Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್: ಪ್ರಧಾನಿ ಹುದ್ದೆಗೆ ನೂತನ...

ಬ್ರಿಟನ್: ಪ್ರಧಾನಿ ಹುದ್ದೆಗೆ ನೂತನ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ21 Oct 2022 10:32 PM IST
share
ಬ್ರಿಟನ್: ಪ್ರಧಾನಿ ಹುದ್ದೆಗೆ ನೂತನ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಲಂಡನ್, ಅ.21: ತಕ್ಷಣ ಸಾರ್ವತ್ರಿಕ ಚುನಾವಣೆ ನಡೆಸಬೇಕು ಎಂಬ ಆಗ್ರಹ ಹೆಚ್ಚುತ್ತಿರುವಂತೆಯೇ ಪ್ರಧಾನಿ ಹುದ್ದೆಗೆ ನೂತನ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಗೆ ಬ್ರಿಟನ್ನ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷ ಚಾಲನೆ (The Brick Conservative Party is running)ನೀಡಿದೆ ಎಂದು ವರದಿಯಾಗಿದೆ.

ಬೋರಿಸ್ ಜಾನ್ಸನ್ (Boris Johnson)ಪ್ರಧಾನಿ ಹುದ್ದೆಯಿಂದ ನಿರ್ಗಮಿಸಿದ 2 ತಿಂಗಳೊಳಗೆ ಕನ್ಸರ್ವೇಟಿವ್ ಪಕ್ಷ ಎರಡನೇ ಬಾರಿಗೆ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅನಿವಾರ್ಯತೆಗೆ ಸಿಲುಕಿದೆ. ರಿಷಿ ಸುನಾಕ್ (Rishi Sunak)ಅವರೆದುರಿನ ಸ್ಪರ್ಧೆಯಲ್ಲಿ ಗೆಲುವಿನ ನಗೆ ಬೀರಿದ್ದ  ಲಿಝ್ ಟ್ರಸ್(Liz Truss) ತನ್ನ ವಿಫಲ ಆರ್ಥಿಕ ನೀತಿಯಿಂದಾಗಿ ತೀವ್ರ ಒತ್ತಡಕ್ಕೆ ಸಿಲುಕಿ 45 ದಿನದಲ್ಲೇ ಅಧಿಕಾರದಿಂದ ನಿರ್ಗಮಿಸಿರುವುದು ಕನ್ಸರ್ವೇಟಿವ್ ಪಕ್ಷವನ್ನು ಮುಜುಗುರಕ್ಕೆ ಸಿಲುಕಿಸಿದೆ. ಸುನಾಕ್ ಎದುರಿಗಿನ ಪೈಪೋಟಿಯಲ್ಲಿ  ಟ್ರಸ್ ಮೇಲುಗೈ ಸಾಧಿಸಿದ ಸಂದರ್ಭ ಪ್ರಕಟವಾಗಿದ್ದ `ಯೂಗವ್' ಸಮೀಕ್ಷೆಯ ಪ್ರಕಾರ ಟ್ರಸ್ ಉತ್ತಮ  ಪ್ರಧಾನಿಯಾಗಿರುತ್ತಾರೆ ಎಂದು 12% ಜನತೆ ಅಭಿಪ್ರಾಯಪಟ್ಟಿದ್ದರೆ, 52% ಮಂದಿ ಅವರು ಈ ಹುದ್ದೆಗೆ ಸೂಕ್ತವಲ್ಲ ಅಥವಾ ಕಳಪೆ ಎಂದು ಉತ್ತರಿಸಿದ್ದರು.

ಬುಧವಾರ (ಟ್ರಸ್ ರಾಜೀನಾಮೆ ಘೋಷಣೆಗೆ ಹಿಂದಿನ ದಿನ) ಇದೇ ಸಂಸ್ಥೆ ಪ್ರಕಟಿಸಿದ್ದ ಸಮೀಕ್ಷೆಯಲ್ಲಿ ಟ್ರಸ್ ಅವರ ಜನಪ್ರಿಯತೆ -70(ಮೈನಸ್ 70)ಕ್ಕೆ ಇಳಿದಿತ್ತು ಮತ್ತು ಬ್ರಿಟನ್ನ ಅತ್ಯಂತ ಜನಪ್ರಿಯವಲ್ಲದ ಪ್ರಧಾನಿ ಎಂದು ಜನತೆ ಅಭಿಪ್ರಾಯಪಟ್ಟಿದ್ದರು. ಜಾನ್ಸನ್ (Johnson)ರಾಜೀನಾಮೆಯ ಬಳಿಕ ಟ್ರಸ್ರನ್ನು ಆ ಸ್ಥಾನಕ್ಕೆ ಕನ್ಸರ್ವೇಟಿವ್ ಪಕ್ಷದವರು ಆಯ್ಕೆ ಮಾಡಿದ್ದು, ಜನತೆ ಆಯ್ಕೆ ಮಾಡಿಲ್ಲ. ಈಗ ಮತ್ತೆ ಅದೇ ತಪ್ಪನ್ನು  ಪುನರಾವರ್ತಿಸಲು ಕನ್ಸರ್ವೇಟಿವ್ ಮುಖಂಡರು ಹೊರಟಿದ್ದಾರೆ. ಅದೇನೇ ಇದ್ದರೂ, ಇದೇ ಮೊದಲ ಬಾರಿಗೆ 4 ತಿಂಗಳಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯಡಿ ಆಯ್ಕೆಯಾಗದ 3 ಪ್ರಧಾನಿಗಳು ಹಾಗೂ 5 ವಿತ್ತಸಚಿವರನ್ನು ಬ್ರಿಟನ್ ಜನತೆ ಕಾಣುವಂತಾಗಿದೆ ಎಂದು ಪ್ರಜಾಪ್ರಭುತ್ವದ ಪರ ಧ್ವನಿ ಎತ್ತುವ `ಗವ್2. ಯುಕೆ' ಸಂಸ್ಥೆಯ ಸಂಸ್ಥಾಪಕ ಲಾಯ್ಡ್ ಹಾರ್ಡಿ ಹೇಳಿದ್ದಾರೆ.

ಬ್ರಿಟನ್ನಲ್ಲಿ ತಕ್ಷಣ ಚುನಾವಣೆ ನಡೆಯಬೇಕು ಎಂದು ವಿಪಕ್ಷಗಳೂ ಆಗ್ರಹಿಸುತ್ತಿವೆ. ಈ ಮಧ್ಯೆ, ದೇಶದಲ್ಲಿ ತಕ್ಷಣ ಸಾರ್ವತ್ರಿಕ ಚುನಾವಣೆ ನಡೆಸಬೇಕು ಎಂಬ ಆನ್ಲೈನ್ ಅಭಿಯಾನ ಆರಂಭವಾಗಿದ್ದು ಗುರುವಾರ ಸಂಜೆಯ ವೇಳೆಗೆ ಇದಕ್ಕೆ  6,57,586 ಮಂದಿ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X