ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಗಂಭೀರ
ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದ ಪರಿಣಾಮ ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಂಗಳವಾರ ರಾತ್ರಿ ನಗರದ ಜಾಲಹಳ್ಳಿಯ ಗಂಗಮ್ಮ ಸರ್ಕಲ್ ಬಳಿ ಘಟನೆ ಸಂಭವಿಸಿದೆನ್ನಲಾಗಿದೆ. ವಿದ್ಯಾರಣ್ಯಪುರದ ನಿವಾಸಿಯಾಗಿರುವ ಸಂದೀಪ್ (37) ಎಂಬುವರ ತಲೆಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ತಲೆಗೆ ತೀವ್ರವಾಗಿ ಗಾಯವಾಗಿದ್ದಂತೆ ಶಸ್ತ್ರಚಿಕಿತ್ಸೆ ನಡೆಸಿ, ಕೋಮಾದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಸಾರ್ವಜನಿಕರ ಆಕ್ರೋಶ: ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರ ಜೀವ ಹಾನಿಯಾಗುತ್ತಿದ್ದರೂ ಎಚ್ಚೆತ್ತುಕೊಳ್ಳದ ಬಿಬಿಎಂಪಿಗೆ ಇನ್ನೆಷ್ಟು ಬಲಿ ಬೇಕು ಎಂದು ಜನರು ಪ್ರಶ್ನಿಸುತ್ತಿದ್ದಾರೆ.
ಇದನ್ನೂ ಓದಿ: ರಸ್ತೆಗುಂಡಿ ಮುಚ್ಚದಿದ್ದರೆ, ಅಮಾನತ್ತು: ಅಧಿಕಾರಿಗಳಿಗೆ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ
Next Story