Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾದ ಲಡಾಖ್ ಪ್ರವೇಶ ತಡೆಯದ ಕೇಂದ್ರ...

ಚೀನಾದ ಲಡಾಖ್ ಪ್ರವೇಶ ತಡೆಯದ ಕೇಂದ್ರ ನನ್ನನ್ನು ಕಾರ್ಗಿಲ್ ಗೆ ಬಿಡುತ್ತಿಲ್ಲ: ಉಮರ್ ಅಬ್ದುಲ್ಲಾ

1 Nov 2022 10:50 PM IST
share
ಚೀನಾದ ಲಡಾಖ್ ಪ್ರವೇಶ ತಡೆಯದ ಕೇಂದ್ರ ನನ್ನನ್ನು ಕಾರ್ಗಿಲ್ ಗೆ ಬಿಡುತ್ತಿಲ್ಲ: ಉಮರ್ ಅಬ್ದುಲ್ಲಾ

ಹೊಸದಿಲ್ಲಿ,ನ.1: ಲಡಾಖ್‌ನಲ್ಲಿಯ ಅಧಿಕಾರಿಗಳು ತಾನು ಕಾರ್ಗಿಲ್ ಪ್ರವೇಶಿಸುವುದನ್ನು ತಡೆಯಲು ಪ್ರಯತ್ನಿಸಿದ್ದರು ಎಂದು ನ್ಯಾಷನಲ್ ಕಾನ್ಫರೆನ್ಸ್‌ನ ಉಪಾಧ್ಯಕ್ಷ ಉಮರ್ ಅಬ್ದುಲ್ಲಾ ಹೇಳಿದ್ದಾರೆ.

ಇಲ್ಲಿಗೆ ಬರಬಾರದು ಎಂದು ಅವರು ತನಗೆ ಹೇಳಿದ್ದರು ಎಂದು ಕಾರ್ಗಿಲ್ ಸಮೀಪದ ದ್ರಾಸ್ ಪಟ್ಟಣದಲ್ಲಿ ತನ್ನ ಬೆಂಬಲಿಗರಿಗೆ ತಿಳಿಸಿದ ಅಬ್ದುಲ್ಲಾ,‘ಈಶಾನ್ಯ ಲಡಾಖ್‌ನಲ್ಲಿ ಚೀನಾ ಪ್ರವೇಶಿಸಿದಾಗ ಅವರನ್ನು ತಡೆಯಲು ನಿಮಗೆ ಸಾಧ್ಯವಾಗಲಿಲ್ಲ,ಅವರನ್ನು ವಾಪಸ್ ಕಳುಹಿಸಲಾಗಲಿಲ್ಲ. ನಾವು ದ್ರಾಸ್ ಮೂಲಕ ಶ್ರೀನಗರದಿಂದ ಕಾರ್ಗಿಲ್‌ಗೆ ಹೋಗುತ್ತಿದ್ದೇವೆ ಅಷ್ಟೇ. ನಾವು ಪಟ್ಟಣವನ್ನು ವಶಪಡಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ’ಎಂದರು.

ಕಾರ್ಯಕರ್ತರ ಸಭೆಯಲ್ಲಿ ತಾನು ಮೈಕ್ರೋಫೋನ್ ಬಳಸುವುದನ್ನು ಮತ್ತು ಡ್ರಾಸ್‌ನ ಡಾಕ್ ಬಂಗಲೆಯಲ್ಲಿ ತಂಗುವುದನ್ನು ತಡೆಯಲಾಗಿತ್ತು ಎಂದ ಅವರು,ಆರು ವರ್ಷಗಳ ಕಾಲ ತಾನು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದೆ,ಆದರೆ ಅವರ ಕೆಲವು ನಿರ್ಧಾರಗಳನ್ನು ಅರ್ಥ ಮಾಡಿಕೊಳ್ಳಲು ತಾನು ವಿಫಲನಾಗಿದ್ದೇನೆ. ಡಾಕ್ ಬಂಗಲೆಯನ್ನು ತಾನು ಹೆಚ್ಚೆಂದರೆ ದಣಿವಾರಿಸಿಕೊಳ್ಳಲು ಬಳಸುತ್ತಿದ್ದೆ ಎಂದರು. ಸ್ಥಳೀಯ ಉಪವಿಭಾಗಾಧಿಕಾರಿಗಳು ತನ್ನ ತಂಡದ ಚಟುವಟಿಕೆಗಳ ಮೇಲೆ ಕಣ್ಣಿರಿಸಿದ್ದಾರೆ ಎಂದು ತಿಳಿಸಿದ ಅಬ್ದುಲ್ಲಾ,‘ಇದು ಮೊದಲನೆಯದಾಗಿ ಜಮ್ಮು-ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸುವ ತನ್ನದೇ ನಿರ್ಧಾರದ ಬಗ್ಗೆ ಆಡಳಿತವು ಎಷ್ಟೊಂದು ಅಸ್ಥಿರವಾಗಿದೆ ಎನ್ನುವುದನ್ನು ತೋರಿಸುತ್ತಿದೆ. ಯಾವುದೇ ಬಹಿರಂಗ ಸಭೆ ಅಥವಾ ಜಾಥಾ ನಡೆಸುವುದು ನಮ್ಮ ಉದ್ದೇಶವಲ್ಲ, ಆದಾಗ್ಯೂ ಅವರು ಮೈಕ್ ಕಿತ್ತುಕೊಳ್ಳುವಂತಹ ಚಿಲ್ಲರೆ ಕೆಲಸಗಳನ್ನು ಮಾಡಿದ್ದಾರೆ. ಎರಡನೆಯದಾಗಿ ಪ್ರಾಥಮಿಕ ಆತಿಥ್ಯ ನೀಡುವಲ್ಲಿಯೂ ಅವರು ಎಷ್ಟು ಕಳಪೆಯಾಗಿದ್ದಾರೆ ಎನ್ನುವುದನ್ನು ತೋರಿಸುತ್ತಿದೆ ’ ಎಂದರು.

ಕಾರ್ಗಿಲ್ ಮತ್ತು ಲೇಹ್ ಪ್ರಜೆಗಳ ಬೇಡಿಕೆಗಳನ್ನು ಉಲ್ಲೇಖಿಸುವ ಮೂಲಕ ಕೇಂದ್ರವು ತನ್ನ 2019,ಆ.5ರ ನಿರ್ಧಾರವನ್ನು ಸಮರ್ಥಿಸಿಕೊಂಡಿತ್ತು ಎಂದ ಅವರು,ಈ ಪ್ರದೇಶಗಳಿಗೆ ಭೇಟಿಗೆ ತನಗೆ ಅವಕಾಶ ನೀಡಲು ಸರಕಾರವೇಕೆ ಹೆದರುತ್ತಿದೆ ಎಂದು ಪ್ರಶ್ನಿಸಿದರು.

 ಗಡಿಗಳನ್ನು ಎಳೆಯುವ ಮೂಲಕ ಜಮ್ಮು-ಕಾಶ್ಮೀರ ಮತ್ತು ಲಡಾಖ್ ನಿವಾಸಿಗಳ ನಡುವಿನ ಶತಮಾನಗಳಷ್ಟು ಹಳೆಯ ಸಂಬಂಧಗಳನ್ನು ಕಡಿಯಲು ಸರಕಾರಕ್ಕೆ ಸಾಧ್ಯವಿಲ್ಲ ಎಂದ ಅಬ್ದುಲ್ಲಾ,‘ನಮ್ಮ ಸಂಬಂಧಗಳು ಅತ್ಯಂತ ಬಲವಾಗಿವೆ ಮತ್ತು ಈ ನಕಲಿ ಗೆರೆಗಳು ಅದನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ. ನಿಮ್ಮ ನೋವು ನಮಗೆ ಅರ್ಥವಾಗುತ್ತಿದೆ,ನಿಮ್ಮನ್ನು ಕಡೆಗಣಿಸಲಾಗುತ್ತಿದೆ ಎನ್ನುವುದು ನಮಗೆ ಗೊತ್ತಿದೆ ’ಎಂದರು.

share
Next Story
X