Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನಾ ಸೋಂಕಿನ ಪರಿಣಾಮ ಬಡತನದ ಹೆಚ್ಚಳ:...

ಕೊರೋನಾ ಸೋಂಕಿನ ಪರಿಣಾಮ ಬಡತನದ ಹೆಚ್ಚಳ: ವಿಶ್ವಬ್ಯಾಂಕ್

ವಾರ್ತಾಭಾರತಿವಾರ್ತಾಭಾರತಿ17 Oct 2022 10:32 PM IST
share
ಕೊರೋನಾ ಸೋಂಕಿನ ಪರಿಣಾಮ ಬಡತನದ ಹೆಚ್ಚಳ: ವಿಶ್ವಬ್ಯಾಂಕ್

ವಾಷಿಂಗ್ಟನ್, ಅ.17: ಕೊರೋನ ಸೋಂಕು(Corona infection) ಜಗತ್ತನ್ನು ಅಸಮಾನತೆಯ ಹೆಚ್ಚಿನ ಆಳಕ್ಕೆ ಮುಳುಗಿಸಿದ ಜತೆಗೇ, 1990ರ ಬಳಿಕ ಬಡತನದ ಅತೀ ದೊಡ್ಡ ಹೆಚ್ಚಳಕ್ಕೆ ಕಾರಣವಾಗಿದೆ. ಹವಾಮಾನ ಬದಲಾವಣೆಯ ಆಘಾತ ಹಾಗೂ ವಿಶ್ವದಲ್ಲಿ ಅತ್ಯಧಿಕ ಆಹಾರಧಾನ್ಯ ಉತ್ಪಾದಿಸುವ ಎರಡು ದೇಶಗಳ ನಡುವಿನ ಉಕ್ರೇನ್ ಬಿಕ್ಕಟ್ಟು (The Ukraine crisis)ಸಮಸ್ಯೆಯನ್ನು ಮತ್ತಷ್ಟು ಬಿಗಡಾಯಿಸಿದೆ  ಎಂದು ವಿಶ್ವಬ್ಯಾಂಕ್(World Bank) ನ ಇತ್ತೀಚಿನ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜಗತ್ತಿನಲ್ಲಿ ಅತೀ ಹೆಚ್ಚು ಗೋಧಿ ಉತ್ಪಾದಿಸುವ ದೇಶಗಳಾದ ರಶ್ಯ ಮತ್ತು ಉಕ್ರೇನ್ ನಡುವೆ ಯುದ್ಧ ನಡೆಯುತ್ತಿರುವುದರಿಂದ ಆಹಾರ ಧಾನ್ಯಗಳ ಪೂರೈಕೆಗೆ ತಡೆಯಾಗಿದೆ. ಕೊರೋನ ಸಾಂಕ್ರಾಮಿಕವು ಜಾಗತಿಕ ಕಡುಬಡತನದ ದರದಲ್ಲಿ ತೀವ್ರ ಹೆಚ್ಚಳಕ್ಕೆ ಕಾರಣವಾಗಿದ್ದು 2019ರಲ್ಲಿ 8.4%ದಷ್ಟಿದ್ದ ಕಡುಬಡತನದ ಪ್ರಮಾಣ 2020ರಲ್ಲಿ 9.3%ಕ್ಕೆ ಹೆಚ್ಚಿದೆ. ಈ ಹೆಚ್ಚಳದೊಂದಿಗೆ 2020ರ ಅಂತ್ಯದ ವೇಳೆಗೆ ಹೆಚ್ಚುವರಿ 70 ದಶಲಕ್ಷದಷ್ಟು ಜನತೆ ಕಡುಬಡತನದ ವ್ಯಾಪ್ತಿಗೆ ಸೇರಿದ್ದು ಜಾಗತಿಕ ಪ್ರಮಾಣ 700 ದಶಲಕ್ಷಕ್ಕೆ ಹೆಚ್ಚಿದೆ  ಎಂದು  `ಬಡತನ ಮತ್ತು ಸಮೃದ್ಧಿ ಹಂಚಿಕೆ 2022- ಸರಿಪಡಿಸುವ ಕ್ರಮಗಳ ವರದಿ'ಯಲ್ಲಿ ವಿಶ್ವಬ್ಯಾಂಕ್ ಹೇಳಿದೆ.

ಕೊರೋನ ಸಾಂಕ್ರಾಮಿಕದ ಕಾರಣ ದಶಕಗಳಲ್ಲೇ ಪ್ರಥಮ ಬಾರಿಗೆ ಜಾಗತಿಕ ಅಸಮಾನತೆ ಹೆಚ್ಚಿದೆ ಮತ್ತು ಶ್ರೀಮಂತರ ಆದಾಯ ನಷ್ಟಕ್ಕಿಂತ ದುಪ್ಪಟ್ಟು ಪ್ರಮಾಣದಲ್ಲಿ ಬಡವರ ಆದಾಯ ನಷ್ಟವಾಗಿದೆ.  2022 ಎರಡು  ದಶಕಗಳಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಬಡತನ ಕಡಿತದ ವರ್ಷವಾಗಿದ್ದು 2022ರ ಬಳಿಕವೂ ಸುಮಾರು 685 ದಶಲಕ್ಷ ಜನತೆ ಕಡುಬಡತನದ ವ್ಯಾಪ್ತಿಯಲ್ಲಿಯೇ ಮುಂದುವರಿಯಲಿದ್ದಾರೆ.

2019ರಲ್ಲಿ ಜಾಗತಿಕ ಜನಸಂಖ್ಯೆಯ ಸುಮಾರು 47 %ದಷ್ಟು ಜನತೆ  ಜೀವನ ನಿರ್ವಹಣೆಗೆ ಹೆಣಗಾಡಿದ್ದರು. ಈ ಸಮಸ್ಯೆಯನ್ನು ಸರಿಪಡಿಸುವ ಕ್ರಮಗಳಾಗಿ, ವಿತ್ತ ನೀತಿಯಲ್ಲಿ ಮೂರು  ರಚನಾತ್ಮಕ ಬದಲಾವಣೆಯನ್ನು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. 1. ಸಬ್ಸಿಡಿಯ ಬದಲು ಬಡ ಮತ್ತು ದುರ್ಬಲ ವರ್ಗದವರನ್ನು ಗುರಿಯಾಗಿಸಿಕೊಂಡು ನೆರವು ಒದಗಿಸುವುದು, 2. ದೀರ್ಘಾವಧಿಯ ಅಭಿವೃದ್ಧಿಯನ್ನು ಬೆಂಬಲಿಸುವ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸುವುದು ಮತ್ತು 3. ಬಡವರಿಗೆ ತೊಂದರೆಯಾಗದ ರೀತಿಯಲ್ಲಿ ಆದಾಯದ ಕ್ರೋಢೀಕರಣಕ್ಕೆ ಸಲಹೆ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X