Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ಸಿ-ಎಸ್ಟಿ ಸಮುದಾಯದ ಭೂ ಪರಿವರ್ತನೆಗೆ...

ಎಸ್ಸಿ-ಎಸ್ಟಿ ಸಮುದಾಯದ ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಲು ಸಚಿವರಿಗೆ ಮನವಿ

4 Nov 2022 7:59 PM IST
share
ಎಸ್ಸಿ-ಎಸ್ಟಿ ಸಮುದಾಯದ ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಲು ಸಚಿವರಿಗೆ ಮನವಿ

ಮಂಗಳೂರು : ಸರಕಾರದಿಂದ ಜಾಗ ಮಂಜೂರಾತಿ ಪಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರ ಭೂಪರಿವರ್ತನೆಗೆ ಅವಕಾಶ ಕಲ್ಪಿಸಬೇಕು ಎಂದು ಮುಖಂಡರು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಮನವಿ ಸಲ್ಲಿಸಿದ್ದಾರೆ.

ದ.ಕ.ಜಿಪಂನಲ್ಲಿರುವ ತನ್ನ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕರ ಕುಂದುಕೊರತೆ, ಅರ್ಜಿ ಸ್ವೀಕಾರದ ವೇಳೆ ಸಚಿವರಿಗೆ ಮನವಿ ಸಲ್ಲಿಸಿದ ಎಸ್ಸಿ-ಎಸ್ಟಿ ಮುಖಂಡರು ಸರಕಾರದಿಂದ ಜಾಗ ಮಂಜೂರಾದರೂ ಪಿಟಿಸಿಎಲ್ (ಪ್ರೊಹಿಬಿಷನಲ್ ಆಫ್ ಟ್ರಾನ್ಸಫರ್ ಆಫ್ ಸರ್‌ಟೈನ್ ಲಾಂಡ್ಸ್) ಜಾಗ ಎಂಬ ಕಾರಣಕ್ಕೆ ಅದನ್ನು ಪರಿವರ್ತನೆ (ಕನ್ವರ್ಷನ್)ಗೊಳಿಸಲು ಸಾಧ್ಯವಾಗುತ್ತಿಲ್ಲ. ಜಾಗ ಕನ್ವರ್ಷನ್ ಮಾಡಿಸದಿದ್ದರೆ ಮನೆ ನಿರ್ಮಿಸಲು ಸಾಲ ಸೌಲಭ್ಯ ಸಹಿತ ಸರಕಾರದ ಯಾವುದೇ ಸವಲತ್ತು ಸಿಗುತ್ತಿಲ್ಲ ಎಂದು ಹೇಳಿದರು.

ಕರಾವಳಿ ಜಿಲ್ಲೆಯ ಹೊರತು ಬೇರೆ ಕಡೆಗಳಲ್ಲಿ ಗ್ರಾಮ ಠಾಣಾ ಜಾಗಗಳು ಇರುವುದರಿಂದ ಅಲ್ಲಿ ಭೂಪರಿವರ್ತನೆಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಕರಾವಳಿ ಜಿಲ್ಲೆಯಲ್ಲಿ ಪ.ಜಾತಿ, ಪಂಗಡಕ್ಕೆ ಸರಕಾರ ಜಾಗ ನೀಡಿದರೂ ಪಿಟಿಸಿಎಲ್ ತೊಂದರೆಯಿಂದಾಗಿ ಭೂ ಪರಿವರ್ತನೆಯಾಗುತ್ತಿಲ್ಲ. ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ನಿಯಮಾನುಸಾರ ಪರಿವರ್ತನೆಗೆ ಅವಕಾಶ ಇಲ್ಲ ಎನ್ನುತ್ತಿದ್ದಾರೆ ಎಂದು ಎಸ್ಸಿ-ಎಸ್ಟಿ ಸಮುದಾಯ ಮುಖಂಡರು ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಅಹವಾಲು ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಈ ಸಮಸ್ಯೆ ಕರಾವಳಿಯಲ್ಲಿ ಮಾತ್ರ ಇದೆ. ಸ್ವಂತ ಜಾಗ ಇದ್ದರೂ ಮನೆ ನಿರ್ಮಾಣಕ್ಕೆ ಅಸಾಧ್ಯವಾದ ಪರಿಸ್ಥಿತಿ ಫಲಾನುಭವಿಗಳದ್ದಾಗಿದೆ. ಆ ಹಿನ್ನೆಲೆಯಲ್ಲಿ ನಿಗದಿತ ಕಾಲಾವಧಿವರೆಗೆ ಪರಭಾರೆಗೆ ಅವಕಾಶ ಇಲ್ಲ ಎಂಬ ಷರತ್ತು ವಿಧಿಸಿ ಭೂ ಪರಿವರ್ತನೆಗೆ ಅವಕಾಶ ಕಲ್ಪಿಸುವಂತೆ ಕೋರಿ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸರಕಾರ ಇತ್ತೀಚೆಗೆ ದೈವಾರಾಧಕರಿಗೆ ಮಾಸಾಶನ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ೫೮ ವರ್ಷದ ವಯೋಮಿತಿ ಹಾಗೂ ಕುಟುಂಬದ ವರಮಾನ ೧.೨೫ ಲಕ್ಷ ರೂ. ನಿಗದಿಪಡಿಸಲಾಗಿದೆ. ಇದರಿಂದಾಗಿ ಅರ್ಹತೆ ಇದ್ದರೂ ಈ ಷರತ್ತಿನಿಂದಾಗಿ ಅನೇಕ ಮಂದಿ ಮಾಸಾಶನದಿಂದ ವಂಚಿತಗೊಳ್ಳುತ್ತಿದ್ದಾರೆ. ಹಾಗಾಗಿ ವಯೋಮಿತಿಯನ್ನು ೫೫ ವರ್ಷ ಎಂದು ನಿಗದಿಪಡಿಸಬೇಕು. ಕುಟುಂಬದ ವರಮಾನ ಬದಲು ವ್ಯಕ್ತಿಯ ಆದಾಯ ಎಂದು ಮಿತಿ ವಿಧಿಸಬೇಕು ಎಂದು ಪಾಣಾರ ಸಮುದಾಯದ ಪ್ರಮುಖರು ಸಚಿವರಿಗೆ ಮನವಿ ಸಲ್ಲಿಸಿದರು.

share
Next Story
X