Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಳ ಸಂಗಾತಿ ಆಯ್ಕೆ ವಿಚಾರದಲ್ಲಿ ಧರ್ಮದ...

ಬಾಳ ಸಂಗಾತಿ ಆಯ್ಕೆ ವಿಚಾರದಲ್ಲಿ ಧರ್ಮದ ಪ್ರಶ್ನೆಯಿಲ್ಲ: ದಿಲ್ಲಿ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ24 Oct 2022 4:01 PM IST
share
ಬಾಳ ಸಂಗಾತಿ ಆಯ್ಕೆ ವಿಚಾರದಲ್ಲಿ ಧರ್ಮದ ಪ್ರಶ್ನೆಯಿಲ್ಲ: ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ: ಧರ್ಮದ ಕುರಿತಾದ ಪ್ರಶ್ನೆಯು ತನ್ನ ಬಾಳಸಂಗಾತಿಯನ್ನು ಆರಿಸುವ ಒಬ್ಬ ವ್ಯಕ್ತಿಯ ಸ್ವಾತಂತ್ರ್ಯದ ಮೇಲೆ ಯಾವುದೇ ಪರಿಣಾಮ ಬೀರದು, ಏಕೆಂದರೆ ಈ ಸ್ವಾತಂತ್ರ್ಯ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳ ಅಡಿಯಲ್ಲಿ ಖಾತ್ರಿಪಡಿಸಲಾಗಿದೆ ಎಂದು ದಿಲ್ಲಿ ಹೈಕೋರ್ಟ್ ಹೇಳಿದೆ.

ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿಯೊಬ್ಬನನ್ನು ವಿವಾಹವಾಗಿದ್ದ ಮಹಿಳೆಯ ಕುಟುಂಬದ ಸದಸ್ಯರು ಸಲ್ಲಿಸಿದ್ದ ಮೂರು ಜಾಮೀನು ಅರ್ಜಿಗಳಿಗೆ ಸಂಬಂಧಿಸಿದಂತೆ ಜಸ್ಟಿಸ್ ಅನೂಪ್ ಕುಮಾರ್ ಮೆಂಡಿರಟ್ಟ ತಮ್ಮ ಆದೇಶದಲ್ಲಿ ಮೇಲಿನಂತೆ ಹೇಳಿದ್ದಾರೆ. ಯುವತಿ ಮದುವೆಯಾದ ಯುವಕನ ಮೇಲೆ ಬರ್ಬರ ಹಲ್ಲೆ ನಡೆಸಲು ಪ್ರಚೋದಿಸಿದ್ದಾರೆಂಬ ಆರೋಪವನ್ನು ಯುವತಿಯ ಸಹೋದರಿ, ತಾಯಿ ಮತ್ತು ಅಜ್ಜಿ ಎದುರಿಸುತ್ತಿದ್ದು, ಜಾಮೀನು ಅರ್ಜಿಯನ್ನು ಸಲ್ಲಿಸಿದವರಾಗಿದ್ದಾರೆ.

ಕಳೆದ ಡಿಸೆಂಬರ್ 21 ರಂದು ಮದುವೆ ನಡೆದಿತ್ತು. ಇದು ತಿಳಿದು ಬರುತ್ತಲೇ ಯುವತಿಯ ಕುಟುಂಬ ಯುವಕನ್ನು ಕೊಲ್ಲುವ ಬೆದರಿಕೆಯೊಡ್ಡಿತ್ತು.

ಡಿಸೆಂಬರ್ 22 ರಂದು ಯುವಕ ದಿಲ್ಲಿಯ ರಜೌರಿ ಪೊಲೀಸ್ ಠಾಣೆಗೆ ಅರ್ಜಿ ಸಲ್ಲಿಸಿ ರಕ್ಷಣೆ ಕೋರಿದ್ದ ಆದರೆ ಠಾಣೆಯಿಂದ ದಂಪತಿ ಹೊರಬಂದು ಮನೆಯತ್ತ ಸಾಗುತ್ತಿದ್ದಂತೆ ಯುವತಿಯ ಕುಟುಂಬ ಸದಸ್ಯರು ಅವರಿಬ್ಬರನ್ನು ಅಪಹರಿಸಿದ್ದರು. ಯುವಕನ ಮರ್ಮಾಂಗ ಕತ್ತರಿಸಿ ಹಾಕುವಂತೆ ಇತರ ಕುಟುಂಬ ಸದಸ್ಯರಿಗೆ ಯುವತಿಯ ತಾಯಿ, ಅಜ್ಜಿ ಮತ್ತು ಸೋದರಿ ಪ್ರೇರೇಪಿಸಿದ್ದರೆನ್ನಲಾಗಿದ್ದು ಅಂತೆಯೇ ಆತನ ಮರ್ಮಾಂಗಕ್ಕೆ ಕೊಡಲಿಯಿಂದ ಹಲ್ಲೆಗೈದು ಆತನನ್ನು ನಾಲೆಗೆ ಎಸೆಯಲಾಗಿತ್ತು. ನಂತರ ಆತನನ್ನು ಆತನ ಸೋದರ ರಕ್ಷಿಸಿದ್ದ.

ಯುವತಿಯ ತಾಯಿ ಹಾಗೂ ಅಜ್ಜಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ ಸೋದರಿಗೆ ಮಾತ್ರ ಜಾಮೀನು ನೀಡಿದ್ದು ಆಕೆ ಈ ಕೃತ್ಯದಲ್ಲಿ ಶಾಮೀಲಾಗಿಲ್ಲ ಎಂದು ತಿಳಿದು ಬಂದಿದೆ ಎಂದು ಹೇಳಿದೆ.

ದಂಪತಿಗೆ ಪೊಲೀಸರು ರಕ್ಷಣೆಯೊದಗಿಸಲು ವಿಫಲರಾಗಿದ್ದು ದುರಾದೃಷ್ಟಕರ ಎಂದೂ ನ್ಯಾಯಾಧೀಶರು ಹೇಳಿದರು.

ತಮ್ಮ ಸ್ವಂತ ಇಚ್ಛೆಯಿಂದ ಮದುವೆಯಾಗುವವರು ತಮ್ಮವರಿಂದ ಅಪಾಯ ಎದುರಿಸುತ್ತಿದ್ದಾರೆಂದು ಮನವರಿಕೆಯಾದಲ್ಲಿ ತ್ವರಿತವಾಗಿ ಸ್ಪಂದಿಸಿ ರಕ್ಷಣೆಗೆ ಪೊಲೀಸರು ಕ್ರಮಕೈಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X