ವಿದ್ಯುತ್ ತಂತಿ ಸ್ಪರ್ಶಿಸಿ ಮೃತ್ಯು

ಕಾರ್ಕಳ, ನ.1: ವಿದ್ಯುತ್ ಕಂಬದಿಂದ ತುಂಡಾಗಿ ನೇತಾಡುತ್ತಿದ್ದ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.1ರಂದು ಬೆಳಗ್ಗೆ ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಎಂಬಲ್ಲಿ ನಡೆದಿದೆ.
ಮೃತರನ್ನು ರಾಮಕೃಷ್ಣ ನಾಯ್ಕ (54) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿ ಬಿದ್ದಿದ್ದ ಗುಜುರಿ ವಸ್ತುಗಳನ್ನು ಹೆಕ್ಕಲು ಹೋಗಿದ್ದು ಈ ವೇಳೆ ಇವರು ವಿದ್ಯುತ್ ಕಂಬದಲ್ಲಿ ನೇತಾಡುತ್ತಿದ್ದ ವಿದ್ಯುತ್ ವಯರನ್ನು ಆಕಸ್ಮಿಕವಾಗಿ ಮುಟ್ಟಿದ ರೆನ್ನಲಾಗಿದೆ. ಇದರಿಂದ ವಿದ್ಯುತ್ ಆಘಾತಕ್ಕೆ ಒಳಗಾದ ಅವರು ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





