Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಜಾಪ್ರಭುತ್ವವನ್ನು ಉಳಿಸಿ: ಸಿಜೆಐಗೆ...

ಪ್ರಜಾಪ್ರಭುತ್ವವನ್ನು ಉಳಿಸಿ: ಸಿಜೆಐಗೆ ಮಮತಾ ಬ್ಯಾನರ್ಜಿ ಆಗ್ರಹ

30 Oct 2022 10:54 PM IST
share
ಪ್ರಜಾಪ್ರಭುತ್ವವನ್ನು ಉಳಿಸಿ: ಸಿಜೆಐಗೆ ಮಮತಾ ಬ್ಯಾನರ್ಜಿ ಆಗ್ರಹ

ಕೋಲ್ಕತಾ,ಅ.30: ದೇಶದಲ್ಲಿ ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಉಸಿರುಗಟ್ಟಿಸಲಾಗುತ್ತಿದೆ ಎಂದು ರವಿವಾರ ಇಲ್ಲಿ ಕಳವಳಗಳನ್ನು ವ್ಯಕ್ತಪಡಿಸಿದ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು,ಈ ಪ್ರವೃತ್ತಿಯು ಮುಂದುವರಿದರೆ ದೇಶವು ಅಧ್ಯಕ್ಷೀಯ ಮಾದರಿಯ ಸರಕಾರದತ್ತ ಸಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದರು. ಪ್ರಜಾಪ್ರಭುತ್ವ ಮತ್ತು ದೇಶದ ಒಕ್ಕೂಟ ಸ್ವರೂಪದ ರಕ್ಷಣೆಯನ್ನು ಖಚಿತಪಡಿಸುವಂತೆ ಅವರು ಭಾರತದ ಮುಖ್ಯ ನ್ಯಾಯಾಧೀಶ (ಸಿಜೆಐ)ರನ್ನು ಆಗ್ರಹಿಸಿದರು.

ಅವರು ಇಲ್ಲಿಯ ರಾಷ್ಟ್ರೀಯ ನ್ಯಾಯವಿಜ್ಞಾನಗಳ ವಿವಿ (ಎನ್‌ಯುಜೆಎಸ್)ಯ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ವಿವಿಯ ಕುಲಾಧಿಪತಿಗಳಾಗಿರುವ ಸಿಜೆಐ ನ್ಯಾ.ಯು.ಯು.ಲಲಿತ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಜನತೆಯನ್ನು ಕಿರುಕುಳಗಳಿಂದ ರಕ್ಷಿಸುವಂತೆ ನ್ಯಾಯಾಂಗವನ್ನು ಆಗ್ರಹಿಸಿದ ಬ್ಯಾನರ್ಜಿ,ಸಮಾಜದ ಒಂದು ನಿರ್ದಿಷ್ಟ ವರ್ಗವು ಎಲ್ಲ ಪ್ರಜಾಸತ್ತಾತ್ಮಕ ಅಧಿಕಾರವನ್ನು ವಶಪಡಿಸಿಕೊಳ್ಳುತ್ತಿದೆ ಎಂದರು. ಪ್ರಜಾಪ್ರಭುತ್ವ ಎಲ್ಲಿದೆ ಎಂದು ಪ್ರಶ್ನಿಸಿದ ಅವರು,‘ದಯವಿಟ್ಟು ಪ್ರಜಾಪ್ರಭುತ್ವವನ್ನು ರಕ್ಷಿಸಿ’ಎಂದು ನ್ಯಾ.ಲಲಿತ್ ಅವರನ್ನು ಕೇಳಿಕೊಂಡರು.

ಮಾಧ್ಯಮ ಪಕ್ಷಪಾತದ ವಿರುದ್ಧ ದಾಳಿ ನಡೆಸಿದ ಬ್ಯಾನರ್ಜಿ,‘ಅವು ಯಾರನ್ನು ಬೇಕಾದರೂ ನಿಂದಿಸಬಹುದೇ? ಅವು ಯಾರನ್ನು ಬೇಕಾದರೂ ಆರೋಪಿಯನ್ನಾಗಿಸಬಹುದೇ? ಸರ್,ನಮ್ಮ ಮರ್ಯಾದೆಯು ನಮ್ಮ ಪ್ರತಿಷ್ಠೆಯಾಗಿದೆ. ನಮ್ಮ ಮರ್ಯಾದೆಯನ್ನು ಸೂರೆಗೈದರೆ ಎಲ್ಲವನ್ನೂ ಸೂರೆಗೈದಂತೆ ’ ಎಂದು ಹೇಳಿದರು. ತೀರ್ಪೊಂದನ್ನು ಪ್ರಕಟಿಸುವ ಮುನ್ನ ಬಹಳಷ್ಟು ಸಂಗತಿಗಳು ನಡೆಯುತ್ತವೆ ಎಂದ ಅವರು,‘ಇದನ್ನು ಹೇಳಲು ನನಗೆ ವಿಷಾದವಾಗುತ್ತದೆ. ನಾನು ತಪ್ಪು ಹೇಳಿದ್ದೇನೆಂದು ನೀವು ಭಾವಿಸಿದರೆ ಅದಕ್ಕಾಗಿ ನಾನು ಕ್ಷಮೆ ಕೋರುತ್ತೇನೆ ’ಎಂದರು.

ಎನ್‌ಯುಜೆಎಸ್ ವಿಶ್ವದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲೊಂದಾಗಿದೆ ಎಂದು ಪ್ರಶಂಸಿಸಿದ ಬ್ಯಾನರ್ಜಿ ಹಾಲಿ ಸಿಜೆಐ ನಿರ್ವಹಿಸಿದ ಪಾತ್ರಕ್ಕಾಗಿ ಅವರನ್ನು ಶ್ಲಾಘಿಸಿದರು.‘ ನಾನು ನ್ಯಾ.ಯು.ಯು.ಲಲಿತ್ ಅವರನ್ನು ಅಭಿನಂದಿಸಲೇಬೇಕು. ಇದನ್ನು ಹೇಳಲು ಈ ವೇದಿಕೆಯನ್ನು ನಾನು ಬಳಸಬಹುದೇ ಎನ್ನುವುದು ನನಗೆ ತಿಳಿದಿಲ್ಲ,ಆದರೆ ಎರಡು ತಿಂಗಳುಗಳಲ್ಲಿ ಅವರು ನ್ಯಾಯಾಂಗವೆಂದರೇನು ಎನ್ನುವುದನ್ನು ತೋರಿಸಿದ್ದಾರೆ ’ಎಂದರು.

ತಾನು ಪ್ರಸ್ತಾಪಿಸಿದ ವಿಷಯವನ್ನು ಇನ್ನಷ್ಟು ಸ್ಪಷ್ಟಗೊಳಿಸಿದ ಬ್ಯಾನರ್ಜಿ,ಜನರು ನ್ಯಾಯಾಂಗದಲ್ಲಿ ತಮ್ಮ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ತಾನು ಹೇಳುತ್ತಿಲ್ಲ,ಆದರೆ ಇತ್ತೀಚಿನ ದಿನಗಳಲ್ಲಿ ಪರಿಸ್ಥಿತಿಯು ತೀವ್ರವಾಗಿ ಹದಗೆಟ್ಟಿದೆ. ನ್ಯಾಯಾಂಗವು ಜನರನ್ನು ಅನ್ಯಾಯದಿಂದ ರಕ್ಷಿಸಬೇಕು ಮತ್ತು ಅವರ ಕೂಗುಗಳನ್ನು ಆಲಿಸಬೇಕು. ಈಗಿನ ಸ್ಥಿತಿಯಲ್ಲಿ ಜನರು ಮುಚ್ಚಿದ ಬಾಗಿಲುಗಳ ಹಿಂದೆ ರೋದಿಸುತ್ತಿದ್ದಾರೆ ಎಂದು ಹೇಳಿದರು.

share
Next Story
X