Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ 5 ವರ್ಷಗಳಲ್ಲಿ ಶೂಟೌಟ್‍ಗಳಲ್ಲಿ 166...

ಕಳೆದ 5 ವರ್ಷಗಳಲ್ಲಿ ಶೂಟೌಟ್‍ಗಳಲ್ಲಿ 166 ಅಪರಾಧಿಗಳ ಸಾವು: ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್

ವಾರ್ತಾಭಾರತಿವಾರ್ತಾಭಾರತಿ22 Oct 2022 1:30 PM IST
share
ಕಳೆದ 5 ವರ್ಷಗಳಲ್ಲಿ ಶೂಟೌಟ್‍ಗಳಲ್ಲಿ 166 ಅಪರಾಧಿಗಳ ಸಾವು: ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್

ಲಕ್ನೋ: ಕಳೆದ ಐದು ವರ್ಷಗಳ ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ (Uttar Pradesh) ಶೂಟೌಟ್‍ಗಳಲ್ಲಿ (Police shootouts) 166 ಅಪರಾಧಿಗಳನ್ನು ಸಾಯಿಸಲಾಗಿದೆ ಹಾಗೂ 4,453 ಮಂದಿಗೆ ಗಾಯಗಳುಂಟಾಗಿವೆ ಎಂದು ಮುಖ್ಯಮಂತ್ರಿ ಆದಿತ್ಯನಾಥ್ (Adityanath) ಹೇಳಿದ್ದಾರೆ.

ತಮ್ಮ ಸರಕಾರ ಅಪರಾಧಕ್ಕೆ ತೋರುವ ಶೂನ್ಯ ಸಹಿಷ್ಣುತೆಯ ಪರಿಣಾಮ ಇದು ಎಂದು ಹೇಳಿರುವ ಆದಿತ್ಯನಾಥ್, ರಾಜ್ಯದಲ್ಲಿ ಯಾವುದೇ ಅಪರಾಧಿ ಸ್ವಚ್ಛಂದವಾಗಿಲ್ಲ, ಅವರು ಒಂದೋ ಜೈಲಿನಲ್ಲಿದ್ದಾರೆ ಇಲ್ಲವೇ ಸಾಯಿಸಲ್ಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಲಕ್ನೋದಲ್ಲಿ ಶುಕ್ರವಾರ ಪೊಲೀಸ್ ಹುತಾತ್ಮ  ದಿನದ ಸಂದರ್ಭ ಮಾತನಾಡಿದ ಅವರು ಕಳೆದ ಐದು ವರ್ಷಗಳಲ್ಲಿ ಕರ್ತವ್ಯದ ವೇಳೆ 13 ಪೊಲೀಸ್ ಸಿಬ್ಬಂದಿ ಮೃತರಾಗಿದ್ದರೆ ಒಂದು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದರು.

"ಕರ್ತವ್ಯದ ವೇಳೆ ಹುತಾತ್ಮರಾದ ಎಲ್ಲಾ ಪೊಲೀಸ್ ಸಿಬ್ಬಂದಿಗಳ ಕುಟುಂಬಗಳ ಅಗತ್ಯತೆಗಳಿಗೆ ಸರಕಾರ ಸ್ಪಂದಿಸುತ್ತದೆ,'' ಎಂದು ಅವರು ಹೇಳಿದ್ದಾರೆ.

2017 ರಿಂದೀಚೆಗೆ ಉತ್ತರ ಪ್ರದೇಶದಲ್ಲಿ ಪೊಲೀಸರು ಮತ್ತು ಶಂಕಿತ ಆರೋಪಿಗಳ ನಡುವೆ ನೂರಾರು ಗುಂಡಿನ ಚಕಮಕಿಗಳು ನಡೆದಿವೆ. ಬಂಧನ ಅಗತ್ಯವಿರುವಾಗ ತಾವು ಆತ್ಮರಕ್ಷಣೆಗಾಗಿ ಮಾತ್ರ ಗುಂಡು ಹಾರಿಸುತ್ತೇವೆ ಎಂದು ಪೊಲೀಸರು ಹೇಳುತ್ತಾರಾದರೂ ಹೆಚ್ಚಿನ ಶೂಟೌಟ್‍ಗಳು ಪೂರ್ವನಿಯೋಜಿತ ಹಾಗೂ ಮುಖ್ಯಮಂತ್ರಿಯ ಅನುಮೋದನೆ ಮೇರೆಗೆ ನಡೆಯುತ್ತವೆ ಎಂಬುದು ಟೀಕಾಕಾರರ ಆರೋಪ.

ಪೊಲೀಸ್ ಕೇಸ್ ಡೈರಿಗಳ ಪ್ರಕಾರ ಆರೋಪಿಗಳು ಪೊಲೀಸರನ್ನು ಸಾಯಿಸಲು ಗುಂಡು ಹಾರಿಸಿದಾಗ ಅಥವಾ ಪರಾರಿಯಾಗಲು ಯತ್ನಿಸಿದಾಗ ಶೂಟೌಟ್‍ಗಳು ನಡೆಯುತ್ತವೆ.

ಜುಲೈ 2021 ರಲ್ಲಿ ಸುಮಾರು 87 ಮಂದಿ ಮಾಜಿ ಅಧಿಕಾರಿಗಳು ರಾಜ್ಯದ ಎನ್‍ಕೌಂಟರ್ ಅಭಿಯಾನವನ್ನು ಟೀಕಿಸಿ ಕಾನೂನು ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿದ್ದರು. ಮೇಲಾಗಿ ಇಂತಹ ಘಟನೆಗಳಲ್ಲಿ  ಸಾಯುವವರು ಹೆಚ್ಚಾಗಿ ಮುಸ್ಲಿಮರು, ದಲಿತರು ಮತ್ತು ಇತರ ಹಿಂದುಳಿದ ವರ್ಗಗಳವರು ಎಂದೂ ಅವರು ಆರೋಪಿಸಿದ್ದರು.

ರಾಜ್ಯದಲ್ಲಿ 2017 ಹಾಗೂ 2020 ನಡುವೆ ನಡೆದ ಪೊಲೀಸ್ ಎನ್‍ಕೌಂಟರ್ ಗಳಲ್ಲಿ ಮೃತಪಟ್ಟವರ ಪೈಕಿ ಶೇ 37ರಷ್ಟು ಮಂದಿ ಮುಸ್ಲಿಮರಾಗಿದ್ದಾರೆ.

ಇದನ್ನೂ ಓದಿ: ತುಮಕೂರು : ವಿವಿಯ ಎಸ್ಸಿ- ಎಸ್ಟಿ ಹಾಸ್ಟೆಲ್ ನಲ್ಲಿ ಚಿಪ್ಪಿನಲ್ಲಿಯೇ ಊಟ!

share
ವಾರ್ತಾಭಾರತಿ
ವಾರ್ತಾಭಾರತಿ
Next Story
X