Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹೆಬ್ಬಾಳ ಕೆರೆ ಅಭಿವೃದ್ಧಿ ಗುತ್ತಿಗೆ ...

ಹೆಬ್ಬಾಳ ಕೆರೆ ಅಭಿವೃದ್ಧಿ ಗುತ್ತಿಗೆ ಪ್ರಸ್ತಾವನೆ ಹಿಂದೆ ಭ್ರಷ್ಟಾಚಾರದ ಕರಿನೆರಳು

ಜಿ.ಮಹಾಂತೇಶ್ಜಿ.ಮಹಾಂತೇಶ್18 Oct 2022 2:39 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೆಬ್ಬಾಳ ಕೆರೆ ಅಭಿವೃದ್ಧಿ ಗುತ್ತಿಗೆ  ಪ್ರಸ್ತಾವನೆ ಹಿಂದೆ ಭ್ರಷ್ಟಾಚಾರದ ಕರಿನೆರಳು

ಬೆಂಗಳೂರು, ಅ.17: ಈಸ್ಟ್ ಇಂಡಿಯಾ ಹೊಟೇಲ್(ಒಬೆರಾಯ್ ಗ್ರೂಪ್)ಗೆ ಬೆಂಗಳೂರಿನ ಹೆಬ್ಬಾಳ ಕೆರೆ ಅಭಿವೃದ್ಧಿ ಗುತ್ತಿಗೆ ನೀಡಲು ಮಾಡಿರುವ ಶಿಫಾರಸಿನ ಪ್ರಸ್ತಾವನೆ ಹಿಂದೆ ಭ್ರಷ್ಟಾಚಾರ ನಡೆದಿದೆ ಎಂದು ಅರಣ್ಯ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮಹತ್ವದ ಸುಳಿವು ನೀಡಿರುವ ವಿವಿಧ ಕಂಪೆನಿಗಳ ನಿವೃತ್ತ ಅಧಿಕಾರಿಗಳ ಸಮೂಹದ  ರಹಸ್ಯ ಭೇದಕರೊಬ್ಬರು (Whistle Blower) ಕಾರ್ಪೋರೇಟ್ ಕಂಪೆನಿಗಳು ಹೇಗೆ ಅಧಿಕಾರಶಾಹಿಯನ್ನು ಭ್ರಷ್ಟಗೊಳಿಸಿದೆ ಎಂಬುದನ್ನು ಹೊರಗೆಡವಿದ್ದಾರೆ.

 ಗುತ್ತಿಗೆ ನೀಡುವ ಪ್ರಸ್ತಾವನೆಯನ್ನು ಕಂಪೆನಿಯ ಪರವಾಗಿ ಶಿಫಾರಸು ಮಾಡಿರುವ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕಂಪೆನಿಯೇ 45 ಲಕ್ಷ ರೂ. ಲಂಚ ನೀಡಿದೆ ಎಂಬುದಕ್ಕೆ  ಕಂಪೆನಿಯ ಹಿರಿಯ ಅಧಿಕಾರಿಯ ಇ ಮೇಲ್ ಪುರಾವೆಯನ್ನು ಸರಕಾರಕ್ಕೆ ಒದಗಿಸಿದ್ದರು. ಈ ಸಂಬAಧ ನಿವೃತ್ತ ಅಧಿಕಾರಿಗಳ ಸಮೂಹದ  ರಹಸ್ಯ ಭೇದಕರೊಬ್ಬರು (Whistle Blower) ಅರಣ್ಯ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಲಿಖಿತ ದೂರನ್ನು ಸಲ್ಲಿಸಿದ್ದಾರೆ. ಈ ದೂರನ್ನಾಧರಿಸಿ ಅರಣ್ಯ ಇಲಾಖೆಯು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.  ಈ ದೂರಿನ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

 ಹೆಬ್ಬಾಳ ಕೆರೆ ನಿರ್ವಹಣೆ ಸಂಬಂಧ ನ್ಯಾಯಾಲಯದಲ್ಲಿ ಕಾನೂನು ಸಮರ ನಡೆಯುತ್ತಿದ್ದ ಹೊತ್ತಿನಲ್ಲಿಯೇ ಅರಣ್ಯ ಇಲಾಖೆಯ ಅಧಿಕಾರಿಗಳು ಕೆರೆಯನ್ನು 15 ವರ್ಷಗಳ ಕಾಲ ನಿರ್ವಹಣೆಗಾಗಿ ಈಸ್ಟ್ ಇಂಡಿಯಾ ಹೊಟೇಲ್ಸ್ ಲಿಮಿಟೆಡ್‌ನೊಂದಿಗೆ ಗುತ್ತಿಗೆ ಒಪ್ಪಂದವನ್ನು ನವೀಕರಿಸಲು ಶಿಫಾರಸು ಮಾಡಲಾಗಿತ್ತು. ಇದಕ್ಕೆ ಸಹಕರಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ 45 ಲಕ್ಷ ರೂ. ನೀಡಲು ಕಂಪೆನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಪಿ.ಆರ್.ಎಸ್. ಒಬೆರಾಯ್ ಅವರು ಅನುಮತಿ ನೀಡಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿದೆ.

ಭೂಪಸಂದ್ರ ರಸ್ತೆಯ ಬಳಿ ಇರುವ ಈಸ್ಟ್ ಇಂಡಿಯಾ ಹೊಟೇಲ್‌ಗೆ ಕೆರೆ ನಿರ್ವಹಣೆ ಗುತ್ತಿಗೆ ನೀಡಿದರೆ ಅಲ್ಲಿ ಹೊಟೇಲ್, ರಿಯಲ್ ಎಸ್ಟೇಟ್‌ನಂತಹ ವಾಣಿಜ್ಯ ಚಟುವಟಿಕೆ ನಡೆಯಲಿದೆ. ಸಮಾಜ ಸೇವೆ ಭಾಗವಾಗಿಯೇ ಕೆರೆ ನಿರ್ವಹಣೆ ಮಾಡಲಾಗುತ್ತದೆ ಎಂದು ಕಂಪೆನಿಯು ಎಷ್ಟೇ ಸಮಜಾಯಿಷಿ ನೀಡಿದರೂ ಅದು ವಾಣಿಜ್ಯ ಉದ್ದೇಶದ ಚಟುವಟಕೆಗಳು ನಡೆಯಲಿದೆ ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಜುಲೈ 2021ರಲ್ಲಿ ಹಣ ನೀಡಲಾಗಿದೆ. ಇದಕ್ಕೆ  ಒಬೆರಾಯ್ ಅವರ ಕೈ ಬರವಣಿಗೆ ಮತ್ತು ಅವರ ಸಹಿ ಕೂಡ ಇದೆ. ಸಿಸಿಟಿವಿ ದೃಶ್ಯಾವಳಿಗಳು ನಮ್ಮ ಬಳಿ ಇದೆ. ವಿವಿಧ ಕಂಪೆನಿಗಳಲ್ಲಿ ಸೇವೆ ಸಲ್ಲಿಸಿರುವ ನಿವೃತ್ತ ಉದ್ಯೋಗಿಗಳ ಗುಂಪು ನಮ್ಮದಾಗಿದೆ. ನಾವು ಹಲವು ರಾಜ್ಯಗಳ ಕಾರ್ಪೋರೇಟ್ ಮತ್ತು ಅಧಿಕಾರಿಶಾಹಿಯೊಂದಿಗಿನ ಸಂಬಂಧವನ್ನು ಹೊರಗೆಡವುತ್ತಿದ್ದೇವೆ. ಹರ್ಯಾಣ ಮತ್ತು ಮೇಘಾಲಯದಲ್ಲಿ ಕಾರ್ಪೊರೇಟ್ ಮತ್ತು ಅಧಿಕಾರಿಶಾಹಿಯು ಕೈಜೋಡಿಸಿರುವುದನ್ನು ಈಗಾಗಲೇ ಹೊರಗೆಳೆದಿದ್ದೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ದಾಖಲಿಸಿದ್ದೇವೆ ಎಂದು ಅರಣ್ಯ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಬರೆದಿರುವ ದೂರಿನಲ್ಲಿ ವಿವರಿಸಲಾಗಿದೆ.

 ಅರಣ್ಯ ಇಲಾಖೆಯು ಇತ್ತೀಚೆಗೆ ಲುಂಬಿನಿ ಗಾರ್ಡನ್ಸ್ ಪ್ರೈವೇಟ್ ಲಿಮಿಟೆಡ್‌ಗೆ ನಿರ್ವಹಣೆಗಾಗಿ ನೀಡಲಾದ ಇದೇ ರೀತಿಯ ಗುತ್ತಿಗೆಯನ್ನು ನವೀಕರಿಸಲಾಗಿತ್ತು. ಇದರ ವಿರುದ್ಧ ಸಿವಿಲ್ ಮತ್ತು ಹೈಕೋರ್ಟ್ನಲ್ಲಿ ಕಾನೂನು ಸಮರ ನಡೆದಿತ್ತು. ಅವಧಿ ಮುಗಿದ ಗುತ್ತಿಗೆಯ ಕಾನೂನು ಬದ್ಧತೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ.

 ಈಸ್ಟ್ ಇಂಡಿಯಾ ಹೊಟೇಲ್ಸ್ ಲಿಮಿಟೆಡ್(ಒಬೆರಾಯ್ ಗ್ರೂಪ್ ಆಫ್ ಹೋಟೆಲ್ಸ್) ಹೆಬ್ಬಾಳ ಕೆರೆಯನ್ನು ಅಭಿವೃದ್ಧಿಪಡಿಸಲು ಕೆರೆ ಅಭಿವೃದ್ಧಿ ಪ್ರಾಧಿಕಾರದ ಜೊತೆ(ಐಆಂ)ಯಿAದ  2006ರಲ್ಲಿ ಒಪ್ಪಂದ ಮಾಡಿಕೊಂಡಿತ್ತು. ಈ ಯೋಜನೆಯಡಿ ಕೆರೆಯನ್ನು ವಾರ್ಷಿಕ 72 ಲಕ್ಷ ರೂ.ಗೆ 15 ವರ್ಷಗಳ ಅವಧಿಗೆ ಗುತ್ತಿಗೆಗೆ ನೀಡಲಾಗಿದೆ.

ಹೆಬ್ಬಾಳ ಕೆರೆಯನ್ನು ಒಬೆರಾಯ್ ಗ್ರೂಪ್ ಆಫ್ ಹೊಟೇಲ್‌ಗಳ ಈಸ್ಟ್ ಇಂಡಿಯಾ ಹೊಟೇಲ್, ನಾಗವಾರ ಕೆರೆಯನ್ನು ಲುಂಬಿನಿ ಬಿಲ್ಡರ್ಸ್ಗೆ, ಅಗರ ಕೆರೆಯನ್ನು ಬಯೋಟಾ ಕಂಪೆನಿಗೆ ಮತ್ತು ವೆಂಗಯ್ಯ ಕೆರೆಯನ್ನು ಬೆಂಗಳೂರಿನ ಬಿಲ್ಡರ್ ಒಬ್ಬರಿಗೆ ಗುತ್ತಿಗೆ ನೀಡಲಾಗಿದೆ. ಈ  ಒಪ್ಪಂದದ ಅಡಿಯಲ್ಲಿ ಡೆವಲಪರ್‌ಗಳು ರೆಸ್ಟೋರೆಂಟ್‌ಗಳನ್ನು ನಿರ್ಮಿಸಬಹುದು ಮತ್ತು ಜಲ ಕ್ರೀಡೆಗಳು ಮತ್ತು ಫುಡ್ ಕೋರ್ಟ್ಗಳನ್ನು ಅಭಿವೃದ್ಧಿಪಡಿಸಬಹುದು.

ಫುಡ್ ಕೋರ್ಟ್ಗಳು ಮತ್ತು ಅಮ್ಯೂಸ್ಮೆಂಟ್ ಪಾರ್ಕ್ಗಳ ಮಧ್ಯೆ ನಾಗವಾರ ಸರೋವರವು ಈಗಾಗಲೇ ಬಹುತೇಕ ಕಣ್ಮರೆಯಾಗಿದೆ. ಹೆಬ್ಬಾಳ ಕೆರೆಯಲ್ಲಿ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಅಲ್ಲಿ ಜಲಕ್ರೀಡೆ ಚಟುವಟಿಕೆಗಳು ಮತ್ತು ಜಾಗಿಂಗ್ ಪ್ರದೇಶವು ಸೇರಿದೆ. ಎರಡೂ ಕೆರೆಗಳ ಪ್ರವೇಶಕ್ಕೆ ಶುಲ್ಕ ವಿಧಿಸಲಾಗುತ್ತದೆ ಎಂದು ಪರಿಸರ ತಜ್ಞರೊಬ್ಬರು ತಿಳಿಸಿದ್ದಾರೆ.

​

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X