ST ಮೀಸಲಾತಿ ಹೆಚ್ಚಳ ಹಿನ್ನೆಲೆ; ಸಿದ್ದರಾಮಯ್ಯರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಪ್ರಸನ್ನಾನಂದಪುರಿ ಸ್ವಾಮೀಜಿ

ಬೆಂಗಳೂರು: ವಾಲ್ಮೀಕಿ ಸಮುದಾಯದ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ವಾಲ್ಮಿಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರಕಾರದ ಸಂದರ್ಭದಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಸಿದ್ದರಾಮಯ್ಯ ಅವರ ಸರಕಾರಿ ನಿವಾಸಕ್ಕೆ ಭೇಟಿ ನೀಡಿದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ನೇತೃತ್ವದ ನಿಯೋಗವು, ಸಿದ್ದರಾಮಯ್ಯಗೆ ಸಿಹಿ ತಿನ್ನಿಸಿ, ಅಭಿನಂದನೆ ಸಲ್ಲಿಸಿದೆ.
ಈ ಸಂಬಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ' ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕಾದರೆ ಶೋಷಿತ ಸಮುದಾಯಗಳ ಜನರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು, ಈ ಕಾರಣಕ್ಕಾಗಿ ವಾಲ್ಮೀಕಿ ಸಮುದಾಯದ ಎಸ್.ಟಿ ಮೀಸಲು ಹೆಚ್ಚಳ ಹೋರಾಟಕ್ಕೆ ಬೆಂಬಲ ನೀಡಿದ್ದೆ. ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಇಂದು ನನ್ನನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿ, ಅಭಿನಂದಿಸಿದರು' ಎಂದು ತಿಳಿಸಿದ್ದಾರೆ.
ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕಾದರೆ ಶೋಷಿತ ಸಮುದಾಯಗಳ ಜನರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು, ಈ ಕಾರಣಕ್ಕಾಗಿ ವಾಲ್ಮೀಕಿ ಸಮುದಾಯದ ಎಸ್.ಟಿ ಮೀಸಲು ಹೆಚ್ಚಳ ಹೋರಾಟಕ್ಕೆ ಬೆಂಬಲ ನೀಡಿದ್ದೆ.
— Siddaramaiah (@siddaramaiah) October 27, 2022
ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಇಂದು ನನ್ನನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿ, ಅಭಿನಂದಿಸಿದರು. pic.twitter.com/qlXtoc3nZq







