Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಸೇರುವಂತೆ ಟಿಆರ್‌ಎಸ್ ಶಾಸಕರಿಗೆ...

ಬಿಜೆಪಿ ಸೇರುವಂತೆ ಟಿಆರ್‌ಎಸ್ ಶಾಸಕರಿಗೆ ಆಮಿಷ ಒಡ್ಡಿದ ಮೂವರ ವಿರುದ್ಧ ಪ್ರಕರಣ ದಾಖಲು

27 Oct 2022 10:47 PM IST
share
ಬಿಜೆಪಿ ಸೇರುವಂತೆ ಟಿಆರ್‌ಎಸ್ ಶಾಸಕರಿಗೆ ಆಮಿಷ ಒಡ್ಡಿದ ಮೂವರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್, ಅ. 27:  ಬಿಜೆಪಿ ಸೇರುವಂತೆ ತೆಲಂಗಾಣ ರಾಷ್ಟ್ರ ಸಮಿತಿಯ ನಾಲ್ವರು ಶಾಸಕರಿಗೆ ಹಣದ ಆಮಿಷ ಒಡ್ಡಿದ ಆರೋಪದಲ್ಲಿ ಮೂವರ ವಿರುದ್ಧ ಸೈಬರಾಬಾದ್ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಸಂತ ಡಿ. ಸಿಮ್ಹಯಾಜಿ, ಅವರ ಅನುಯಾಯಿ ಸತೀಶ್ ಶರ್ಮಾ ಹಾಗೂ ಉದ್ಯಮಿ ನಂದಕುಮಾರ್ ಅವರ ವಿರುದ್ಧ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಪ್ರಥಮ ಮಾಹಿತಿ ವರದಿ ದಾಖಲಿಸಿದ್ದಾರೆ. ಮೂವರನ್ನು ಕೂಡ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. 
ಪಿ. ರೋಹಿತ್ ರೆಡ್ಡಿ, ಭೀರಂ ಹರ್ಷವರ್ಧನ್ ರೆಡ್ಡಿ, ಪಿ. ರೇಗಾ ಕಾಂತ ರಾವ್, ಗುವ್ವಾಲ ಬಾಲರಾಜು- ಈ ನಾಲ್ವರು ಶಾಸಕರು ಸೈಬರಾಬಾದ್‌ನ  ಅಝೀಝ್ ನಗರ್ ಪ್ರದೇಶದಲ್ಲಿರುವ ತೋಟದ ಮನೆಯಲ್ಲಿ ಕಂಡು ಬಂದಿದ್ದರು. 

ಬಿಜೆಪಿ ಸೇರಲು ತಮಗೆ ಹಣದ ಆಮಿಷ ಒಡ್ಡಲಾಗಿದೆ ಎಂದು ನಾಲ್ವರು ಶಾಸಕರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸ್ಟೀಫನ್ ರವೀಂದ್ರ ಅವರು ತಿಳಿಸಿದ್ದಾರೆ. ‘‘ಅವರ ದೂರಿನ ಆಧಾರದಲ್ಲಿ ನಾವು ತೋಟದ ಮನೆಗೆ ತೆರಳಿದೆವು. ಅಲ್ಲಿ ಹಿಮಾಚಲಪ್ರದೇಶದ ಹಿಂದೂ ಸಂತ, ತಿರುಪತಿಯ ಅವರ ಅನುಯಾಯಿ ಹಾಗೂ ಹೈದರಾಬಾದ್ ಮೂಲದ ಉದ್ಯಮಿ ಕಂಡು ಬಂದರು’’ ಎಂದು ಅವರು ಹೇಳಿದ್ದಾರೆ. 
ಬಿಜೆಪಿ ಸೇರಿದರೆ ಹಣ, ಗುತ್ತಿಗೆ ಹಾಗೂ ಹುದ್ದೆ ನೀಡಲಾಗುವುದು ಎಂದು ಶಾಸಕರಿಗೆ ಆಮಿಷ ಒಡ್ಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ. 
ಆರೋಪಿಗಳಲ್ಲಿ ಓರ್ವನಾಗಿರುವ ನಂದಕುಮಾರ್ ಕೇಂದ್ರ ಸಚಿವ ಜಿ. ಕೃಷ್ಣ ರೆಡ್ಡಿಗೆ ನಿಕಟವರ್ತಿ ಎಂದು ತೆಲಂಗಾಣ ರಾಷ್ಟ್ರ ಸಮಿತಿಯ ಸಾಮಾಜಿಕ ಮಾಧ್ಯಮದ ಸಂಚಾಲಕ ವೈ ಸತೀಶ್ ರೆಡ್ಡಿ ಪ್ರತಿಪಾದಿಸಿದ್ದಾರೆ. 
ತೋಟದ ಮನೆಯ ಮಾಲಕ ಪಿ. ರೋಹಿತ್ ರೆಡ್ಡಿ ಪೊಲೀಸ್ ದೂರು ದಾಖಲಿಸಿದ್ದಾರೆ.  ತಾನು ಬಿಜೆಪಿ ಸೇರಿದರೆ ಹಾಗೂ ಇತರ ಶಾಸಕರನ್ನು ಬಿಜೆಪಿಗೆ ಸೇರಿಸಿದರೆ 100 ಕೋ.ರೂ. ನೀಡಲಾಗುವುದು ಎಂದು ಆಮಿಷ ಒಡ್ಡಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. 

ಇತರ ಕೆಲವು ಶಾಸಕರನ್ನು ಬಿಜೆಪಿಗೆ ಸೇರಿಸುವಂತೆ ಕೂಡ ತಿಳಿಸಲಾಗಿತ್ತು. ಅದಕ್ಕಾಗಿ ಪ್ರತಿ ಶಾಸಕನಿಗೆ 50 ಲಕ್ಷ ರೂ. ನೀಡುವುದಾಗಿ ಆಮಿಷ ಒಡ್ಡಲಾಗಿತ್ತು. ಶಾಸಕರು ಬಿಜೆಪಿಗೆ ಸೇರದೇ ಇದ್ದರೆ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐಯಿಂದ ದಾಳಿ ನಡೆಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಕೆ ಒಡ್ಡಲಾಗಿತ್ತು ಎಂದು ರೋಹಿತ್ ರೆಡ್ಡಿ ತಿಳಿಸಿದ್ದಾರೆ.

share
Next Story
X