ಬೆಳಗಾವಿ: ಎಸೆಸೆಲ್ಸಿ ವಿದ್ಯಾರ್ಥಿಯ ಹತ್ಯೆ
![ಬೆಳಗಾವಿ: ಎಸೆಸೆಲ್ಸಿ ವಿದ್ಯಾರ್ಥಿಯ ಹತ್ಯೆ ಬೆಳಗಾವಿ: ಎಸೆಸೆಲ್ಸಿ ವಿದ್ಯಾರ್ಥಿಯ ಹತ್ಯೆ](https://www.varthabharati.in/sites/default/files/images/articles/2022/10/20/353620-1666259884.jpg)
ಬೆಳಗಾವಿ: ಎಸೆಸೆಲ್ಸಿ (SSLC) ವಿದ್ಯಾರ್ಥಿಯೋರ್ವನನ್ನು ಮಾರಕಾಸ್ತ್ರಗಳಿಂದ ಇರಿದು, ಕೊಲೆ ಮಾಡಿರುವ ಘಟನೆ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ವರದಿಯಾಗಿದೆ.
ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಹತ್ಯೆಗೀಡಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಈ ವಿದ್ಯಾರ್ಥಿ ನಾಪತ್ತೆಯಾದ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಗುರುವಾರ ಅರೆಬೆತ್ತಲೆ ಸ್ಥಿತಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಈತ ಧರಿಸಿದ್ದ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ ಎನ್ನಲಾಗಿದೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story