Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೃತಪಟ್ಟ ಮಗನ ಆಸ್ತಿಯಲ್ಲೂ ವಿಧವೆ ತಾಯಿಗೆ...

ಮೃತಪಟ್ಟ ಮಗನ ಆಸ್ತಿಯಲ್ಲೂ ವಿಧವೆ ತಾಯಿಗೆ ಹಕ್ಕಿದೆ: ಹೈಕೋರ್ಟ್ ಆದೇಶ

27 Oct 2022 7:39 PM IST
share
ಮೃತಪಟ್ಟ ಮಗನ ಆಸ್ತಿಯಲ್ಲೂ ವಿಧವೆ ತಾಯಿಗೆ ಹಕ್ಕಿದೆ: ಹೈಕೋರ್ಟ್ ಆದೇಶ

ಬೆಂಗಳೂರು, ಅ.27: ಹಿಂದೂ ಉತ್ತರಾಧಿಕಾರ ಕಾಯಿದೆ ಸೆಕ್ಷನ್ 8ರ ಅಡಿ ಸಾವನ್ನಪ್ಪಿದ ಮಗನ ಆಸ್ತಿಯಲ್ಲಿ ವಿಧವೆ ತಾಯಿಗೂ ಹಕ್ಕಿದೆ ಎಂದು ಹೈಕೋರ್ಟ್ (High Court of Karnataka) ಮಹತ್ವದ ಆದೇಶ ನೀಡಿದೆ. 

ಬೀದರ್ ಜಿಲ್ಲೆಯವರಾದ ಆಸ್ತಿಯ ಮೂಲ ವಾರಸುದಾರರಾದ ಮೃತಪಟ್ಟಿರುವ ಹನುಮಂತರೆಡ್ಡಿ ಅವರ ಪತ್ನಿ ಈರಮ್ಮ ಅವರು ಅಧೀನ ನ್ಯಾಯಾಲಯಗಳು ಆಸ್ತಿ ಹಂಚಿಕೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ.ಸಚಿನ್ ಶಂಕರ್ ಮಗದುಮ್ ಅವರ ನೇತೃತ್ವದ ಏಕಸದಸ್ಯ  ನ್ಯಾಯಪೀಠ, ಈ ಆದೇಶ ನೀಡಿದೆ.

ಮಕ್ಕಳು 6/75ನೆ ಭಾಗಕ್ಕೆ ಅರ್ಹರಾಗಿದ್ದು, ಈರಮ್ಮ ಅವರು 6/75ನೆ ಪಾಲು ಜೊತೆಗೆ 1/25ರಷ್ಟು ಭಾಗಕ್ಕೆ ಅರ್ಹರಾಗಿದ್ದಾರೆ. ಒಟ್ಟಾರೆ ಇದು 9/75ರಷ್ಟು ಆಸ್ತಿ ಆಗಲಿದೆ ಎಂದು ನ್ಯಾಯಪೀಠವು ಆದೇಶದಲ್ಲಿ ತಿಳಿಸಿದೆ. ಅಲ್ಲದೆ, ಎರಡು ನ್ಯಾಯಾಲಯಗಳೂ ರೂಪಿಸಿರುವ ಪ್ರಾಥಮಿಕ ಡಿಕ್ರಿಯಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ. 

ಹನುಮಂತರೆಡ್ಡಿ ಹಾಗೂ ಈರಮ್ಮ ದಂಪತಿಗೆ ಪೊರಸರೆಡ್ಡಿ, ಭೀಮರೆಡ್ಡಿ(ಮೃತಪಟ್ಟಿದ್ದಾರೆ), ರೇವಮ್ಮ ಮತ್ತು ಬಸವರೆಡ್ಡಿ ಎಂಬ ನಾಲ್ಕು ಮಕ್ಕಳಿದ್ದು, ಈತಮ್ಮನ ಪತಿ ಹನುಮಂತರೆಡ್ಡಿಯೂ ಮೃತಪಟ್ಟಿದ್ದಾರೆ. ಆಸ್ತಿ ಹಂಚಿಕೆ ವಿಚಾರದಲ್ಲಿ ತಾಯಿ, ಮಕ್ಕಳ ನಡುವೆ ಗೊಂದಲ ಏರ್ಪಟ್ಟ ಹಿನ್ನೆಲೆಯಲ್ಲಿ ಈ ವಿಚಾರ ಬೀದರ್ ಜಿಲ್ಲೆಯ ಸ್ಥಳೀಯ ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಅಲ್ಲಿ ಬಂದ ತೀರ್ಪು ಸಮಾಧಾನ ತರದ ಹಿನ್ನೆಲೆಯಲ್ಲಿ ಈರಮ್ಮ ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. 

ಹೈಕೋರ್ಟ್ ನ್ಯಾಯಪೀಠವು ಈ ಕೇಸ್‍ನ ವಿಚಾರಣೆ ನಡೆಸಿದ್ದು, ಮಹಿಳೆಗೆ ತನ್ನ ಮೃತ ಗಂಡನ ಆಸ್ತಿಯಲ್ಲಿ ಮಾತ್ರವಲ್ಲ, ಮೃತ ಮಗನ ಆಸ್ತಿಯಲ್ಲೂ ಸಮಾನ ಪಾಲು ಪಡೆಯಲು ಅಧಿಕಾರವಿದೆ ಎಂದು ಆದೇಶದಲ್ಲಿ ಹೇಳಿದೆ. ಆದರೆ, ಈ ನಿಯಮ ವಿಧವೆ ತಾಯಂದಿರಿಗೆ ಮಾತ್ರ ಅನ್ವಯವಾಗುತ್ತದೆಯೇ ವಿನಹ ಪತಿ ಇರುವ ಮಹಿಳೆ ತನ್ನ ಮೃತ ಮಗನ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹಳಾಗಿರುವುದಿಲ್ಲ ಎಂದು ತಿಳಿಸಿದೆ.  

share
Next Story
X