Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. `ಆರ್ಥಿಕ ಪ್ರಮಾದಕ್ಕೆ' ಕ್ಷಮೆ ಯಾಚಿಸಿದ...

`ಆರ್ಥಿಕ ಪ್ರಮಾದಕ್ಕೆ' ಕ್ಷಮೆ ಯಾಚಿಸಿದ ಬ್ರಿಟನ್‌ ಪ್ರಧಾನಿ ಲಿಝ್ ಟ್ರಸ್

ವಾರ್ತಾಭಾರತಿವಾರ್ತಾಭಾರತಿ18 Oct 2022 9:01 PM IST
share
`ಆರ್ಥಿಕ ಪ್ರಮಾದಕ್ಕೆ ಕ್ಷಮೆ ಯಾಚಿಸಿದ ಬ್ರಿಟನ್‌ ಪ್ರಧಾನಿ ಲಿಝ್ ಟ್ರಸ್

ಲಂಡನ್, ಅ.18: ತೆರಿಗೆ ಸುಧಾರಣೆಗೆ ಸಂಬಂಧಿಸಿದ ಅವಸರದ ನಿರ್ಧಾರಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಬ್ರಿಟನ್ ಪ್ರಧಾನಿ ಲಿಝ್ ಟ್ರಸ್(Liz Truss), ತನ್ನ ಪ್ರಮಾದಗಳಿಗೆ ಕ್ಷಮೆ ಯಾಚಿಸಿದ್ದಾರೆ. ತನ್ನ ಒಂದು ತಿಂಗಳಾವಧಿಯ ನಾಯಕತ್ವ ಪರಿಪೂರ್ಣವಾಗಿಲ್ಲ, ಆದರೆ ಎಲ್ಲಿ ತಪ್ಪಾಗಿದೆ ಎಂಬುದನ್ನು ಅರಿತುಕೊಂಡಿರುವ ಕಾರಣ ಸುಧಾರಣೆಗೆ ಅವಕಾಶವಿದೆ ಎಂದವರು ಹೇಳಿದ್ದಾರೆ.

ದೇಶಕ್ಕೆ ಎದುರಾಗಿರುವ ಬಿಕ್ಕಟ್ಟನ್ನು ನಿರ್ವಹಿಸಿದ ರೀತಿಗೆ ಮಾಧ್ಯಮದ ಟೀಕಾಪ್ರಹಾರಕ್ಕೆ ಗುರಿಯಾಗಿರುವ ಟ್ರಸ್, ಕಳೆದ ತಿಂಗಳು ಘೋಷಿಸಿದ ತೆರಿಗೆ ಸುಧಾರಣೆಯ ಕ್ರಮಗಳನ್ನು ಅವರ ಸರಕಾರ ಸೋಮವಾರ ರದ್ದುಗೊಳಿಸಿದೆ.

ಈ ದೇಶಕ್ಕೆ ಸೇವೆ ಸಲ್ಲಿಸಲು ನಾನು ಚುನಾಯಿತನಾಗಿರುವುದರಿಂದ ಕರ್ತವ್ಯದಿಂದ ವಿಮುಖನಾಗುವುದಿಲ್ಲ ಮತ್ತು ಸೇವೆ ಮುಂದುವರಿಸಲು ನಿರ್ಧರಿಸಿದ್ದೇನೆ. ತಪ್ಪನ್ನು ಅರಿತುಕೊಂಡು ಸಾಗುವ ಮಾರ್ಗವನ್ನು ಬದಲಾಯಿಸದಿರುವುದು ಬೇಜವಾಬ್ದಾರಿಯ ಕೃತ್ಯವಾಗಲಿದೆ. ಸಾಗುವ ದಿಕ್ಕನ್ನು ಬದಲಾಯಿಸಬೇಕು ಎಂದು ಅರಿತುಕೊಂಡ ಕಾರಣ ವಿತ್ತಸಚಿವರನ್ನು ಬದಲಾಯಿಸಲಾಗಿದೆ.

ನನ್ನ ದೃಷ್ಟಿಕೋನಕ್ಕೆ ಈಗಲೂ ಬದ್ಧಳಾಗಿದ್ದೇನೆ, ಆದರೆ ಹೊಸ ಕಾರ್ಯತಂತ್ರದೊಂದಿಗೆ ಮುಂದುವರಿಯಲಿದ್ದೇನೆ  ಎಂದು ಟ್ರಸ್ ಹೇಳಿದ್ದಾರೆ. ಶುಕ್ರವಾರ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದ ನೂತನ ವಿತ್ತಸಚಿವ ಜೆರೆಮಿ ಹಂಟ್ (Jeremy Hunt)` ಮೂರು ವಾರಗಳ ಹಿಂದೆ ಬೆಳವಣಿಗೆಯ ಯೋಜನೆಯಲ್ಲಿ ಘೋಷಿಸಲಾದ ಬಹುತೇಕ ಎಲ್ಲಾ ತೆರಿಗೆ ಕ್ರಮಗಳನ್ನೂ ರದ್ದುಗೊಳಿಸಲು ಪ್ರಧಾನಮಂತ್ರಿ ಮತ್ತು ನಾನು ನಿನ್ನೆ ಒಪ್ಪಿಕೊಂಡೆವು' ಎಂದಿದ್ದರು. ಈ ನಿರ್ಧಾರವನ್ನು ಹೂಡಿಕೆದಾರರು ಸ್ವಾಗತಿಸಿದ್ದಾರೆ. ನಾಲ್ವರು ಸ್ವತಂತ್ರ ಸದಸ್ಯರನ್ನೂ ಒಳಗೊಂಡ ಆರ್ಥಿಕ ಸಲಹಾ ಸಮಿತಿಯನ್ನು ರಚಿಸುವುದಾಗಿಯೂ ಹಂಟ್ ಘೋಷಿಸಿದ್ದಾರೆ. ಎರಡು ಮುಜುಗುರದ ಬಜೆಟ್ ಯು-ಟರ್ನ್‍ನ ನಂತರ  ಟ್ರಸ್ ರಾಜೀನಾಮೆಯ ಆಗ್ರಹಕ್ಕೆ  ಈಗ  ಪಕ್ಷದ ಕೆಲವು ಸಂಸದರೂ ಧ್ವನಿಗೂಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X