಿದ್ದರಾಮಯ್ಯನವರು ಡಿನೋಟಿಫಿಕೇಷನ್ ಮಾಡಿದ್ದಾರೆ ಎನ್ನುವವರು ಎಂಥಾ ನೀಚರು ಹಾಗೂ ಅನೈತಿಕ ವ್ಯಕ್ತಿಗಳು ಎಂಬುದನ್ನು ರಾಜ್ಯದ ಜನ ಅರ್ಥ ಮಾಡಿಕೊಳ್ಳಬೇಕು'' ಎಂದು ತನ್ನ ವಿರುದ್ಧದ ಆರೋಪಗಳಿಗೆ ಸಂಬಂಧಿಸಿ ಸ್ಪಷ್ಟನೆ ನೀಡಿದ್ದಾರೆ. 

''1954 ರಲ್ಲಿ ಈ ಜಮೀನುಗಳನ್ನು ಡಿನೋಟಿಫಿಕೇಷನ್ ಮಾಡಿದ ನಂತರ ಅವು ಸಂಬಂಧಿತ ಭೂ ಮಾಲಿಕರ ಜಮೀನುಗಳಾಗುತ್ತವೆ. ಈ ಜಮೀನುಗಳನ್ನು 2007 ರಲ್ಲಿ ನಗರದ ಮಾಸ್ಟರ್ ಪ್ಲಾನ್ ಮಾಡುವಾಗ [ಆರ್ ಎಂ ಪಿ] ಸದರಿ ಜಾಗವನ್ನು ಪಾರ್ಕಿಗೆಂದು ಗುರ್ತಿಸಲಾಗಿದೆ. ಖಾಸಗಿಯವರ ಜಾಗದಲ್ಲಿ ಪಾರ್ಕು ಮಾಡುವುದಿದ್ದರೆ ಆ ಜಾಗವನ್ನು ಭೂಸ್ವಾಧೀನ ಮಾಡಿಕೊಂಡು ಭೂ ಮಾಲಿಕರಿಗೆ ಪರಿಹಾರ ಕೊಡಬೇಕು. ಬಿಜೆಪಿಯವರೆ ಹೇಳುವ ಪ್ರಕಾರ ಈ ಜಮೀನುಗಳ ಬೆಲೆ 200 ಕೋಟಿ ರೂಪಾಯಿ ಬೆಲೆ ಬಾಳುವುದಿದ್ದರೆ, 3 ಎಕರೆ ಜಾಗವನ್ನು ವಶಪಡಿಸಿಕೊಂಡು ಪಾರ್ಕು ಮಾಡಲು ಬಿಡಿಎ ಬಳಿಯಾಗಲಿ, ಬಿಬಿಎಂಪಿ ಬಳಿಯಾಗಲಿ ಹಣ ಇದೆಯೆ? 2007 ರಲ್ಲಿ ಮಾಡಿದ ಆರ್‍ಎಂಪಿಯು  ಕೆಟಿಸಿಪಿ ಕಾಯ್ದೆಯ ಪ್ರಕಾರ 5 ವರ್ಷಗಳ ಒಳಗೆ ಅನುಷ್ಠಾನಗೊಳ್ಳಬೇಕು.  ಆದರೆ ಬಿಜೆಪಿ ಸರ್ಕಾರವು ಸದರಿ ಜಮೀನುಗಳನ್ನು ಭೂ ಸ್ವಾಧೀನ ಪಡಿಸಿಕೊಂಡು ಪಾರ್ಕು ಮಾಡಲಿಲ್ಲ. ಬದಲಾಗಿ ವಸತಿ ಉದ್ದೇಶಕ್ಕಾಗಿ ಪರಿವರ್ತನೆ ಮಾಡಬಹುದೆಂದು 18/01/2013 ರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ. ಅದಾದ ಮೇಲೆ ಸರ್ಕಾರಕ್ಕೆ 18/02/2014 ರಲ್ಲಿ ಭೂ ಉಪಯೋಗದ ಬದಲಾವಣೆ ಮಾಡಲು ಶಿಫಾರಸ್ಸು ಮಾಡಿದ್ದಾರೆ. ಬಿಡಿಎ ಕಳಿಸಿದ್ದ ಶಿಫಾರಸ್ಸನ್ನು ಪರಿಶೀಲಿಸಿ ದಿನಾಂಕ 18/11/2014 ರಂದು ಭೂ ಉಪಯೋಗವನ್ನು ವಸತಿ ಉದ್ದೇಶಕ್ಕಾಗಿ ಬದಲಾಯಿಸಿ ಅನುಮತಿ ನೀಡಲಾಗಿರುತ್ತದೆ' ಆದರೆ ಸರ್ಕಾರವು ಈ ಜಮೀನುಗಳಿಗೆ ನೀಡಿರುವ  ಭೂ ಉಪಯೋಗವನ್ನು ಬದಲಾಯಿಸಿ ಕೊಟ್ಟದ್ದರ ಬಗ್ಗೆ ಕೆಲವರು ಅಪಸ್ವರ ಎತ್ತಿದ ಕಾರಣಕ್ಕೆ  ಮತ್ತೊಮ್ಮೆ ಮರುಪರಿಶೀಲಿಸಿ ದಿನಾಂಕ 13/3/2015 ರಂದು ವಸತಿ ಉದ್ದೇಶಕ್ಕೆ ನೀಡಿದ್ದ ಅನುಮತಿಯನ್ನು ಹಿಂಪಡೆಯಲಾಗಿದೆ' ಎಂದು ತಿಳಿಸಿದ್ದಾರೆ. 

''ಸರ್ಕಾರ ಭೂ ಉಪಯೋಗ ಬದಲಾವಣೆಯನ್ನು ಹಿಂಪಡೆದ ಕಾರಣಕ್ಕೆ ಅರ್ಜಿದಾರರು ರಾಜ್ಯದ ಗೌರವಾನ್ವಿತ ಉಚ್ಛ ನ್ಯಾಯಾಲಯದಲ್ಲಿ ರಿಟ್ ಪಿಟಿಷನ್ ದಾಖಲಿಸಿದ್ದರು.  ಉಚ್ಛನ್ಯಾಯಾಲಯವು ರಿಟ್ ಪಿಟಿಷನ್ ಸಂ/ 17446-53/2015 ರಲ್ಲಿ  ಸರ್ಕಾರವು ಕೈಗೊಂಡಿದ್ದ ಭೂ ಉಪಯೋಗ ಬದಲಾವಣೆಯ ತೀರ್ಮಾನವನ್ನು ರದ್ದು ಮಾಡಿ ಆದೇಶ ಹೊರಡಿಸಿರುತ್ತದೆ. ಆನಂತರ ಆಕಾಶ್ ರಂಕಾ ಎನ್ನುವವರು ರಿಟ್ ಅಪೀಲನ್ನು ದಾಖಲಿಸಿರುತ್ತಾರೆ. ಉಚ್ಛ ನ್ಯಾಯಾಲಯವು ರಿಟ್ ಅಪೀಲನ್ನೂ ಸಹ ವಜಾ ಮಾಡಿರುತ್ತದೆ. ಅದಾದ ಮೇಲೆ ಉಚ್ಛ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ಎಸ್‍ಎಲ್‍ಪಿ ದಾಖಲಿಸಿದ್ದಾರೆ. ಇದಿಷ್ಟು ವಾಸ್ತವ. ಬಿಜೆಪಿಯವರಿಗೆ ಇದಿಷ್ಟು ಸಂಗತಿ ಗೊತ್ತಿದರೂ ಅಪಪ್ರಚಾರ ಮಾಡುತ್ತಿದ್ದಾರೆ'' ಎಂದು ಆಕ್ರೋಶ ವ್ಯಕ್ತಪಡಸಿದ್ದಾರೆ. 

''ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ 3 ತಿಂಗಳಾಯಿತು. ಆದರೆ ಇದುವರೆಗೂ ಕೂಡ ಸಿಡಿಪಿಗೆ ಅನುಮೋದನೆ ನೀಡಿಲ್ಲ. ಸಿಡಿಪಿಯನ್ನು ಅಂತಿಮಗೊಳಿಸದ ಕಾರಣ ನಗರದ ಬೆಳವಣಿಗೆ ಅಡ್ಡಾದಿಡ್ಡಿಯಾಗಿದೆ. ಆದ್ದರಿಂದ ಕೂಡಲೆ ಸಿಡಿಪಿಯನ್ನು ಅಂತಿಮಗೊಳಿಸಿ ಗೆಜೆಟ್ ಹೊರಡಿಸಬೇಕು'' ಎಂದು ಸಿದ್ದರಾಯ್ಯ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X