Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಸ್ತೆ ಗುಂಡಿ ಮುಚ್ಚಲೂ ಸರಕಾರದ ಬಳಿ...

ರಸ್ತೆ ಗುಂಡಿ ಮುಚ್ಚಲೂ ಸರಕಾರದ ಬಳಿ ಹಣವಿಲ್ಲ: ಶಾಸಕ ಯು.ಟಿ. ಖಾದರ್

31 Oct 2022 9:03 PM IST
share
ರಸ್ತೆ ಗುಂಡಿ ಮುಚ್ಚಲೂ ಸರಕಾರದ ಬಳಿ ಹಣವಿಲ್ಲ: ಶಾಸಕ ಯು.ಟಿ. ಖಾದರ್

ಬಂಟ್ವಾಳ (Bantwal): ರಸ್ತೆ ಗುಂಡಿಗಳಿಂದ ರಾಜ್ಯದಲ್ಲಿ ದಿನನಿತ್ಯ ಹಲವು ಅಪಘಾತಗಳು ಸಂಭವಿಸಿ ಸಾವು, ನೋವುಗಳು ನಡೆಯುತ್ತಿದ್ದರೂ ರಸ್ತೆ ಗುಂಡಿಗಳನ್ನು ಮುಚ್ಚಲು ರಾಜ್ಯ ಸರಕಾರದ ಬಳಿ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಯು.ಟಿ.ಖಾದರ್ (UT Khader) ಹೇಳಿದರು. 

ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇವಲ ರಸ್ತೆ ಗುಂಡಿಗಳನ್ನು ಮುಚ್ಚಲು ಸರಕಾರದ ಬಳಿ ಹಣವಿಲ್ಲ ಎಂದಾದರೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. 

ಬಿಜೆಪಿ ಸರಕಾರ ತನ್ನ ಅವಧಿಯಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಸಂಬಂಧಿಸಿದ ಯಾವುದಾದರೂ ಒಂದು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆಯೇ ಎಂದು ಪ್ರಶ್ನಿಸಿದ ಅವರು, ಪಡಿತರ ಚೀಟಿ, ನಿವೇಶನ, ವಸತಿ, ಶಿಕ್ಷಣ, ಆರೋಗ್ಯ ಸಹಿತ ಬಡವರಿಗೆ ನೀಡಲಾಗುತ್ತಿದ್ದ ಎಲ್ಲಾ ಯೋಜನೆಗಳನ್ನು ರಾಜ್ಯ ಸರಕಾರ ನಿಲ್ಲಿಸಿದೆ. ಅಂತ್ಯಸಂಸ್ಕಾರಕ್ಕೆ ನೀಡುತ್ತಿದ್ದ ಐದು ಸಾವಿರ ರೂ. ಅನ್ನು ಕೂಡಾ ರದ್ದು ಮಾಡಿದೆ. ಸರಕಾರಿ ನೌಕರಿಗೆ ಸಂಬಳ ಕೂಡಾ ಸಿಗುತ್ತಿಲ್ಲ ಎಂದು ಹೇಳಿದರು. 

ಪ್ರಾಮಾಣಿಕವಾಗಿ ದುಡಿಯುತ್ತಿದ್ದ ಅಧಿಕಾರಿಗಳನ್ನು ಕೂಡಾ ಭ್ರಷ್ಟರನ್ನಾಗಿ ಸರಕಾರ ಮಾಡಿದೆ. ಸಿದ್ದರಾಮಯ್ಯ ಸರಕಾರ ಹಲವಾರು ಜನಪರ ಯೋಜನೆಗಳನ್ನು, ರಾಜ್ಯದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕೆಲಸಗಳು ನಡೆಸಿದರೂ ಜನರು ಮತ್ತೆ ಕಾಂಗ್ರೆಸ್ ಗೆ ಅಧಿಕಾರ ನೀಡಿಲ್ಲ. ಬಿಜೆಪಿಯ ಸುಳ್ಳನ್ನು ನಂಬಿ ಅಧಿಕಾರ ನೀಡಿದ ಜನರು ಈಗ ಪ್ರಶ್ಚಾತ್ತಾಪ ಪಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನರು ಅಧಿಕಾರ ನೀಡಲಿದ್ದಾರೆ ಎಂದು ಹೇಳಿದರು. 

ಇದನ್ನೂ ಓದಿ: ಮಂಗಳೂರು: ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

ಬಂಟ್ವಾಳ ತಾಲೂಕಿಗೆ ಒಳಪಡುವ ತನ್ನ ಕ್ಷೇತ್ರದ ಗ್ರಾಮಗಳಿಗೆ ದಿನದ 24 ಗಂಟೆಯೂ ಕುಡಿಯುವ ನೀರಿನ ಮಹತ್ವದ ಯೋಜನೆಗೆ ಚಾಲನೆ ದೊರೆಯಲಿದ್ದು ಜನತೆಯ ಬಹುಕಾಲದ ಬೇಡಿಕೆ ಈಡೇರಲಿದೆ. ಪುದು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಾದರಿ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸುವ ಕೆಲಸ ಶೀರ್ಘದಲ್ಲೇ ನಡೆಯಲಿದೆ. ತುಂಬೆ - ಸಜಿಪನಡು ನೇತ್ರಾವತಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ಕೂಡಾ ಶೀರ್ಘದಲ್ಲೇ ಅನುಷ್ಠಾನಗೊಳ್ಳಲಿದೆ ಎಂದು ಅವರು ಹೇಳಿದರು. 

ಅಡ್ಯಾರ್ - ಪಾವೂರ್ ಡ್ಯಾಂ ಹಾಗೂ ಸೇತುವೆ ಕಾಮಗಾರಿ ಮುಕ್ತಾಯಗೊಂಡಿದ್ದು ಜನರ ಸೇವೆಗೆ ಲಭ್ಯವಾಗಲಿದೆ. ಉಳ್ಳಾಲ ತಾಲೂಕಿಗೆ ಪ್ರತ್ಯೇಕ ಮಿನಿ ವಿಧಾನ ಸೌಧ, ನ್ಯಾಯಲಯ ಸಹಿತ ವಿವಿಧ ಸರಕಾರಿ ಕಚೇರಿಗಳನ್ನು ಜನರಿಗೆ ಅನುಕೂಲ ಆಗುವಂತೆ ಬೇರೆ ಬೇರೆ ಸ್ಥಳಗಳಲ್ಲಿ ನಿರ್ಮಾಣವಾಗಲಿದೆ. ಕ್ಷೇತ್ರದಲ್ಲಿ 5 ಎಕ್ಕರೆ ಜಾಗವನ್ನು ಗುರುತಿಸಲಾಗಿದ್ದು ಈ ಜಾಗವನ್ನು ತುಳು ಗ್ರಾಮವಾಗಿ ರೂಪಿಸಲಾಗುವುದು. ಇಲ್ಲಿ ಕಂಬಳ, ತುಳು ನಾಡಿನ ಇತಿಹಾಸ, ಸಂಸ್ಕೃತಿ, ತುಳು ನಾಡಿದ ವೀರ ಪುರುಷರ ಚರಿತ್ರೆ, ಭಾಷೆ, ಜಾತಿ, ಜನಾಂಗದ ಇತಿಹಾಸವನ್ನು ತಿಳಿಸುವ ಯುವ ಪೀಳಿಗೆಗೆ ಹಾಗೂ ಪ್ರವಾಸಿಗರಿಗೆ ತಿಳಿಸುವ ಕಾರ್ಯ ವಿಧಾನ ಈ ತುಳು ಗ್ರಾಮದಲ್ಲಿ ಇರಲಿದೆ ಎಂದರು. 

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ಉಮರ್ ಫಾರೂಕ್ ಫರಂಗಿಪೇಟೆ, ತಾಪಂ ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಇರಾ ಗ್ರಾಪಂ ಮಾಜಿ ಅಧ್ಯಕ್ಷ ರಝಾಕ್ ಕುಕ್ಕಾಜೆ ಮೊದಲಾದವರು ಉಪಸ್ಥಿತರಿದ್ದರು.

share
Next Story
X