Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪುಟಿನ್ ಮಾರ್ಗದರ್ಶಕನ ಪುತ್ರಿ ರಶ್ಯದಿಂದ...

ಪುಟಿನ್ ಮಾರ್ಗದರ್ಶಕನ ಪುತ್ರಿ ರಶ್ಯದಿಂದ ಪರಾರಿ

27 Oct 2022 9:23 PM IST
share
ಪುಟಿನ್ ಮಾರ್ಗದರ್ಶಕನ ಪುತ್ರಿ ರಶ್ಯದಿಂದ ಪರಾರಿ

ಮಾಸ್ಕೊ, ಅ.27: ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್(Vladimir Putin) ಅವರ ರಾಜಕೀಯ ಮಾರ್ಗದರ್ಶಕನ ಪುತ್ರಿ, ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದ ಖ್ಯಾತ ಪತ್ರಕರ್ತೆ ಕೆಸಿನಿಯಾ ಸೊಬ್ಚಕ್(Ksenia Sobchak) ದೇಶ ಬಿಟ್ಟು ಪರಾರಿಯಾಗಿರುವುದಾಗಿ ವರದಿಯಾಗಿದೆ.

‌ಉಕ್ರೇನ್ ಮೇಲಿನ ರಶ್ಯದ ಆಕ್ರಮಣವನ್ನು ವಿರೋಧಿಸಿ ಸಾರ್ವಜನಿಕವಾಗಿ ಪ್ರಶ್ನಿಸಿ ಆಡಳಿತದ ಕೆಂಗಣ್ಣಿಗೆ  ಗುರಿಯಾಗಿದ್ದ ಕೆಸಿನಿಯಾ ವಿರುದ್ಧ ಸುಲಿಗೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು ಈಕೆಯ ನಿಕಟ ಸಹವರ್ತಿಯನ್ನು ಪೊಲೀಸರು ಬಂಧಿಸಿದ್ದರು ಮತ್ತು ಈಕೆಯ ಮನೆಯ ಮೇಲೆ ದಾಳಿ ಮಾಡಿ ಶೋಧ ನಡೆಸಿದ್ದರು.

ಈಕೆಯ ತಂದೆ, ಪ್ರಜಾಸತ್ತಾತ್ಮಕ ಸುಧಾರಕ ಹಾಗೂ ಸೈಂಟ್ ಪೀಟರ್ಸ್ಬರ್ಗ್ನ ಮಾಜಿ ಮೇಯರ್ ಆಗಿದ್ದ  ಅನಾಟೊಲಿ ಸೊಬ್ಚಕ್ (Anatoly Sobchak)ತನ್ನ ರಾಜಕೀಯ ಬದುಕಿನ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಪುಟಿನ್ ಹಲವು ಬಾರಿ ಹೇಳಿದ್ದಾರೆ.

2012ರಲ್ಲಿ ರಶ್ಯದ ಅಧ್ಯಕ್ಷರ ವಿರುದ್ಧ ಆರಂಭವಾದ ಪ್ರತಿಭಟನೆಯಲ್ಲಿ ಸಕ್ರಿಯವಾಗಿದ್ದ ಕೆಸಿನಿಯಾ, 2018ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಪುಟಿನ್ ವಿರುದ್ಧ ಸ್ಪರ್ಧಿಸಿ ಗಮನ ಸೆಳೆದಿದ್ದರು. ಆದರೆ ಕೇವಲ 2% ಮತ ಪಡೆಯಲಷ್ಟೇ ಶಕ್ತರಾಗಿದ್ದರು. ಆನ್ಲೈನ್ ಮಾಧ್ಯಮ ಸಂಸ್ಥೆ ಆರಂಭಿಸಿದ್ದ ಕೆಸಿನಿಯಾ, ರಶ್ಯದ ಜೈಲಿನಲ್ಲಿ ಕೈದಿಗಳ ವಿರುದ್ಧ ನಡೆಸುವ ದೌರ್ಜನ್ಯ ಮುಂತಾದ ವಿಷಯಗಳ ಬಗ್ಗೆ  ವರದಿ ಪ್ರಕಟಿಸಿ ಆಡಳಿತದ ವಕ್ರದೃಷ್ಟಿಗೆ ಗುರಿಯಾಗಿದ್ದರು. ಮಂಗಳವಾರ ಇವರ ಮಾಧ್ಯಮ ಸಂಸ್ಥೆಯ ವಾಣಿಜ್ಯ ನಿರ್ದೇಶಕ ಕಿರಿಲ್ ಸುಖನೋವ್ರನ್ನು ಪೊಲೀಸರು ಬಂಧಿಸಿದ್ದರು ಹಾಗೂ ಕೆಸಿನಿಯಾ ಬಂಧನಕ್ಕೆ ವಾರಂಟ್ ಹೊರಡಿಸಿದ್ದರು.

ರಶ್ಯದಿಂದ ಪರಾರಿಯಾಗಿರುವ ಕೆಸಿನಿಯಾ ಈಗ ಲಿಥುವೇನಿಯಾದಲ್ಲಿ ಇರುವುದಾಗಿ ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

share
Next Story
X