Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಯಿಯ ಸಾವಿಗೆ ಕಾರಣನಾದ ಚಾಲಕನನ್ನು...

ನಾಯಿಯ ಸಾವಿಗೆ ಕಾರಣನಾದ ಚಾಲಕನನ್ನು ಶಿಕ್ಷಿಸಲು ಸಾಧ್ಯವಿಲ್ಲ: ಹೈಕೋರ್ಟ್

29 Oct 2022 11:09 PM IST
share
ನಾಯಿಯ ಸಾವಿಗೆ ಕಾರಣನಾದ ಚಾಲಕನನ್ನು ಶಿಕ್ಷಿಸಲು ಸಾಧ್ಯವಿಲ್ಲ: ಹೈಕೋರ್ಟ್

ಬೆಂಗಳೂರು, ಅ. 29: ಅರ್ಜಿದಾರರ ಸಾಕು ನಾಯಿಯ ಸಾವಿಗೆ ಕಾರಣವಾದ ಅಪಘಾತಕ್ಕೆ ಸಂಬಂಧಿಸಿ ಕಾರು ಚಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಿ ಕೆಳ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ (High Court of Karnataka) ರದ್ದುಗೊಳಿಸಿದೆ.  

ಪ್ರತಾಪ್ ಕುಮಾರ್ ಜಿ ಅವರು ಫೆಬ್ರವರಿ 24, 2018 ರಂದು ಬೆಂಗಳೂರಿನ ವಿಜಯನಗರದಲ್ಲಿ ತಮ್ಮ ಎಸ್‌ಯುವಿ ಚಾಲನೆ ಮಾಡುತ್ತಿದ್ದಾಗ ಅವರ ಕಾರು ಮೆಂಫಿ ಎಂಬ ಸಾಕು ನಾಯಿಗೆ ಡಿಕ್ಕಿ ಹೊಡೆದಿತ್ತು. ಈ ಹಿನ್ನೆಲೆಯಲ್ಲಿ ನಾಯಿಯನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದ ಅದರ ಮಾಲಕ ಧೀರಜ್ ರಾಖೇಜಾ ದೂರು ದಾಖಲಿಸಿದ್ದಾರೆ.

ವಿಜಯನಗರ ಪೊಲೀಸ್ ತನಿಖಾಧಿಕಾರಿ ತನಿಖೆ ನಡೆಸಿ ಅರ್ಜಿದಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 134 (ಎ & ಬಿ) ಮತ್ತು 187 ಮತ್ತು ಐಪಿಸಿ ಸೆಕ್ಷನ್ 279, 428 ಮತ್ತು 429 ರ ಅಡಿಯಲ್ಲಿ ಅಪರಾಧಗಳಿಗಾಗಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣವು ಬೆಂಗಳೂರಿನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಟ್ರಾಫಿಕ್ ಕೋರ್ಟ್-II ನಲ್ಲಿ ವಿಚಾರಣೆಗೆ ಬಾಕಿ ಇತ್ತು.

ಕೆಳ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣವನ್ನು ರದ್ದುಗೊಳಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು,  "ಎಂವಿ (ಮೋಟಾರು ವಾಹನ) ಕಾಯಿದೆಯ ಸೆಕ್ಷನ್ 134 (ಎ) ಮತ್ತು (ಬಿ), ಎಂವಿ ಸೆಕ್ಷನ್ 187 ರ ಅಡಿಯಲ್ಲಿ ಯಾವುದೇ ಅಪರಾಧ ಮಾಡಲಾಗಿಲ್ಲ ಎಂಬ ತೀರ್ಮಾನಕ್ಕೆ ಬಂದಿರುವುದಾಗಿ” ಹೇಳಿದ್ದಾರೆ. “ಐಪಿಸಿಯ ಸೆಕ್ಷನ್ 279 ಮತ್ತು ಐಪಿಸಿಯ ಸೆಕ್ಷನ್ 428 ಮತ್ತು 429 ರ ಅಡಿಯಲ್ಲಿ, ಕ್ರಿಮಿನಲ್ ಪ್ರಕ್ರಿಯೆಗಳ ಮುಂದುವರಿಕೆಯು ನ್ಯಾಯಾಲಯದ ಪ್ರಕ್ರಿಯೆಯ ದುರುಪಯೋಗವಾಗಿದೆ ಮತ್ತು ಕ್ರಿಮಿನಲ್ ವಿಚಾರಣೆಯು ಅರ್ಜಿದಾರರಿಗೆ ಅನ್ಯಾಯವನ್ನು ಉಂಟುಮಾಡುತ್ತದೆ ಎಂದು ನಾನು ಪರಿಗಣಿಸುತ್ತೇನೆ.” ಎಂದು ಹೇಳಿದ್ದಾರೆ. 

“ಒಬ್ಬ ವ್ಯಕ್ತಿ, ನಾಯಿ ಅಥವಾ ಪ್ರಾಣಿಗೆ ಗಾಯವಾಗುವುದಕ್ಕೆ ಮಾತ್ರ ಸಂಬಂಧಿಸಿದ ನಿಬಂಧನೆಯು ಎಮ್.ವಿ ಕಾಯಿದೆಯ ಸೆಕ್ಷನ್ 134 (ಎ) ಮತ್ತು (ಬಿ) ವ್ಯಾಪ್ತಿಯೊಳಗೆ ಬರುವುದಿಲ್ಲ ಎಂದು ಹೇಳಿದೆ. ಈ ವಿಭಾಗವು 'ಅಪಘಾತದ ಸಂದರ್ಭದಲ್ಲಿ ಚಾಲಕನ ಕರ್ತವ್ಯದ ಕುರಿತು ವ್ಯವಹರಿಸುತ್ತದೆ.” ಎಂದು ಹೈಕೋರ್ಟ್‌ ಹೇಳಿದೆ. ಅದೇ ಕಾರಣಕ್ಕಾಗಿ ಸೆಕ್ಷನ್ 187 (ಅಪಘಾತಕ್ಕೆ ಸಂಬಂಧಿಸಿದ ಅಪರಾಧಗಳಿಗೆ ಶಿಕ್ಷೆ) ಅಡಿಯಲ್ಲಿ ಆರೋಪವನ್ನು ತಿರಸ್ಕರಿಸಲಾಗಿದೆ.

share
Next Story
X