Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜೈವಿಕ ಶಸ್ತ್ರಾಸ್ತ್ರಗಳ ತನಿಖೆ: ರಶ್ಯದ...

ಜೈವಿಕ ಶಸ್ತ್ರಾಸ್ತ್ರಗಳ ತನಿಖೆ: ರಶ್ಯದ ಪ್ರಸ್ತಾವಕ್ಕೆ ವಿಶ್ವಸಂಸ್ಥೆ ನಕಾರ

3 Nov 2022 10:58 PM IST
share
ಜೈವಿಕ ಶಸ್ತ್ರಾಸ್ತ್ರಗಳ ತನಿಖೆ: ರಶ್ಯದ ಪ್ರಸ್ತಾವಕ್ಕೆ ವಿಶ್ವಸಂಸ್ಥೆ ನಕಾರ

ವಿಶ್ವಸಂಸ್ಥೆ, ನ.3: ಉಕ್ರೇನ್ ಹಾಗೂ ಅಮೆರಿಕಗಳು ಮಿಲಿಟರಿ ಜೈವಿಕ (Military bio)ಚಟುವಟಿಕೆಯನ್ನು ನಡೆಸುತ್ತಿದ್ದು ಇದು ಜೈವಿಕ ಶಸ್ತ್ರಾಸ್ತ್ರಗಳ ಬಳಕೆಯನ್ನು ನಿಷೇಧಿಸಿರುವ ನಿರ್ಣಯದ ಉಲ್ಲಂಘನೆಯಾಗಿದೆ. ಆದ್ದರಿಂದ ಈ ಬಗ್ಗೆ ತನಿಖೆಗಾಗಿ ಆಯೋಗವನ್ನು ರಚಿಸಬೇಕು ಎಂಬ ರಶ್ಯದ ಪ್ರಸ್ತಾವನೆಯನ್ನು ವಿಶ್ವಸಂಸ್ಥೆ(WHO) ಭದ್ರತಾ ಮಂಡಳಿ ಬಹುಮತದಿಂದ ತಿರಸ್ಕರಿಸಿದೆ.

   ಈ ಕುರಿತ ನಿರ್ಣಯವನ್ನು ಮತದಾನಕ್ಕೆ ಹಾಕಿದಾಗ ಚೀನಾ ಮಾತ್ರ ಬೆಂಬಲಿಸಿದೆ. ಅಮೆರಿಕ, ಬ್ರಿಟನ್ ಮತ್ತು ಫ್ರಾನ್ಸ್ ನಿರ್ಣಯದ ವಿರುದ್ಧ ಮತ ಚಲಾಯಿಸಿದರೆ, ಇತರ 10 ದೇಶಗಳು ಮತದಾನದಿಂದ ದೂರ ಉಳಿದವು. ನಿರ್ಣಯ ಅಂಗೀಕಾರಕ್ಕೆ ಕನಿಷ್ಟ 9 ಮತಗಳ ಅಗತ್ಯವಿದ್ದು ನಿರ್ಣಯವನ್ನು ತಿರಸ್ಕರಿಸಲಾಗಿದೆ ಎಂದು ಭದ್ರತಾ ಮಂಡಳಿ ಹೇಳಿದೆ.

2-3-10 ಮತಗಳು ಫೆಬ್ರವರಿ 24ರಿಂದ ಉಕ್ರೇನ್ ವಿರುದ್ಧ ರಶ್ಯದ ಕ್ರಮಗಳಿಗೆ ಭದ್ರತಾ ಮಂಡಳಿಯ ವಿರೋಧ ಮತ್ತು ಖಂಡನೆಯನ್ನು ಸೂಚಿಸುತ್ತದೆ. ಆದರೆ, ರಶ್ಯ ಮತ್ತು ಅದರ ಬೆಂಬಲಿಗ ದೇಶ ಚೀನಾಕ್ಕೆ ವೀಟೊ ಅಧಿಕಾರ ಇರುವುದರಿಂದ ರಶ್ಯದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಭದ್ರತಾ ಮಂಡಳಿಗೆ ಸಾಧ್ಯವಾಗುತ್ತಿಲ್ಲ.

 ಅಮೆರಿಕದ ರಕ್ಷಣಾ ಇಲಾಖೆಯ ನೆರವಿನೊಂದಿಗೆ ಉಕ್ರೇನ್ನ ಜೈವಿಕ ಪ್ರಯೋಗಾಲಯಗಳಲ್ಲಿ ಮಿಲಿಟರಿ ಜೈವಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸುವ ಹಾಗೂ ಈ ಕುರಿತ ವಿವರಣೆಯಿರುವ 310 ಪುಟಗಳ ಕರಡು ನಿರ್ಣಯವನ್ನು ರಶ್ಯ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸದಸ್ಯರಿಗೆ ರವಾನಿಸಿತ್ತು. ನಿರ್ಣಯಕ್ಕೆ ಸೋಲಾದ ಬಳಿಕ ಪ್ರತಿಕ್ರಿಯಿಸಿರುವ ರಶ್ಯದ ಉಪ ರಾಯಭಾರಿ ಡಿಮಿಟ್ರಿ ಪೊಲ್ಯಾಂಸ್ಕಿ ‘ ರಶ್ಯ ನೀಡಿದ ದೂರಿನ ಬಗ್ಗೆ ತನಿಖೆ ನಡೆಸಲು ಭದ್ರತಾ ಮಂಡಳಿಯ 15 ಸದಸ್ಯ ದೇಶಗಳ ಸದಸ್ಯರನ್ನು ಒಳಗೊಂಡ ಆಯೋಗ ರಚನೆಗೆ ಸಮಿತಿ ಸಕಾರಾತ್ಮಕಾಗಿ ಸ್ಪಂದಿಸದ ಬಗ್ಗೆ ತೀವ್ರ ನಿರಾಸೆಯಾಗಿದೆ’ ಎಂದಿದ್ದಾರೆ.

  ಜೈವಿಕ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ವಿಶ್ವಸಂಸ್ಥೆಯ ನಿಯಮಗಳು ತಮಗೆ ಅನ್ವಯಿಸುವುದಿಲ್ಲ ಮತ್ತು ಯಾವುದೇ ನಿಯಮವನ್ನು ತುಳಿಯಲು, ಅಥವಾ ಉಲ್ಲಂಘಿಸಲು ತಾವು ಸಿದ್ಧ ಎಂದು ಪಾಶ್ಚಿಮಾತ್ಯ ದೇಶಗಳು ಎಲ್ಲಾ ರೀತಿಯಲ್ಲೂ ತೋರಿಸಿಕೊಟ್ಟಿವೆ.

ಇದು ಅವರ ವಸಾಹತುಶಾಹಿ ಮನಸ್ಥಿತಿಯನ್ನು ಪ್ರದರ್ಶಿಸಿದೆ ಎಂದವರು ಹೇಳಿದ್ದಾರೆ. ರಶ್ಯದ ಕರಡು ಪ್ರಸ್ತಾವನೆ ತಪ್ಪು ಮಾಹಿತಿ, ಅಪ್ರಾಮಾಣಿಕತೆ, ಕೆಟ್ಟ ನಂಬಿಕೆ ಮತ್ತು ಭದ್ರತಾ ಮಂಡಳಿಗೆ ಗೌರವ ನೀಡದ ರೀತಿಯಲ್ಲಿ ಇರುವುದರಿಂದ ಅದರ ವಿರುದ್ಧ ಅಮೆರಿಕ ಮತ ಹಾಕಿದೆ ಎಂದು ವಿಶ್ವಸಂಸ್ಥೆಗೆ ಅಮೆರಿಕದ ರಾಯಭಾರಿ ಲಿಂಡಾ ಥಾಮಸ್ ಗ್ರೀನ್ಫೀಲ್ಡ್ ಪ್ರತಿಕ್ರಿಯಿಸಿದ್ದಾರೆ.

share
Next Story
X