Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸ್ವಾಧೀನಕ್ಕೆ ಪಡೆದ ಉಕ್ರೇನ್‍ನ...

ಸ್ವಾಧೀನಕ್ಕೆ ಪಡೆದ ಉಕ್ರೇನ್‍ನ ಪ್ರದೇಶಗಳಿಗೆ ಪರಮಾಣು ಬಲದ ರಕ್ಷಣೆ: ರಶ್ಯ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ18 Oct 2022 3:44 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸ್ವಾಧೀನಕ್ಕೆ ಪಡೆದ ಉಕ್ರೇನ್‍ನ ಪ್ರದೇಶಗಳಿಗೆ ಪರಮಾಣು ಬಲದ ರಕ್ಷಣೆ: ರಶ್ಯ ಘೋಷಣೆ

ಮಾಸ್ಕೋ, ಅ.18: ಉಕ್ರೇನ್‍ನಿಂದ ವಶಪಡಿಸಿಕೊಂಡು ಕಳೆದ ತಿಂಗಳು ಅಧಿಕೃತವಾಗಿ ಸ್ವಾಧೀನಕ್ಕೆ ಪಡೆದಿರುವ 4 ಪ್ರಾಂತಗಳು ತನ್ನ ಪರಮಾಣು ಶಸ್ತ್ರಾಸ್ತ್ರಗಳ(Nuclear weapons) ರಕ್ಷಣೆಯಲ್ಲಿವೆ ಎಂದು ರಶ್ಯ ಮಂಗಳವಾರ ಹೇಳಿದೆ.

ನೇಟೊ ಹಾಗೂ ರಶ್ಯ(NATO and Russia)ಗಳು ತಮ್ಮ ಪರಮಾಣು ಬತ್ತಳಿಕೆಯ ಅಸ್ತ್ರಗಳ ಸನ್ನದ್ಧತೆಯನ್ನು ಪರೀಕ್ಷೆ ಮಾಡಲು ಸೇನಾ ಸಮರಾಭ್ಯಾಸ ನಡೆಸಿವೆ ಎಂಬ ವರದಿಯ ಬೆನ್ನಲ್ಲೇ ರಶ್ಯದ ಈ ಹೇಳಿಕೆ ಹೊರಬಿದ್ದಿದೆ. ಈ ಎಲ್ಲಾ ಪ್ರದೇಶಗಳೂ ರಶ್ಯದ ಅವಿಭಾಜ್ಯ ಪ್ರದೇಶಗಳಾಗಿವೆ ಮತ್ತು ಅವೆಲ್ಲವನ್ನೂ ರಕ್ಷಿಸಲಾಗಿದೆ. ರಶ್ಯದ ಇತರ ಪ್ರದೇಶಗಳಂತೆಯೇ ಈ ನಾಲ್ಕೂ ಪ್ರಾಂತಗಳಿಗೆ ಪರಮಾಣು ಭದ್ರತೆಯನ್ನು ಒದಗಿಸಲಾಗಿದೆ ಎಂದು ರಶ್ಯ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ.

ನೇಟೊ ಈ ವಾರ ಪರಮಾಣು ಸನ್ನದ್ಧತೆಯ ಕವಾಯತು ನಡೆಸಿದ್ದು, ರಶ್ಯ ಕೂಡಾ ಇಂತಹ ಸಮರಾಭ್ಯಾಸ ನಡೆಸುವ ನಿರೀಕ್ಷೆಯಿದೆ ಎಂದು ನೇಟೊ ವಕ್ತಾರರು ಹೇಳಿದ್ದರು. ಈ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದಿರುವ ಪೆಸ್ಕೋವ್(Peskov), ಸಮರಾಭ್ಯಾಸಗಳ ಬಗ್ಗೆ ತಿಳಿಸಲು ಸ್ಥಾಪಿತ ಅಧಿಸೂಚನೆಯ ವ್ಯವಸ್ಥೆಯಿದೆ ಮತ್ತು ಇದನ್ನು ರಕ್ಷಣಾ ಸಚಿವಾಲಯದ ಮೂಲಗಳ ಮೂಲಕ ನಡೆಸಲಾಗುತ್ತದೆ ಎಂದಿದ್ದಾರೆ. ಉಕ್ರೇನ್‍ನಿಂದ ವಶಕ್ಕೆ ಪಡೆದಿರುವ ನಾಲ್ಕು ಪ್ರಾಂತಗಳು ಎಂದೆಂದಿಗೂ ರಶ್ಯದ ಭಾಗವಾಗಿ ಇರಲಿದೆ ಎಂದು ಪುಟಿನ್ ಕಳೆದ ವಾರ ಪ್ರತಿಪಾದಿಸಿದ್ದರು. ಆದರೆ ಈ ಪ್ರಾಂತಗಳ ಗಡಿಯನ್ನು ಇನ್ನೂ ಸ್ಪಷ್ಟವಾಗಿ ಗುರುತಿಸದ ಕಾರಣ ರಶ್ಯ ಇವುಗಳ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿಲ್ಲ. ಇವುಗಳನ್ನು ರಶ್ಯದ ಕಾನೂನು, ಆರ್ಥಿಕ ಮತ್ತು ಭದ್ರತಾ ವ್ಯವಸ್ಥೆಯೊಳಗೆ ಸಂಯೋಜಿಸುವ ಕಾರ್ಯ ಇನ್ನೂ ಪ್ರಗತಿಯಲ್ಲಿದೆ ಎಂದು ಪೆಸ್ಕೋವ್ ಹೇಳಿದ್ದಾರೆ.

ರಶ್ಯದ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಿಕೊಳ್ಳಲು ಅಗತ್ಯಬಿದ್ದರೆ ಪರಮಾಣು ಅಸ್ತ್ರ ಬಳಸಲೂ ಹಿಂಜರಿಯುವುದಿಲ್ಲ ಎಂದು ಕಳೆದ ತಿಂಗಳು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದರು. ಪುಟಿನ್ ಬೆದರಿಕೆ ಜಗತ್ತನ್ನು ವಿಪತ್ತಿನ ಅಂಚಿಗೆ ತಂದಿದ್ದು , ಪರಮಾಣು ಯುದ್ಧ ಸನ್ನಿಹಿತವಾಗಿದೆ ಎಂಬ ಭೀತಿ ಹಲವರಲ್ಲಿ ಮೂಡಿದೆ ಎಂದು ಅಮೆರಿಕ ಅಧ್ಯಕ್ಷ ಬೈಡನ್ ಪ್ರತಿಕ್ರಿಯಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X