Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳದಲ್ಲಿ ಕಾಣಿಸಿಕೊಂಡ ಮೊದಲ ಲಂಪಿ...

ಭಟ್ಕಳದಲ್ಲಿ ಕಾಣಿಸಿಕೊಂಡ ಮೊದಲ ಲಂಪಿ ವೈರಸ್: ಆತಂಕ ಬೇಡ ಎಂದ ಪಶು ವೈದ್ಯಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ22 Oct 2022 10:21 PM IST
share
ಭಟ್ಕಳದಲ್ಲಿ ಕಾಣಿಸಿಕೊಂಡ ಮೊದಲ ಲಂಪಿ ವೈರಸ್: ಆತಂಕ ಬೇಡ ಎಂದ ಪಶು ವೈದ್ಯಾಧಿಕಾರಿ

ಭಟ್ಕಳ: ದೇಶದಲ್ಲೆಡೆ ಸದ್ದು ಮಾಡುತ್ತಿರುವ ಜಾನುವಾರುಗಳ ಮಾರಕ ರೋಗ ಲಂಪಿ ಸ್ಕಿನ್ ಡಿಸೀಸ್ (ಎಲ್.ಎಸ್.ಡಿ) ನ ಮೊದಲ ಪ್ರಕರಣ ಭಟ್ಕಳದಲ್ಲಿಂದು ಕಾಣಿಸಿಕೊಂಡಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ಪಶು ವೈದ್ಯಾಧಿಕಾರಿ ಡಾ. ಶಿವಕುಮಾರ್ ʼವಾರ್ತಾಭಾರತಿʼಗೆ ತಿಳಿಸಿದ್ದಾರೆ.

ಈ ಕುರಿತಂತೆ ಅವರು ಶನಿವಾರ ರಾತ್ರಿ ದೂರವಾಣಿ ಮೂಲಕ ಮಾತನಾಡಿದ್ದು, ಶನಿವಾರ ಸಂಜೆ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಮೊದಲ ಬಾರಿಗೆ ದನವೊಂದರಲ್ಲಿ ಈ ರೋಗ ಕಾಣಿಸಿಕೊಂಡಿದೆ. ಭಟ್ಕಳ ತಾಲೂಕಿನ ವರದಿಯಾದ ಮೊದಲ ಪ್ರಕರಣವಾಗಿದ್ದು, ಇದಕ್ಕೆ ಬೇಕಾದ ಎಲ್ಲ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ.

ಜನರು ಆತಂಕಪಡುವ ಅಗತ್ಯವಿಲ್ಲ. ಇದೊಂದು ವೈರಸ್ ಆಗಿದ್ದು ದನಗಳಲ್ಲಿ ಕಾಣಿಸಿಕೊಂಡಿದ್ದು, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ರೋಗವಲ್ಲ. ಇದರ ಹಾಲನ್ನು ಕೂಡ ಕುದಿಸಿ ಕುಡಿಯಬಹುದು. ಇದರಿಂದ ಯಾವುದೇ ತೊಂದರೆ ಇಲ್ಲ ಎಂದು ಮಾಹಿತಿ ನೀಡಿದರು.

ಈ ರೋಗವು ಉತ್ತರ ಭಾರದಲ್ಲಿ ಬಹಳಷ್ಟು ಕಾಣಿಸಿಕೊಂಡಿದ್ದು ನಮ್ಮ ರಾಜ್ಯದಲ್ಲೂ ಈ ರೋಗ ಉಲ್ಭಣಗೊಳ್ಳುತ್ತಿದೆ. ಇದೊಂದು ವೈರಲ್ ಡಿಸೀಸ್ ಆಗಿದ್ದು ಸೊಳ್ಳೆಗಳಿಂದ, ಗಾಳಿಯಿಂದ ಈ ರೋಗ ಹರಡುತ್ತಿದೆ. ಇದಕ್ಕೆ ಚಿಕಿತ್ಸೆ ಇದೆ ಎಂದರು.

ಶನಿವಾರ ಸಂಜೆ ವಾಟ್ಸಪ್ ನಲ್ಲಿ ಲಂಪಿ ವೈರಸ್ ಪೀಡಿತ ಹೋರಿಯ ವೀಡಿಯೊ ವೈರಲ್ ಆಗುತ್ತಿದ್ದು ಈ ಕುರಿತಂತೆ ಜನರು ವಿವಿಧ ರೀತಿಯ ಸುದ್ದಿಗಳನ್ನು ಹರಡುತ್ತಿದ್ದಾರೆ.

ಏನಿದು ಲಂಪಿ ವೈರಸ್?: ಲಂಪಿ ಸ್ಕಿನ್ ಡಿಸೀಸ್  ಒಂದು ಸಾಂಕ್ರಾಮಿಕ ವೈರಲ್ ಆಗಿದ್ದು ಅದು ಜಾನುವಾರುಗಳ ಮೇಲೆ ಪರಿಣಾಮ ಬೀರುತ್ತದೆ. ಜ್ವರ, ಚರ್ಮದ ಮೇಲೆ ಗಂಟುಗಳನ್ನು ಉಂಟು ಮಾಡುತ್ತದೆ ಮತ್ತು ಜಾನುವಾರುಗಳ ಸಾವಿಗೆ ಕಾರಣವಾಗಬಹುದು. ಸೋಂಕಿತ ಜಾನುವಾರುಗಳಲ್ಲಿ ಜ್ವರ ಮತ್ತು ಸಂತಾನಹೀನತೆ ಕಾಣಿಸುತ್ತದೆ. ಕಳಪೆ ಹಾಲು ಉತ್ಪಾದನೆಗೂ ಕಾರಣವಾಗಬಹುದು. ಈ ರೋಗವು ಸೊಳ್ಳೆಗಳು, ನೊಣಗಳು, ಹೇನುಗಳು ಮತ್ತು ಕಣಜಗಳಿಂದ ಜಾನುವಾರುಗಳ ನೇರ ಸಂಪರ್ಕದಿಂದ ಮತ್ತು ಕಲುಷಿತ ಆಹಾರ ಮತ್ತು ನೀರಿನ ಮೂಲಕ ಹರಡುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸೋಂಕಿತ ಜಾನುವಾರುಗಳನ್ನು ಬಂಧಿಸುವುದು, ಸತ್ತ ಜಾನುವಾರುಗಳ ದೇಹಗಳನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವುದು ಅತೀ ಮುಖ್ಯವಾಗಿದೆ. ಮುದ್ದೆ ಚರ್ಮ ರೋಗಕ್ಕಾಗಿ ಹೊಸ ಲಸಿಕೆಯನ್ನು ಕೃಷಿ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿದ್ದು, ಮುಂದಿನ ಮೂರು-ನಾಲ್ಕು ತಿಂಗಳುಗಳಲ್ಲಿ ಬಳಕೆಗೆ ಲಭ್ಯವಾಗುವ ಸಾಧ್ಯತೆಯಿದೆ ಎಂದು ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಕಾರ್ಯದರ್ಶಿ ಜತೀಂದ್ರ ನಾಥ್ ಸ್ವೈನ್ ಮಾಹಿತಿ ನೀಡಿದ್ದಾಗಿ ವರದಿಯಾಗಿದೆ.

ಚರ್ಮ ಗಂಟು ಕಾಯಿಲೆಯು ದೇಶೀಯ ಜಾನುವಾರು ಮತ್ತು ಏಷ್ಯನ್ ನೀರಿನ ಎಮ್ಮೆಗಳ ರೋಗಕಾರಕ-ಹರಡುವ ಪೋಕ್ಸ್ ಕಾಯಿಲೆಯಾಗಿದೆ ಮತ್ತು ಇದು ಚರ್ಮದ ಗಂಟುಗಳ ನೋಟದಿಂದ ನಿರೂಪಿಸಲ್ಪಟ್ಟಿದೆ. ಅಸ್ಸಾಂ, ಒಡಿಶಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಛತ್ತೀಸ್‌ಗಢ, ಮಧ್ಯಪ್ರದೇಶ ಮುಂತಾದ ಭಾರತದ ಹಲವಾರು ರಾಜ್ಯಗಳಲ್ಲಿ ಈ ರೋಗ ವರದಿಯಾಗಿದೆ.

ಜುಲೈನಲ್ಲಿ ಮುದ್ದೆ ಚರ್ಮ ರೋಗ ಕಾಣಿಸಿಕೊಂಡು 67 ಸಾವಿರಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು. ಆದರೆ, ಈಗ ಅದರ ಸಂಖ್ಯೆ 75 ಸಾವಿರಕ್ಕೂ ಅಧಿಕವಾಗಿದೆ. ಏಪ್ರಿಲ್‌ನಲ್ಲಿ ಗುಜರಾತ್‌ನ ಕಚ್ ಪ್ರದೇಶದಲ್ಲಿ ಮೊದಲ ಮುದ್ದೆ ಚರ್ಮದ ಸೋಂಕಿನ ಪ್ರಕರಣ ವರದಿಯಾಗಿದೆ. ಜುಲೈನಿಂದ ಇಲ್ಲಿಯವರೆಗೆ 75 ಸಾವಿರ ಜಾನುವಾರುಗಳು ಸಾವನ್ನಪ್ಪಿವೆ ಎಂದು ಒನ್ ಇಂಡಿಯಾ ಸುದ್ದಿ ತಾಣ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X