Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಅತ್ಯಾಚಾರ ಸಂತ್ರಸ್ತೆಯರಿಗೆ ಎರಡು...

​ಅತ್ಯಾಚಾರ ಸಂತ್ರಸ್ತೆಯರಿಗೆ ಎರಡು ಬೆರಳುಗಳ ಪರೀಕ್ಷೆ ನಡೆಸಿದರೆ ದುರ್ನಡತೆಯ ಅಪರಾಧವಾಗಿ ಪರಿಗಣನೆ:ಸುಪ್ರೀಂ ಎಚ್ಚರಿಕೆ

31 Oct 2022 10:33 PM IST
share
​ಅತ್ಯಾಚಾರ ಸಂತ್ರಸ್ತೆಯರಿಗೆ ಎರಡು ಬೆರಳುಗಳ ಪರೀಕ್ಷೆ ನಡೆಸಿದರೆ ದುರ್ನಡತೆಯ ಅಪರಾಧವಾಗಿ ಪರಿಗಣನೆ:ಸುಪ್ರೀಂ ಎಚ್ಚರಿಕೆ

 ಹೊಸದಿಲ್ಲಿ,ಅ.31: ತನ್ನ ಮೇಲೆ ಅತ್ಯಾಚಾರ(rape) ನಡೆದಿದೆ ಎಂದು ಹೇಳಿಕೊಂಡ ಮಹಿಳೆಯ ಮೇಲೆ ನಿಷೇಧಿತ ಎರಡು ಬೆರಳುಗಳ ಪರೀಕ್ಷೆ ನಡೆಸುವ ಯಾವುದೇ ವ್ಯಕ್ತಿಯನ್ನು ದುರ್ನಡತೆಯ ಅಪರಾಧಿ ಎಂದು ಪರಿಗಣಿಸಲಾಗುವುದು ಎಂದು ಸರ್ವೋಚ್ಚ ನ್ಯಾಯಾಲಯ(Supreme Court)ವು ಸೋಮವಾರ ಎಚ್ಚರಿಕೆ ನೀಡಿದೆ.


ಇಂದಿಗೂ ಇಂತಹ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ವಿಚಾರಣೆ ಸಂದರ್ಭದಲ್ಲಿ ಹೇಳಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ (DY Chandrachud)ಮತ್ತು ಹಿಮಾ ಕೊಹ್ಲಿ (Hima Kohli)ಅವರ ಪೀಠವು,ಈ ನ್ಯಾಯಾಲಯವು ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆಪಾದಿತ ಪ್ರಕರಣಗಳಲ್ಲಿ ಎರಡು ಬೆರಳುಗಳ ಪರೀಕ್ಷೆಯ ಬಳಕೆಯನ್ನು ಪದೇ ಪದೇ ನಿರಾಕರಿಸಿದೆ. ಈ ತಥಾಕಥಿತ ಪರೀಕ್ಷೆಗೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ. ಬದಲಿಗೆ ಈ ಪರೀಕ್ಷೆಯು ಸಂತ್ರಸ್ತೆಯರನ್ನು ಮತ್ತೆ ಬಲಿಪಶುಗಳನ್ನಾಗಿಸುತ್ತದೆ ಮತ್ತು ಅವರಿಗೆ ಮತ್ತೆ ಆಘಾತವನ್ನುಂಟು ಮಾಡುತ್ತದೆ. ಎರಡು ಬೆರಳಿನ ಪರೀಕ್ಷೆಯನ್ನು ನಡೆಸಲೇಬಾರದು ಎಂದು ತಾಕೀತು ಮಾಡಿತು.


ಎರಡು ಬೆರಳುಗಳ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ ಎನ್ನುವುದನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಖಚಿತಪಡಿಸಿಕೊಳ್ಳಬೇಕು ಎಂದು ಆದೇಶಿಸಿದ ಪೀಠವು,ಎಲ್ಲ ಸರಕಾರಿ ಮತ್ತು ಖಾಸಗಿ ಮೆಡಿಕಲ್ ಕಾಲೇಜುಗಳ ಪಠ್ಯಕ್ರಮಗಳನ್ನು ಪುನರ್ಪರಿಶೀಲಿಸುವಂತೆ ಮತ್ತು ಎರಡು ಬೆರಳುಗಳ ಪರೀಕ್ಷೆಗೆ ಸಂಬಂಧಿಸಿದ ಅಧ್ಯಯನ ವಿಷಯವನ್ನು ತೆಗೆದುಹಾಕುವಂತೆ ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳಿಗೆ ಸೂಚಿಸಿತು.
ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರ ಪರೀಕ್ಷೆಗಾಗಿ ಸೂಕ್ತ ಕಾರ್ಯವಿಧಾನವನ್ನು ತಿಳಿಸಲು ವೈದ್ಯಕೀಯ ವೃತ್ತಿಪರರಿಗಾಗಿ ಕಾರ್ಯಾಗಾರಗಳನ್ನು ನಡೆಸುವಂತೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೂ ಸರ್ವೋಚ್ಚ ನ್ಯಾಯಾಲಯವು ನಿರ್ದೇಶಿಸಿತು.


ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ಘೋಷಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿದ್ದ ತೆಲಂಗಾಣ ಉಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆ ಸಂದರ್ಭ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲಯವು,ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯಿತು.


ಎರಡು ಬೆರಳುಗಳ ಪರೀಕ್ಷೆಯು ಲೈಂಗಿಕವಾಗಿ ಸಕ್ರಿಯವಾಗಿರುವ ಮಹಿಳೆಯು ಅತ್ಯಾಚಾರಕ್ಕೊಳಗಾಗಲು ಸಾಧ್ಯವಿಲ್ಲ ಎಂಬ ತಪ್ಪು ಕಲ್ಪನೆಯನ್ನು ಆಧರಿಸಿದೆ. ಮಹಿಳೆ ಲೈಂಗಿಕವಾಗಿ ಸಕ್ರಿಯಳಾಗಿದ್ದಾಳೆ ಎಂಬ ಮಾತ್ರಕ್ಕೆ ಆಕೆ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಿದಾಗಿ ಆಕೆಯನ್ನು ನಂಬಲು ಸಾಧ್ಯವಿಲ್ಲ ಎನ್ನುವುದು ಪುರುಷ ಪ್ರಧಾನ ಮತ್ತು ಸ್ತ್ರೀದ್ವೇಷಿ ಧೋರಣೆಯಾಗುತ್ತದೆ.

share
Next Story
X