Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪರಸ್ಪರ ದ್ವೇಷವಿಲ್ಲದೆ ನ್ಯಾಯದ...

ಪರಸ್ಪರ ದ್ವೇಷವಿಲ್ಲದೆ ನ್ಯಾಯದ ದಾರಿಯಲ್ಲಿ ಬದುಕುವ ಸಂದೇಶವನ್ನು ರಂಗ ಭೂಮಿ ಸಮರ್ಥವಾಗಿ ನೀಡುತ್ತದೆ: ಶಶಿಧರ ಬಾರಿಘಾಟ್

30 Oct 2022 8:11 PM IST
share
ಪರಸ್ಪರ ದ್ವೇಷವಿಲ್ಲದೆ ನ್ಯಾಯದ ದಾರಿಯಲ್ಲಿ ಬದುಕುವ ಸಂದೇಶವನ್ನು ರಂಗ ಭೂಮಿ ಸಮರ್ಥವಾಗಿ ನೀಡುತ್ತದೆ: ಶಶಿಧರ ಬಾರಿಘಾಟ್

ಮಂಗಳೂರು, ಅ.30; ಪರಸ್ಪರ ದ್ವೇಷ ಅಸೂಯೆ ತಿರಸ್ಕಾರ ಗಳಿಲ್ಲದೆ ಪ್ರಜಾತಂತ್ರ ವ್ಯವಸ್ಥೆ ಯಲ್ಲಿ ಸಂವಿಧಾನದ  ಆಶಯದಂತೆ ನ್ಯಾಯದ ದಾರಿಯಲ್ಲಿ ಬದುಕುವ ಸಂದೇಶವನ್ನು ರಂಗಭೂಮಿ ಅದ್ಭುತವಾಗಿ  ನೀಡುವ ಸಾಮರ್ಥ್ಯ ಹೊಂದಿದೆ ಎಂದು ಹಿರಿಯ ರಂಗ ಕರ್ಮಿ ಶಶಿ ಧರ್ ಬಾರಿ ಘಾಟ್ ತಿಳಿಸಿದ್ದಾರೆ.

ಅವರು ಇಂದು ನಗರದ ಶಾರದಾ ವಿದ್ಯಾಲಯದಲ್ಲಿಂದು ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಾಹಿತ್ಯ ಮತ್ತು ರಂಗಭೂಮಿ ಗೋಷ್ಠಿಯಲ್ಲಿ ರಂಗ ಭೂಮಿ ಮತ್ತು ಯುವ ಜನತೆ ಎಂಬ ವಿಷಯದ ಬಗ್ಗೆ ವಿಷಯ ಮಂಡಿಸಿದರು.

ಈ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಒಂದು ಸ್ಥಾನವಿದೆ. ದುರಾಸೆ, ದ್ವೇಷ, ಅಸೂಯೆ ತಿರಸ್ಕಾರ ನಾವು ಬದುಕುವ ದಾರಿಯನ್ನು ತಪ್ಪುವಂತೆ ಮಾಡಿದೆ. ಸಾಮಾಜಿಕ ಬದಲಾವಣೆಗೆ ಯುವಕರು ರಂಗಭೂಮಿ ಬಳಸಿಕೊಳ್ಳಬೇಕಾಗಿದೆ. ರಂಗ ಭೂಮಿ ಯುವಜನರಲ್ಲಿ ಧೈರ್ಯ, ಸ್ಥೈರ್ಯ ವನ್ನು ಮೂಡಿಸಬಹುದು. ಆದರೆ ಇಂದಿನ ಯುವ ಜನರು ರಂಗ ಭೂಮಿಯಲ್ಲಿ ಬೆಳೆಯಲು ಭಾಷಾ ಮಾಧ್ಯಮ ಸೇರಿದಂತೆ  ಕೆಲವು ಕೌಶಲ್ಯ ಗಳನ್ನು ಮೈಗೂಡಿಸಿ ಕೊಂಡು ಬೆಳೆಯಬೇಕಾಗಿದೆ. ಪರಸ್ಪರ ನೆರವು ನೆರವು ನೀಡುವ ಮನೋಭಾವ ಯುವಕರಲ್ಲಿ ಬೆಳೆಸಲು ರಂಗಭೂಮಿ ಪರಿಣಾಮಕಾರಿ. ರಂಗಭೂಮಿ ಯುವಜನ ರನ್ನು ಹೆಚ್ಚು ಅವಲಂಬಿಸಿ ಅವರ ಮೇಲೆ ನಿಂತಿದೆ ಎಂದು ಶಶಿಧರ ಬಾರಿಘಾಟ್ ತಿಳಿಸಿದ್ದಾರೆ.

ರವಿರಾಜ್  ಎಸ್ ರವರು ಸಾಹಿತ್ಯ ಮತ್ತು ರಂಗಭೂಮಿಯ ಬಗ್ಗೆ ವಿಚಾರ ಮಂಡಿಸಿದರು. ಅಕ್ಷಯ ಆರ್ ಶೆಟ್ಟಿ ತುಳು ರಂಗ ಭೂಮಿ ಬೆಳೆದು ಬಂದ ಬಗ್ಗೆ ವಿಚಾರ ಮಂಡಿಸಿ ತುಳು ರಂಗ ಭೂಮಿಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆಗಳ ಪ್ರಭಾವ ಇದೆ ಎಂದರು.

ಸಾಹಿತಿ ಅರವಿಂದ ಚೊಕ್ಕಾಡಿ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಸುಮಾರು 300 -400 ವರ್ಷಗಳ ಹಿಂದೆ ಭಾರತೀಯ ರಂಗ ಭೂಮಿ ಯನ್ನು ಪ್ರವೇಶಿಸಿದ ಪಾರ್ಸಿ ರಂಗನಾಟಕಗಳ ಪ್ರಭಾವ ತುಳು ರಂಗಭೂ ಮಿಯ ಮೇಲಿದೆ ಪಾರ್ಸಿ ನಾಟಕಗಳಲ್ಲೂ ಪ್ರಧಾನವಾದ  ಹಾಸ್ಯ ತುಳು ರಂಗ ಭೂಮಿ ಯಲ್ಲೂ ಕಂಡು ಬರುತ್ತದೆ ಎಂದರು.

ಗೋಷ್ಠಿಯಲ್ಲಿ ದಯಾನಂದ ಕಟೀಲ್ ಸ್ವಾಗತಿಸಿ, ಯಶೋಧ ವಂದಿಸಿದರು. ಮುರಳೀಧರ ಬಾರಧ್ವಜ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಅಧ್ಯಕ್ಷ ಡಾ.ನಾ. ದಾಮೋದರ ಶೆಟ್ಟಿ ಉಪಸ್ಥಿತರಿದ್ದರು.

share
Next Story
X