Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾರ್ಮಿಕರ ಶೋಷಣೆ ಸೋಲಿಸಲು ಸಂಘಟನೆ...

ಕಾರ್ಮಿಕರ ಶೋಷಣೆ ಸೋಲಿಸಲು ಸಂಘಟನೆ ಬಲವಾಗಲಿ: ದೇಬಸಿಶ್ ರಾಯ್

ಮಂಗಳೂರು: ಸಿಐಟಿಯು 10ನೇ ರಾಜ್ಯ ಸಮ್ಮೇಳನ ಉದ್ಘಾಟನೆ

31 Oct 2022 3:12 PM IST
share
ಕಾರ್ಮಿಕರ ಶೋಷಣೆ ಸೋಲಿಸಲು ಸಂಘಟನೆ ಬಲವಾಗಲಿ: ದೇಬಸಿಶ್ ರಾಯ್
ಮಂಗಳೂರು: ಸಿಐಟಿಯು 10ನೇ ರಾಜ್ಯ ಸಮ್ಮೇಳನ ಉದ್ಘಾಟನೆ

ಮಂಗಳೂರು, ಅ.31: ಬೀಡಿ ಕಾರ್ಮಿಕರಿಗಾಗಿ ಹಿಂದೆ ಇದ್ದ ಫ್ಯಾಕ್ಟರಿ ಪದ್ಧತಿ ಮನೆಗಳಿಗೆ ಸೀಮಿತಗೊಂಡ ಬಳಿಕ ಶೋಷಣೆ ಹೆಚ್ಚಾಗಿದೆ. ಈ ಶೋಷಣೆ ಹೆಚ್ಚಿಸುವ ಪ್ರಯತ್ನ ಸೋಲಿಸಲು ಯೂನಿಯನ್‌ ಗಟ್ಟಿಗೊಳಿಸಬೇಕಾಗಿದೆ ಎಂದು ಆಲ್ ಇಂಡಿಯಾ ಬೀಡಿ ವರ್ಕರ್ಸ್ ಫೆಡೇರಶನ್ ಪ್ರಧಾನ ಕಾರ್ಯದರ್ಶಿ ದೇಬಸಿಶ್ ರಾಯ್ ಅಭಿಪ್ರಾಯಿಸಿದ್ದಾರೆ.

ನಗರದ ಡಾನ್‌ ಬಾಸ್ಕೋ ಸಭಾಂಗಣದ ಬಿ. ಮಾಧವ ವೇದಿಕೆಯಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ (ಸಿಐಟಿಯು)ನ 10ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸ್ವಾತಂತ್ರ್ಯ ಪೂರ್ವದಿಂದಲೂ ದ.ಕ. ಜಿಲ್ಲೆಯನ್ನು ಒಳಗೊಂಡಂತೆ ಬೀಡಿ ಕಾರ್ಮಿಕರ ಚಳವಳಿ ಅತ್ಯಂತ ಪ್ರಬಲವಾಗಿದೆ. ಆದರೆ ಬೀಡಿ ಕಾರ್ಮಿಕರು ಇದೀಗ ಹಲವು ರೀತಿಯ ಸಮಸ್ಯೆ, ಶೋಷಣೆಗಳನ್ನು ಅನುಭವಿಸುತ್ತಿರುವ ಜತೆ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ಯೂನಿಯನ್ ಮೂಲಕ ತಳ ಹಂತದಿಂದಲೇ ಸ್ಪಂದಿಸಬೇಕು ಎಂದು ಅವರು ಹೇಳಿದರು.

ಬೀಡಿ ಕಾರ್ಮಿಕರಿಗಾಗಿಯೇ ತೆರೆಯಲಾಗಿದ್ದ ಚಿಕಿತ್ಸಾಲಯಗಳು ಬಹಳಷ್ಟು ಸ್ಥಗಿತಗೊಂಡಿವೆ. ಬೀಡಿ ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಆ್ಯಂಬುಲೆನ್ಸ್ ಸೇವೆಗಳೂ ಕಾರ್ಯನಿರ್ವಹಿಸುತ್ತಿಲ್ಲ. ಬೀಡಿ ಕಾರ್ಮಿಕರನ್ನು ಇಎಸ್‌ಐ ಸೌಲಭ್ಯದಡಿ ತರುವ ಕಾರ್ಯವೂ ಆಗುತ್ತಿಲ್ಲ. ಚಳವಳಿಗಳ ಮೂಲಕ ಗಳಿಸಿದ ಕಾರ್ಮಿಕರ ಹಕ್ಕುಗಳನ್ನು ಕಸಿಯುತ್ತಿರುವ ಸಂದರ್ಭ ಅದನ್ನು ಮತ್ತೆ ಗಳಿಸಲು ಚಳವಳಿಯನ್ನು ಬಲಿಷ್ಠಗೊಳಿಸುವ ಅಗತ್ಯವಿದೆ ಎಂದರು.

ವೇದಿಕೆಯಲ್ಲಿ ಸಿಐಟಿಯು ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಸೈಯ್ಯದ್ ಮುಜೀಬ್, ಕೋಶಾಧಿಕಾರಿ ಪದ್ಮಾವತಿ ಶೆಟ್ಟಿ, ದ.ಕ. ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಸ್ವಾಗತ ಸಮಿತಿ ಕೋಶಾಧಿಕಾರಿ ಜಯಂತ ನಾಯ್ಕ್, ಎಐಟಿಯುಸಿ ಮುಖಂಡರಾದ ಯು.ಬಿ.ಲೋಕಯ್ಯ, ಸೀತಾರಾಂ ಬೇರಿಂಜ, ಸಿಐಟಿಯುನ ಕೃಷ್ಣಪ್ಪ ಸಾಲ್ಯಾನ್, ಯಾದವ ಶೆಟ್ಟಿ, ರಮಣಿ ಮೊದಲಾದವರು ಉಪಸ್ಥಿತರಿದ್ದರು.

ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್‌ನ ಅಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಸ್ವಾಗತ ಸಮಿತಿಯ ಅಧ್ಯಕ್ಷ ವಸಂತ ಆಚಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.


ದೇಶವು ಹಸಿವಿನ ಸೂಚ್ಯಂಕದಲ್ಲಿ ನೆರೆಹೊರೆಯ ರಾಷ್ಟ್ರಗಳಿಗಿಂತಲೂ ಕೆಳಮಟ್ಟದಲ್ಲಿದೆ. ಆದರೆ ಸರಕಾರಗಳು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಬದಲಾಗಿ ಸಂವಿಧಾನದ ಬಹುತ್ವದಿಂದ ಏಕತೆಯ ಆಶಯವನ್ನು ಒಡೆಯುವ ಕೆಲಸದಲ್ಲಿ ನಿರತವಾಗಿವೆ. ಇದು ಆರೆಸ್ಸೆಸ್‌ನ ಹಿಂದಿನ ಅಜೆಂಡವಾಗಿದೆ. ಅದನ್ನೇ ಮುಂದುವರಿಸಿರುವ ಸರಕಾರ ಹಿಂದಿ, ಹಿಂದು, ಹಿಂದೂಸ್ತಾನ್ ಎಂಬ ಹೆಸರಿನಲ್ಲಿ ಜನರನ್ನು ವಿಭಜಿಸುವ ಕೆಲಸ ಮಾಡುತ್ತಿದೆ. ಭಾಷೆಯಿಂದ ವ್ಯವಹಾರಕ್ಕೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ. ಆದರೆ ಸರಕಾರ ಹಿಂದಿ ಭಾಷೆಯ ಹೇರಿಕೆಯ ಮೂಲಕ ಹಿಂದಿಯೇತರ ರಾಜ್ಯಗಳಲ್ಲಿನ ಸ್ಥಳೀಯ ಭಾಷೆಗಳನ್ನು ಕೊಲ್ಲಲು ಹೊರಟಿದೆ. ಕಾರ್ಮಿಕರ, ಬಡವರ ನೈಜ ಹೋರಾಟಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಈ ಕುತಂತ್ರವನ್ನು ಅರಿಯಬೇಕಾಗಿದೆ.

-ದೇಬಸಿಶ್ ರಾಯ್, ಪ್ರಧಾನ ಕಾರ್ಯದರ್ಶಿ, ಆಲ್ ಇಂಡಿಯಾ ಬೀಡಿ ವರ್ಕರ್ಸ್ ಫೆಡರೇಶನ್

share
Next Story
X