Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸತ್ಯ, ನ್ಯಾಯ, ಸಂಸ್ಕೃತಿ,...

ಸತ್ಯ, ನ್ಯಾಯ, ಸಂಸ್ಕೃತಿ, ಭಾವೈಕ್ಯತೆಯನ್ನು ಸಂಭ್ರಮಿಸುವ ಮೂಲಕ ಕೋಮುವಾದವನ್ನು ಎದುರಿಸಬೇಕು: ದಿನೇಶ್ ಅಮೀನ್ ಮಟ್ಟು

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ವತಿಯಿಂದ ಸಮುದಾಯಗಳ ಸ್ನೇಹ ಸಮಾವೇಶ, ‘ಮಾನವ ರತ್ನ’ ಹಾಗೂ ‘ಸೇವಾ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ

29 Oct 2022 9:52 PM IST
share
ಸತ್ಯ, ನ್ಯಾಯ, ಸಂಸ್ಕೃತಿ, ಭಾವೈಕ್ಯತೆಯನ್ನು ಸಂಭ್ರಮಿಸುವ ಮೂಲಕ ಕೋಮುವಾದವನ್ನು ಎದುರಿಸಬೇಕು: ದಿನೇಶ್ ಅಮೀನ್ ಮಟ್ಟು
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ವತಿಯಿಂದ ಸಮುದಾಯಗಳ ಸ್ನೇಹ ಸಮಾವೇಶ, ‘ಮಾನವ ರತ್ನ’ ಹಾಗೂ ‘ಸೇವಾ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ, ಅ.29: ನಾವು ಸತ್ಯ, ನ್ಯಾಯ, ಸಂಸ್ಕೃತಿ, ಭಾವೈಕ್ಯತೆಯನ್ನು ಸಂಭ್ರಮಿಸುವ ಮೂಲಕ ಮೋಸ, ಸುಳ್ಳು, ಕೆಡುಕು, ಕೋಮುವಾದವನ್ನು ಎದುರಿಸಬೇಕು. ಆದುದರಿಂದ ನಾವು ಕೊಮುವಾದದ ವಿರುದ್ಧ ಪ್ರತಿಭಟನೆ ನಡೆಸುವುದರೊಂದಿಗೆ ಜಾತ್ಯತೀತತೆಯನ್ನು ಸಂಭ್ರಮಿಸಬೇಕಾಗಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಉಡುಪಿ ಅಂಬಾಗಿಲಿನ ಅಮೃತ್ ಗಾರ್ಡನ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾದ ವಿವಿಧ ಸಮುದಾಯಗಳ ಸ್ನೇಹ ಸಮಾವೇಶ ಹಾಗೂ ‘ಮಾನವ ರತ್ನ’ ಹಾಗೂ ‘ಸೇವಾ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ನಾವು ಕೂಡಿ ಕಟ್ಟಿದ್ದೇವೆ. ಆದರೆ ಇಂದು ನಮ್ಮಲ್ಲಿನ ವಿಶ್ವಾಸಾರ್ಹತೆಗೆ ಧಕ್ಕೆ ಬರುತ್ತಿದೆ. ಈ ಬಗ್ಗೆ ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಧರ್ಮವನ್ನು ಮುಂದಿಟ್ಟುಕೊಂಡು ಮನುಷ್ಯ ಸಂಬಂಧವನ್ನು ಹಾಳು ಮಾಡುತ್ತಿದೆ. ಇದರಿಂದ ನಿಜವಾದ ಧರ್ಮ ಆಚರಣೆ ಆಗುತ್ತಿಲ್ಲ ಎಂದರು.

ಚುನಾವಣಾ ಸಂದರ್ಭದಲ್ಲಿ ರಾಜಕಾರಣಿಗಳಿಗೆ ಧರ್ಮ, ದೇವರ ಹೆಸರಿನಲ್ಲಿ ನಮ್ಮ ಮಧ್ಯೆ ಬಿರುಕು ಮೂಡಿಸಿ ಲಾಭ ಪಡೆಯಲು ಅವಕಾಶ ನೀಡಬಾರದು. ಆ ಬಗ್ಗೆ ಎಲ್ಲರು ಗಟ್ಟಿ ತೀರ್ಮಾನ ತೆಗೆದುಕೊಳ್ಳಬೇಕು. ಆ ಮೂಲಕ ನಾವೆಲ್ಲ ನಿಜವಾದ ಧರ್ಮವನ್ನು ಆಚರಿಸಬೇಕಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿವಮೊಗ್ಗದ ಕುವೆಂಪು ವಿವಿ ಸಂಶೋಧನಾ ಮತ್ತು ಬೋಧನಾ ಸಹಾಯಕಿ ಡಾ.ಹಸೀನಾ ಎಚ್.ಕೆ. ಮಾತನಾಡಿ, ಸಮಾಜವನ್ನು ಮುನ್ನಡೆಸಿಕೊಂಡು ಹೋಗಲು ನಮಗೆ  ಮಾನವೀಯ ಮೌಲ್ಯಗಳು ಅಗತ್ಯ. ಇದನ್ನು ಶಿಕ್ಷಣದಲ್ಲಿ ಅಳವಡಿಸಿಕೊಳ್ಳಬೇಕು. ಸಮನ್ವಯದ ಸಮಾಜ ನಿರ್ಮಿಸಲು ಗಾಂಧಿ, ಅಂಬೇಡ್ಕರ್, ಪ್ರವಾದಿ, ಬಸವಣ್ಣ ಅವರ ತತ್ವಗಳನ್ನು ಒಗ್ಗೂಡಿಸಬೇಕು. ಇದರಿಂದ ಪ್ರೀತಿ ಸಾಮರಸ್ಯ ತಂದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ತಪ್ಪನ್ನು ತಪ್ಪು ಎಂಬುದನ್ನು ಧೈರ್ಯವಾಗಿ ಹೇಳುವ ಮನೋಭಾವ ಎಲ್ಲರಲ್ಲಿಯೂ ಬರಬೇಕು‌ ಆಗ ಸಮಾಜದಲ್ಲಿ ಶಾಂತಿ ನೆಲೆಸಲು‌ ಸಾಧ್ಯವಾಗಲಿದೆ. ಸೌಹಾರ್ದತೆ ಜಾತ್ಯಾತೀತ ತತ್ವದಡಿ ಪ್ರೀತಿ ವಿಶ್ವಾಸದಿಂದ ಸಾಗಿದಾಗ ದೇಶದ ಸಂವಿಧಾನದ ಆಶಯ ಉಳಿಯಲು ಸಾಧ್ಯ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಚಾರವಾದಿ, ಸಾಹಿತಿ ಗೋಪಾಲ್ ಬಿ.ಶೆಟ್ಟಿ ಅವರಿಗೆ ‘ಮಾನವ ರತ್ನ’ ಹಾಗೂ ಹಿರಿಯರಾದ ಹಾಜಿ ಅಬ್ದುಲ್ಲಾ ಪರ್ಕಳ ಅವರಿಗೆ ‘ಸೇವಾರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ವಿವಿಧ ಸಮುದಾಯಗಳ ಹಿರಿಯರಾದ ಅಲೆಯೂರು ಗಣಪತಿ ಕಿಣಿ, ಜನಾರ್ದನ ತೋನ್ಸೆ, ಈಶ್ವರ ಮಲ್ಪೆ ಹಾಗೂ ಸುಶೀಲ ನಾಡ ಅವರನ್ನು ಸನ್ಮಾನಿಸಲಾಯಿತು.

ಶೈಕ್ಷಣಿಕ ರಂಗದಲ್ಲಿನ ಸೇವೆಗಾಗಿ ಮೂಳೂರಿನ ಅಲ್ಇಹ್ಸಾನ್ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ವಿಶೇಷ ಮಕ್ಕಳ ಸೇವೆಗಾಗಿ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗಳನ್ನು ಗೌರವಿಸಲಾಯಿತು. ಎಂ ಎಚ್ ಬಿ ಮುಹಮ್ಮದ್ ಹಾಗೂ ಹೆನ್ರಿ ಮಿನಜಸ್ ಗೌರವ ಸ್ವೀಕರಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಹೇಬ್ ಕೋಟ ವಹಿಸಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ರಮೇಶ್ ಕಾಂಚನ್, ಜನತಾದಳ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಅಬೂಬಕರ್ ನೇಜಾರ್, ದಲಿತ ಸಂಘರ್ಷ ಸಮಿತಿ ಸಂಚಾಲಕ ಸುಂದರ್ ಮಾಸ್ಟರ್ ಹಾಗೂ ಕ್ರೈಸ್ತ ಮುಖಂಡ ವಿನೋದ್ ಕ್ರಾಸ್ತ ಗೌರವ ಅತಿಥಿಗಳಾಗಿದ್ದರು.

ಒಕ್ಕೂಟದ ಪ್ರಶಸ್ತಿ ಪ್ರದಾನ ಸಮಾರಂಭದ ಸಂಚಾಲಕ ಇರ್ಷಾದ್ ಅಹ್ಮದ್ ನೇಜಾರ್, ಒಕ್ಕೂಟದ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಹೇಬ್ ಕೋಟ, ಮಾಜಿ ಅಧ್ಯಕ್ಷ ಯಾಸೀನ್ ಮಲ್ಪೆ, ಉಪಾಧ್ಯಕ್ಷ ಇದ್ರೀಸ್ ಹೂಡೆ, ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಕಟಪಾಡಿ, ಖಾಸಿಂ ಬಾರಕೂರು, ಮುಹಮ್ಮದ್ ಶರೀಫ್, ಖತೀಬ್ ರಶೀದ್, ಶಬಿಹ್ ಅಹಮದ್ ಖಾಝಿ, ಮುಹಮ್ಮದ್ ಅಶ್ಫಾಕ್, ಮುಹಮ್ಮದ್ ಗೌಸ್, ಜಫರುಲ್ಲಾ, ಬಿ ಎಸ್ ಎಫ್ ಮುಹಮ್ಮದ್ ರಫೀಕ್ ಮೊದಲಾದವರು ಉಪಸ್ಥಿತರಿದ್ದರು.

ಒಕ್ಕೂಟದ ಮಾಜಿ ಅಧ್ಯಕ್ಷ ಎಂ.ಪಿ.ಮೊಯಿದಿನಬ್ಬ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೌಲಾ ಸ್ವಾಗತಿಸಿದರು. ಮುಹಮ್ಮದಾಲಿ ಕಮ್ಮರಡಿ ಕಾರ್ಯಕ್ರಮ ನಿರೂಪಿಸಿದರು.

ಪ್ರಶಸ್ತಿಯೊಂದಿಗೆ ದೊರೆತ 25 ಸಾವಿರ ರೂ. ಗೌರವ ಧನವನ್ನು ಹಾಜಿ ಅಬ್ದುಲ್ಲಾ ಪರ್ಕಳ ಅವರು ಹಲವು ಮಂದಿಯ ಜೀವವನ್ನು ರಕ್ಷಿಸಿದ ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ ಅವರಿಗೆ ನೀಡುವ ಮೂಲಕ ಪ್ರಶಂಸೆಗೆ ಪಾತ್ರರಾದರು.

share
Next Story
X