Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೆಂಗಳೂರಿಗೆ ಮೊದಲ ಬಾರಿ ಬಂದಿಳಿದ ವಿಶ್ವದ...

ಬೆಂಗಳೂರಿಗೆ ಮೊದಲ ಬಾರಿ ಬಂದಿಳಿದ ವಿಶ್ವದ ಅತಿದೊಡ್ಡ ವಿಮಾನದ ಪೈಲೆಟ್ ಉಡುಪಿ ಮೂಲದ ಸಂದೀಪ್ ಪ್ರಭು !

ವಾರ್ತಾಭಾರತಿವಾರ್ತಾಭಾರತಿ18 Oct 2022 8:17 PM IST
share
ಬೆಂಗಳೂರಿಗೆ ಮೊದಲ ಬಾರಿ ಬಂದಿಳಿದ ವಿಶ್ವದ ಅತಿದೊಡ್ಡ ವಿಮಾನದ ಪೈಲೆಟ್ ಉಡುಪಿ ಮೂಲದ ಸಂದೀಪ್ ಪ್ರಭು !

ಉಡುಪಿ, ಅ.18: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ಅ.14ರಂದು ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಭೂಸ್ಪರ್ಶ ಮಾಡಿದ ವಿಶ್ವದ ಅತಿ ದೊಡ್ಡ ವಿಮಾನ ಎಮಿರೇಟ್ಸ್ ಎ380 ಇದರ ಪೈಲಟ್ ಉಡುಪಿ ಮೂಲದ ಸಂದೀಪ್ ಪ್ರಭು ಇದೀಗ ಸುದ್ದಿಯಲ್ಲಿದ್ದಾರೆ.

ದುಬೈ ಎಮಿರೇಟ್ಸ್‌ನಲ್ಲಿ ಪೈಲಟ್ ಆಗಿರುವ ಸಂದೀಪ್ ಪ್ರಭು, ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಶ್ವದ ಅತಿದೊಡ್ಡ ಪ್ರಯಾಣಿಕ ವಿಮಾನ ಎಮಿರೇಟ್ಸ್ ಏರ್‌ಬಸ್- ಎ380 ಇದರ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ನಿಭಾಯಿಸಿ ಸಾಕಷ್ಟು ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಉಡುಪಿ ಜಿಲ್ಲೆಯ ಅಲೆವೂರು ಮೂಲದ ಶಿವರಾಯ ಪ್ರಭು ಹಾಗೂ ಆರತಿ ಪ್ರಭು ದಂಪತಿ ಪುತ್ರ ಸಂದೀಪ್ ಪ್ರಭು ಕಳೆದ 15 ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಂದೀಪ್ ಪ್ರಭು ಏಳನೆ ತರಗತಿಯವರೆಗೆ ಮಂಗಳೂರಿನ ಅಲೋಷಿಯಸ್‌ನಲ್ಲಿ, ಬಳಿಕ ಎಂಟನೇ ತರಗತಿ ಮೈಸೂರು, ಅದರ ನಂತರ ಬೆಂಗಳೂರಿನಲ್ಲಿ ಶಿಕ್ಷಣ ಪಡೆದರು. ಫಿಲಿಫೈನ್ಸ್ ಹಾಗೂ ದೆಹಲಿಯಲ್ಲಿ ಪೈಲೆಟ್ ಶಿಕ್ಷಣ ಹಾಗೂ ತರಬೇತಿ ಪಡೆದ ಇವರು, ಫ್ರಾನ್ಸ್‌ನಲ್ಲಿ ಉನ್ನತ ಕೋರ್ಸ್ ಮುಗಿಸಿದರು. ಬಳಿಕ ಅವರು ದುಬೈ ಎಮಿರೇಟ್ಸ್‌ನಲ್ಲಿ ಉದ್ಯೋಗಿ ಯಾಗಿ ಸೇರಿಕೊಂಡರು.

ಕನ್ನಡದಲ್ಲೇ ಸ್ವಾಗತ: ವಿಶ್ವದ ಅತಿ ದೊಡ್ಡ ವಿಮಾನ ಎಮಿರೇಟ್ಸ್ ಎ380 ಬೆಂಗಳೂರಿನಲ್ಲಿ ಮೊದಲ ಬಾರಿಗೆ ಭೂಸ್ಪರ್ಶ ಮಾಡಿದ ಸಂದರ್ಭದಲ್ಲಿ ಪೈಲಟ್ ಸಂದೀಪ್ ಪ್ರಭು, ಕನ್ನಡದಲ್ಲೇ ಸ್ವಾಗತ ಕೋರಿರುವುದು ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ.

ಈ ಬಗ್ಗೆ "ವಾರ್ತಾಭಾರತಿ" ಜೊತೆ ಮಾತನಾಡಿದ ಸಂದೀಪ್ ಪ್ರಭು ಅವರ ತಂದೆ ಶಿವರಾಯ ಪ್ರಭು, ನಮ್ಮ ಮಗ ಕನ್ನಡದಲ್ಲಿ ಸ್ವಾಗತ ಕೋರಿರುವ ವಿಚಾರ ನಮ್ಮ ಜೊತೆ ಹಂಚಿಕೊಂಡು ತುಂಬಾ ಸಂತೋಷ ಪಟ್ಟಿದ್ದಾನೆ. ಸ್ವಾಗತ ಕೋರಿದ ಸಂದರ್ಭದಲ್ಲಿ ಪ್ರಯಾಣಿಕರು ಎದ್ದು ನಿಂತು ಚಪ್ಪಲೆ ತಟ್ಟಿರುವ ಅಪೂರ್ವ ಕ್ಷಣವನ್ನು ಕೂಡ ಆತ ನಮ್ಮೊಂದಿಗೆ ಹೇಳಿಕೊಂಡಿದ್ದಾನೆ. ನನ್ನ ಮಗನ ಈ ಕಾರ್ಯಕ್ಕೆ ಇನ್ಫೋಸಿಸ್‌ನ ಮೋಹನ್‌ ದಾಸ್ ಪೈ ಸೇರಿದಂತೆ 10-20ಸಾವಿರ ಕ್ಕೂ ಅಧಿಕ ಮಂದಿ ಅಭಿನಂದನೆ ಸಲ್ಲಿಸಿದ್ದಾರೆ. ಅವನಿಗೆ ಇಂತಹ ಒಂದು ಅವಕಾಶ ಸಿಗುತ್ತದೆ ಎಂಬುದು ಗೊತ್ತೆ ಇರಲಿಲ್ಲ ಎಂದರು.

ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಮಗ ಉದ್ಯೋಗ ಕಳೆದುಕೊಂಡನು. ಆಗ ಅವನಿಗೆ ಮದುವೆ ಕೂಡ ಆಯಿತು. ಮದುವೆ ಆದ ಒಂದು ವರ್ಷದಲ್ಲಿ ಮತ್ತೆ ಕಂಪೆನಿಯು ಆತನನ್ನು ಕೆಲಸಕ್ಕೆ ಸೇರಿಸಿಕೊಂಡಿತು. ಇದೀಗ ಅವನಿಗೆ ಒಳ್ಳೆಯ ಆಫರ್ ಬರುತ್ತಿದೆ ಎಂದು ಅವರು ಹೇಳಿದರು.

ಶಿವರಾಮ ಪ್ರಭು ಉಡುಪಿ ಎಂಜಿಎಂ ಕಾಲೇಜಿನ ಹಳೆಯ ವಿದ್ಯಾರ್ಥಿ ಯಾಗಿದ್ದು, ಮಂಗಳೂರಿನ ಎಜೆ ಗ್ರೂಪ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ರಾಜೀವ ಗಾಂಧಿ ಆರೋಗ್ಯ ವಿವಿಯ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿ ದ್ದರು. ಇವರ ಹಿರಿಯ ಮಗ ಸತ್ಯೇಂದ್ರ ಪ್ರಭು ಇಂಜಿನಿಯರ್ ಆಗಿದ್ದು, ಪತ್ನಿ ಆರತಿ ಕಾರ್ಪೊರೇಟ್ ಇನ್ಸೂರೆನ್ಸ್ ಕೆಲಸ ಮಾಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X