Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನದಿಮಾರ್ಗ್ ಪಂಡಿತರ ಹತ್ಯಾಕಾಂಡ ವಿಚಾರಣೆ...

ನದಿಮಾರ್ಗ್ ಪಂಡಿತರ ಹತ್ಯಾಕಾಂಡ ವಿಚಾರಣೆ ಪುನರಾರಂಭಕ್ಕೆ ಜಮ್ಮು ಕಾಶ್ಮೀರ ಹೈಕೋರ್ಟ್ ಆದೇಶ

30 Oct 2022 11:22 PM IST
share
ನದಿಮಾರ್ಗ್ ಪಂಡಿತರ ಹತ್ಯಾಕಾಂಡ ವಿಚಾರಣೆ ಪುನರಾರಂಭಕ್ಕೆ ಜಮ್ಮು ಕಾಶ್ಮೀರ ಹೈಕೋರ್ಟ್ ಆದೇಶ

ಶ್ರೀನಗರ, ಅ. 30: ನದಿಮಾರ್ಗ್ ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಪ್ರಕರಣವನ್ನು ಆದಷ್ಟು ಶೀಘ್ರ ಪುನರಾರಂಭಿಸಲು ಜಮ್ಮು ಹಾಗೂ ಕಾಶ್ಮೀರ, ಲಡಾಖ್‌ನ ಉಚ್ಚ ನ್ಯಾಯಾಲಯ ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿದೆ.  

ಜಮ್ಮು ಹಾಗೂ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನದಿಮಾರ್ಗ್ ಗ್ರಾಮದಲ್ಲಿ 2003ರಲ್ಲಿ ಶಂಕಿತ ‘ಯೋತ್ಪಾದಕರು ಯೋಧರ ಸಮವಸ್ತ್ರ ಧರಿಸಿ 24 ಕಾಶ್ಮೀರಿ ಪಂಡಿತರನ್ನು ಹತ್ಯೆಗೈದಿದ್ದರು. ಈ ಪ್ರಕರಣದ ವಿಚಾರಣೆ 2011ರಲ್ಲಿ ಅಂತ್ಯಗೊಂಡಿತ್ತು. 
ಈಗ ಉಚ್ಚ ನ್ಯಾಯಾಲಯ ವೀಡಿಯೊ ಕಾನ್ಫರೆನ್ಸ್ ಮೂಲಕ ಸಾಕ್ಷಿಗಳ ವಿಚಾರಣೆ ನಡೆಸುವಂತೆ ಹಾಗೂ ಈ ಪ್ರಕರಣವನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ತ್ವರಿತವಾಗಿ ಕಲಾಪಗಳನ್ನು ನಡೆಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದೆ. 

ವಿಚಾರಣಾ ನ್ಯಾಯಾಲಯವನ್ನು ದೂಷಿಸಿರುವ ಉಚ್ಚ ನ್ಯಾಯಾಲಯ    ಹೇಯ ರೀತಿಯ ಈ ಪ್ರಕರಣದಲ್ಲಿ ಸತ್ಯವನ್ನು ಅನಾವರಣಗೊಳಿಸಲು ಅದು ಎಲ್ಲ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲು ಪ್ರಯತ್ನಿಸಲಿಲ್ಲ ಎಂದು ಗಮನಿಸಿತು. 
ನದಿಮಾರ್ಗ್ ಪ್ರಕರಣದ ಪ್ರಸಕ್ತ ಆದೇಶಕ್ಕೆ ಈ ಹಿಂದೆ ಜೂನ್ ಆರಂಭದಲ್ಲಿ ನೀಡಿದ ಆದೇಶ ಆಧಾರವಾಗಿದೆ. ಹೊಸ ಆದೇಶದಿಂದಾಗಿ 11 ವರ್ಷಗಳ ಬಳಿಕ ಈ ಪ್ರಕರಣ ವಿಚಾರಣೆ ಮತ್ತೆ ಆರಂಭವಾಗುತ್ತಿದೆ. 
ಪ್ರಕರಣವನ್ನು ಅಂತ್ಯಗೊಳಿಸುವ ವಿರುದ್ಧ ಸಲ್ಲಿಸಲಾದ ಪರಿಷ್ಕರಣಾ ಅರ್ಜಿ ತಿರಸ್ಕರಿಸಿದ ಈ ಹಿಂದಿನ ಆದೇಶವನ್ನು ಉಚ್ಚ ನ್ಯಾಯಾಲಯ ಜೂನ್‌ನಲ್ಲಿ ನೆನಪಿಸಿಕೊಂಡಿತ್ತು.  

2003 ಮಾರ್ಚ್ 23ರಂದು ಪುಲ್ವಾಮಾ ಜಿಲ್ಲೆಯ ಶೋಪಿಯಾನದ ಸಮೀಪದ ನದಿಮಾರ್ಗ್ ಗ್ರಾಮದಲ್ಲಿ ಶಂಕಿತ ‘ಯೋತ್ಪಾದಕರು 11 ಪುರುಷರು, 11 ಮಹಿಳೆಯರು ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದಿದ್ದರು.  ಈ ಘಟನೆಯಲ್ಲಿ 52 ಮಂದಿ ಗಾಯಗೊಂಡಿದ್ದರು. 
ಶಂಕಿತ ಭಯೋತ್ಪಾದಕರು ಯೋಧರ ಸಮವಸ್ತ್ರ ಧರಿಸಿ ಗ್ರಾಮ ಪ್ರವೇಶಿಸಿದ್ದರು. ಗ್ರಾಮ ನಿವಾಸಿಗಳನ್ನು ಸಾಲಾಗಿ ನಿಲ್ಲಿಸಿ ಗುಂಡು ಹಾರಿಸಿ ಹತ್ಯೆಗೈದಿದ್ದರು. ಈ ಸಂದರ್ಭ ಪಂಡಿತರಿಗೆ ರಕ್ಷಣೆ ನೀಡಲು ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಗಳನ್ನು ಶಂಕಿತ ಭಯೋತ್ಪಾದಕರು ನಿಶ್ಯಸ್ತ್ರಗೊಳಿಸಿದ್ದರು ಎಂದು ಆಗಿನ ಕಾಶ್ಮೀರ ವಲಯದ ಪೊಲೀಸ್ ವರಿಷ್ಠ ಕೆ. ರಾಜೇಂದ್ರ ಅವರು ತಿಳಿಸಿದ್ದಾರೆ. 
‘‘ಅವರು ಮೊದಲು ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡರು. ಅನಂತರ ಪಂಡಿತರ ಮೇಲೆ ವಿವೇಚನಾರಹಿತವಾಗಿ ಗುಂಡು ಹಾರಿಸಿದರು’’ ಎಂದು ರಾಜೇಂದ್ರ ತಿಳಿಸಿದ್ದಾರೆ. 

share
Next Story
X