Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್...

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆಗೆ ವಿಫಲ ಯತ್ನ

ವಝೀರಾಬಾದ್ ರ್ಯಾಲಿಯಲ್ಲಿ ಗುಂಡಿನ ದಾಳಿ

3 Nov 2022 5:21 PM IST
share
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆಗೆ ವಿಫಲ ಯತ್ನ
ವಝೀರಾಬಾದ್ ರ್ಯಾಲಿಯಲ್ಲಿ ಗುಂಡಿನ ದಾಳಿ

ಹೊಸದಿಲ್ಲಿ,ನ.3:  ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಗುರುವಾರ ಸಂಜೆ ನಡೆದ ರ್ಯಾಲಿಯೊಂದರಲ್ಲಿ  ದುಷ್ಕರ್ಮಿಗಳ ಗುಂಡಿನ ದಾಳಿಗೆ  ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್   ಅವರು ಗಾಯಗೊಂಡಿದ್ದಾರೆ.

ವಜೀರಾಬಾದ್ನಲ್ಲಿ ನಡೆದ ಪಾಕ್ ತೆಹ್ರಿಕೆ ಇನ್ಸಾಫ್ (ಪಿಟಿಐ)ಪಕ್ಷದ ರ್ಯಾಲಿಯಲ್ಲಿ ಇಮ್ರಾನ್ ಖಾನ್ ಅವರಿದ್ದ ಕಂಟೈನರ್ ಟ್ರಕ್ ಮೇಲೆ ಅಜ್ಞಾತ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿದ್ದು,  ಅವರ ಕಾಲಿಗೆ ಗಾಯವಾಗಿದೆ. ಘಟನೆಯಲ್ಲಿ  ಪಿಟಿಐ ಪಕ್ಷದ ನಾಯಕರಾದ  ಫೈಸಲ್ ಜಾವೆದ್ ಹಾಗೂ ಅಹ್ಮದ್ ಛಟ್ಟಾ ಎಂಬವರಿಗೆ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.

ಸಾರ್ವತ್ರಿಕ ಚುನಾವಣೆಗಳನ್ನು ತ್ವರಿತವಾಗಿ ನಡೆಸಬೇಕೆಂದು ಪಾಕ್ ಸರಕಾರವನ್ನು ಆಗ್ರಹಿಸಿ ಇಮ್ರಾನ್ಖಾನ್ ನೇತೃತ್ವದ ಪಾಕ್ ತೆಹ್ರಿಕೆ ಇನ್ಸಾಫ್ ಪಕ್ಷವು  ಲಾಹೋರ್ನಿಂದ ಇಸ್ಲಾಮಾಬಾದ್ವರೆಗೆ ಬೃಹತ್ ರ್ಯಾಲಿಯನ್ನು  ಹಮ್ಮಿಕೊಂಡಿದೆ. ಕಳೆದ ಶುಕ್ರವಾರ ಆರಂಭಗೊಂಡ ರ್ಯಾಲಿಯು ಗುರುವಾರ ವಝೀರಾಬಾದ್ ತಲುಪಿತ್ತು.

ಗುಂಡೇಟಿನಿಂದಾಗಿ 70ವರ್ಷದ ಇಮ್ರಾನ್ ಅವರ ಬಲಗಾಲಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ಇಮ್ರಾನ್ ಅವರನ್ನು ಕಂಟೈನರ್ ಟ್ರಕ್ನಿಂದ ಇನ್ನೊಂದು ವಾಹನಕ್ಕೆ ವರ್ಗಾಯಿಸಿ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಅಲ್ಲಿಂದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಬಳಿಕ ಇಮ್ರಾನ್ ಖಾನ್ ಅವರು ಸುರಕ್ಷಿತವಾಗಿದ್ದಾರೆಂದು  ರ್ಯಾಲಿಯಲ್ಲಿ ಘೋಷಿಸಲಾಯಿತು. ಘಟನೆಯಲ್ಲಿ ಇಮ್ರಾನ್ ಖಾನ್ ಅವರ ಬೆಂಬಲಿಗನೊಬ್ಬ ಗುಂಡೇಟಿಂದ ಮೃತಪಟ್ಟಿರುವುದಾಗಿ ಕೆಲವು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಗುಂಡಿನ ದಾಳಿಯಲ್ಲಿ  ತೆಹ್ರೀಕೆ ಇನ್ಸಾಫ್ ಪಕ್ಷದ ಪದಾಧಿಕಾರಿ ಅಸಾದ್ ಉಮರ್ ಅವರ  ಕಾಲಿಗೂ ಗಾಯವಾಗಿದೆ.  ಬಂದೂಕುಧಾರಿಯನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು ಆತನ ಗುರುತು ಇನ್ನೂ ಪತ್ತೆಯಾಗಿಲ್ಲವೆಂದು ತಿಳಿದುಬಂದಿದೆ.ಈವರೆಗೆ ಈ ಗುಂಡಿನ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ವಹಿಸಿಕೊಂಡಿಲ್ಲ.

‘‘ ಇಮ್ರಾನ್ ಖಾನ್ರ ಬಲಗಾಲಿಗೆ ಗಾವಾಗಿದ್ದು,  ಅವರನ್ನು  ಲಾಹೋರ್ನ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ. ಆದರೆ ಅವರಿಗೆ ಗಂಭೀರವಾದ ಗಾಯವಾಗಿಲ್ಲವೆಂದು  ಇಮ್ರಾನ್ ಅವರ ನಿಕಟವರ್ತಿ ರವೂಫ್ ಹಸ್ಸನ್ ತಿಳಿಸಿದ್ದಾರೆ. ಇದು ಇಮ್ರಾನ್ ಖಾನ್ ಅವರನ್ನು ಹತ್ಯೆಗೈಯುವ  ಪ್ರಯತ್ನವಾಗಿದೆಯೆಂದು ರವೂಫ್ ಹಸನ್ ಆರೋಪಿಸಿದ್ದಾರೆ.

 ಈ ನಡುವೆ ಇಮ್ರಾನ್ ಖಾನ್ ರ್ಯಾಲಿಯಲ್ಲಿ ನಡೆದ ಗುಂಡೆಸೆತದ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಪಾಕ್ ಸರಕಾರ ಆದೇಶ ನೀಡಿದೆ.

ಲಾಹೋರ್ನಿಂದ ಇಸ್ಲಾಮಾಬಾದ್ವರೆಗಿನ ತನ್ನ ದೀರ್ಘರ್ಯಾಲಿಯಲ್ಲಿ ಪ್ರತಿ ದಿನವೂ ಇಮಾರನ್ ಖಾನ್ ಅವರು ಟ್ರಕ್ನಲ್ಲಿ ಜೋಡಿಸಲಾದ ಶಿಪ್ಪಿಂಗ್ ಕಂಟೈನರ್ನಲ್ಲಿ ನಿಂತು ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದರು.

ಪಾಕ್ ನ ವಿವಿಧೆಡೆ ಪ್ರತಿಭಟನೆ

ವಝೀರಾಬಾದ್ನಲ್ಲಿ  ಇಮ್ರಾನ್ ಖಾನ್ ಅವರ ಮೇಲೆ ಗುಂಡಿನ ದಾಳಿಯನ್ನು ಖಂಡಿಸಿ ಪಾಕಿಸ್ತಾನದ ವಿವಿಧೆಡೆ ಪ್ರತಿಭಟನೆಗಳು ಭುಗಿಲೆದ್ದಿರುವುದಾಗಿ ವರದಿಯಾಗಿದೆ. ಕ್ವೆಟ್ಟಾ ನಗರದಲ್ಲಿ ಪ್ರತಿಭಟನಕಾರರು ವಿಮಾನನಿಲ್ದಾಣ ರಸ್ತೆಯಲ್ಲಿ ಧರಣಿ ನಡೆಸಿದ  ಪರಿಣಾಮವಾಗಿ ಆಸುಪಾಸಿನ ಪ್ರದೇಶಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತು. ಶರಾಯೆ ಫೈಸಲ್, ಉತ್ತರ ನಝೀಮಾಬಾದ್, ಲಾಂಧಿ, ಕ್ವೆದಾಬಾದ್, ಉತ್ತರ ಕರಾಚಿ, ಹಬ್ ನದಿ ರಸ್ತೆ ಹಾಗೂ ಮೌರಿಪುರ್ ನಗರಗಳಲ್ಲಿಯೂ ಪ್ರತಿಭಟನೆಗಳು ನಡೆದಿರುವುದಾಗಿ ವರದಿಯಾಗಿವೆ.

share
Next Story
X