Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೊಡ್ಡ ಹುದ್ದೆಗಾಗಿ ಆಪ್‍ಗೆ 50 ಕೋಟಿ ರೂ....

ದೊಡ್ಡ ಹುದ್ದೆಗಾಗಿ ಆಪ್‍ಗೆ 50 ಕೋಟಿ ರೂ. ನೀಡಿದ್ದೆ: ವಂಚನೆ ಪ್ರಕರಣದ ಆರೋಪಿಯಿಂದ ದಿಲ್ಲಿ ಗವರ್ನರ್‌ ಗೆ ಪತ್ರ

1 Nov 2022 5:54 PM IST
share
ದೊಡ್ಡ ಹುದ್ದೆಗಾಗಿ ಆಪ್‍ಗೆ 50 ಕೋಟಿ ರೂ. ನೀಡಿದ್ದೆ: ವಂಚನೆ ಪ್ರಕರಣದ ಆರೋಪಿಯಿಂದ ದಿಲ್ಲಿ ಗವರ್ನರ್‌ ಗೆ ಪತ್ರ

ಹೊಸದಿಲ್ಲಿ,ನ.1: ಪ್ರಸ್ತುತ ಬಂಧನದಲ್ಲಿರುವ ಆಪ್ ಸಚಿವ ಸತ್ಯೇಂದ್ರ ಜೈನ್ ಅವರಿಗೆ ‘ಪ್ರೊಟೆಕ್ಷನ್ ಮನಿ’ ರೂಪದಲ್ಲಿ ತಾನು 10 ಕೋ.ರೂ.ಗಳನ್ನು ನೀಡಿದ್ದೆ,ಆದಾಗ್ಯೂ ಅವರು ತನಗೆ ಬೆದರಿಕೆಯೊಡ್ಡುತ್ತಿದ್ದಾರೆ ಮತ್ತು ಕಿರುಕುಳ ನೀಡುತ್ತಿದ್ದಾರೆ ಎಂದು ಹಾಲಿ ಜೈಲಿನಲ್ಲಿರುವ ವಂಚಕ ಸುಕೇಶ ಚಂದ್ರಶೇಖರ ದಿಲ್ಲಿಯ ಉಪ ರಾಜ್ಯಪಾಲ ವಿ.ಕೆ.ಸಕ್ಸೇನಾ ಅವರಿಗೆ ಬರೆದಿರುವ ಪತ್ರದಲ್ಲಿ ಆರೋಪಿಸಿದ್ದಾನೆ. 

ದಕ್ಷಿಣ ವಲಯದಲ್ಲಿ ಪಕ್ಷದ ಪ್ರಮುಖ ಸ್ಥಾನದ ಭರವಸೆ ನೀಡಿದ್ದರಿಂದ ಆಪ್‌ಗೂ ತಾನು 50 ಕೋ.ರೂ. ನೀಡಿರುವುದಾಗಿ ಆತ ಹೇಳಿದ್ದಾನೆ. ಇದನ್ನು ತಳ್ಳಿ ಹಾಕಿರುವ ಆಪ್ ವರಿಷ್ಠ ಅರವಿಂದ ಕೇಜ್ರಿವಾಲ್ ಅವರು,ವಂಚಕನನ್ನು ಬಿಜೆಪಿ ಅವಲಂಬಿಸಬೇಕಾಗಿರುವುದು ಗುಜರಾತಿನಲ್ಲಿ ಅದರ ಹತಾಶ ಸ್ಥಿತಿಯನ್ನು ತೋರಿಸುತ್ತಿದೆ ಮತ್ತು ಇದು ಮೊರ್ಬಿ ದುರಂತದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಂಚಾಗಿದೆ ಎಂದು ಹೇಳಿದ್ದಾರೆ. 

ಈ ನಡುವೆ ಆಪ್ ವಿರುದ್ಧ ದಾಳಿ ನಡೆಸಿರುವ ಬಿಜೆಪಿ,ಅದೊಂದು ‘ಭ್ರಷ್ಟ ಪಕ್ಷ ’ಎಂದು ಬಣ್ಣಿಸಿದೆ.ಸುಕೇಶ ಹೇಳಿಕೆಗಳ ಕುರಿತು ಜಾರಿ ನಿರ್ದೇಶನಾಲಯ (ಈ.ಡಿ)ವು ತನಿಖೆಯನ್ನು ಆರಂಭಿಸಿದೆ.2015ರಿಂದಲೂ ತಾನು ಜೈನ್‌ರನ್ನು ಬಲ್ಲೆ ಎಂದು ಸುಕೇಶ ಪತ್ರದಲ್ಲಿ ಹೇಳಿದ್ದಾನೆ. ಜೈನ್,ಆಪ್ ಮತ್ತು ಕಾರಾಗೃಹಗಳ ಮಹಾ ನಿರ್ದೇಶಕರಿಗೆ ಹಣ ನೀಡಿದ್ದನ್ನು ತಾನು ಕಳೆದ ತಿಂಗಳು ಸಿಬಿಐ ತಂಡಕ್ಕೆ ತಿಳಿಸಿದ್ದೆ ಮತ್ತು ಸಿಬಿಐ ತನಿಖೆಯನ್ನು ಕೋರಿ ದಿಲ್ಲಿ ಉಚ್ಚ ನ್ಯಾಯಾಲಯಕ್ಕೆ ದೂರುಅರ್ಜಿಯನ್ನೂ ಸಲ್ಲಿಸಿದ್ದೇನೆ ಎಂದು ಆತ ತಿಳಿಸಿದ್ದಾನೆ. ದೂರನ್ನು ಹಿಂದೆಗೆದುಕೊಳ್ಳುವಂತೆ ಜೈನ್ ತನಗೆ ಬೆದರಿಕೆಯನ್ನು ಒಡ್ಡುತ್ತಿದ್ದಾರೆ ಎಂದು ಆತ ಆರೋಪಿಸಿದ್ದಾನೆ.

ಹಿರಿಯ ಜೈಲು ಅಧಿಕಾರಿಗಳು ಸುಕೇಶನಿಂದ ಲಂಚವನ್ನು ಪಡೆದಿದ್ದು ತನಿಖೆಯ ಸಂದರ್ಭ ಬೆಳಕಿಗೆ ಬಂದಿತ್ತಾದರೂ,ಆತ ಈಗ ತಿಳಿಸಿರುವ ವಿಷಯಗಳು ಸಂಪೂರ್ಣ ಹೊಸದಾಗಿವೆ. ತಾನು ಇದನ್ನು ಗಂಭೀರವಾಗಿ ಪರಿಗಣಿಸಿದ್ದು,ಸಮಗ್ರ ತನಿಖೆಯನ್ನು ನಡೆಸಲಿದ್ದೇನೆ. ಈ ಕುರಿತು ಶೀಘ್ರವೇ ಸುಕೇಶನನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಈ.ಡಿ.ತಿಳಿಸಿದೆ

share
Next Story
X