Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ‘ನಿವೀಸ್ ಮ್ಯಾರಥಾನ್’ ಯಶಸ್ವಿ

ಮಂಗಳೂರು: ‘ನಿವೀಸ್ ಮ್ಯಾರಥಾನ್’ ಯಶಸ್ವಿ

6 Nov 2022 5:27 PM IST
share
ಮಂಗಳೂರು: ‘ನಿವೀಸ್ ಮ್ಯಾರಥಾನ್’ ಯಶಸ್ವಿ

ಮಂಗಳೂರು, ನ.6: ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಮಂಗಳೂರು ರನ್ನರ್ಸ್‌ ಕ್ಲಬ್ ವತಿಯಿಂದ ರವಿವಾರ ನಗರದಲ್ಲಿ ‘ನಿವೀಸ್ ಮಂಗಳೂರು ಮ್ಯಾರಥಾನ್-2022 ನಡೆಯಿತು.

ಸಾವಿರಾರು ಮಂದಿ ಉತ್ಸಾಹದಿಂದ ಪಾಲ್ಗೊಂಡು ಮ್ಯಾರಥಾನ್ ಯಶಸ್ಸಿಗೆ ಸಹಕರಿಸಿದರು. 5 ವರ್ಷದ ಮಗುವಿನಿಂದ ಹಿಡಿದು 82 ವರ್ಷ ಪ್ರಾಯದ ಹಿರಿಯರು ಕೂಡ ಲವಲವಿಕೆಯಿದ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದರು.

ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಿ ಶ್ರೀಧರ್ ಮತ್ತು ಎಸಿಪಿ ಟ್ರಾಫಿಕ್ ಗೀತಾ ಕುಲಕರ್ಣಿ 21 ಕಿ.ಮೀ.ನ  ಹಾಫ್ ಮ್ಯಾರಥಾನ್‌ಗೆ ಚಾಲನೆ ನೀಡಿದರು. ಅಲ್ಲದೆ ಸ್ವತಃ ತಾವೂ ಓಟದಲ್ಲಿ ಪಾಲ್ಗೊಂಡರು.

ನಗರದ ಮಂಗಳಾ ಕ್ರೀಡಾಂಗಣದಿಂದ ಆರಂಭವಾದ ಮ್ಯಾರಥಾನ್ ಕೂಳೂರು ಫೆರಿ ರಸ್ತೆ-ಕೊಟ್ಟಾರ ಚೌಕಿ-ಕೂಳೂರು ಸೇತುವೆ, ತಣ್ಣೀರಬಾವಿ ಬೀಚ್‌ವರೆಗೆ ಸಾಗಿ ಅಲ್ಲಿಂದ ಮರಳಿ ಅದೇ ದಾರಿಯಾಗು ಓಟಗಾರರು ಮಂಗಳಾ ಕ್ರೀಡಾಂಗಣಕ್ಕೆ ಹಿಂತಿರುಗುವ ಮೂಲಕ ಮ್ಯಾರಥಾನ್ ಸಮಾಪ್ತಿಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಮೇಯರ್ ಜಯಾನಂದ ಅಂಚನ್,  ಶಾಸಕ ಡಿ.ವೇದವ್ಯಾಸ್ ಕಾಮತ್, ಕೆಎಂಸಿಯ ಡಾ.ಉನ್ನಿ ಕೃಷ್ಣನ್, ಕೆಎಂಸಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಗೀರ್ ಸಿದ್ಧಿಕಿ, ನಿವೀಸ್‌ನ ಶಿಶಿರ್ ಶೆಟ್ಟಿ, ಮಂಗಳೂರು ಮ್ಯಾರಥಾನ್ 2022ರ ರೇಸ್ ನಿರ್ದೇಶಕ ಅಭಿಲಾಷ್ ಡೊಮಿನಿಕ್ ಹಾಗೂ ಮಂಗಳೂರು ರನ್ನರ್ಸ್‌ ಕ್ಲಬ್‌ನ ಅಧ್ಯಕ್ಷ ಅಮಿತಾ ಡಿಸೋಜ ಉಪಸ್ಥಿತರಿದ್ದರು.

*ಮುಂಬೈ ಬೆಂಗಳೂರು, ಮೈಸೂರು ಸಹಿತ ವಿವಿಧ ಕಡೆಯ ಓಟಗಾರರು ಹಾಫ್ ಮ್ಯಾರಥಾನ್ (21ಕಿ.ಮೀ), 10 ಕಿಮೀ, 5 ಕಿಮೀ ಮತ್ತು 2 ಕಿಮೀ ವಿಭಾಗಗಳಲ್ಲಿ ಭಾಗವಹಿಸಿದ್ದರು.

*ಮಂಗಳೂರು ಮ್ಯಾರಥಾನ್‌ನಲ್ಲಿ ವಿಶೇಷ ಚೇತನ ಮಕ್ಕಳು ಕೂಡ ಪಾಲ್ಗೊಂಡು ಮ್ಯಾರಥಾನ್‌ನಲ್ಲಿ ಗಮನ ಸೆಳೆದರು. ಚೇತನ ಶಿಶು ಅಭಿವೃದ್ಧಿ ಕೇಂದ್ರದ ಮಕ್ಕಳು ಮತ್ತು  ಸರ್ವಮಂಗಲ ಟ್ರಸ್ಟ್‌ನ ದೃಷ್ಟಿ ವಿಕಲಚೇತನರು ಓಟದ ಭಾಗವಾಗಿದ್ದರು.

*ಓಟದಲ್ಲಿ ಭಾಗವಹಿಸಿ ಅಂತಿಮ ಗುರಿ ತಲುಪಿದ ಎಲ್ಲ ಸ್ಪರ್ಧಿಗಳಿಗೆ ಪ್ರಮಾಣ ಪತ್ರ ಜತೆಗೆ ಪದಕಗಳನ್ನು ನೀಡಲಾಯಿತು.

*ಹಾಫ್ ಮ್ಯಾರಥಾನ್ ಓಪನ್ ಪುರುಷರ ವಿಭಾಗದಲ್ಲಿ ಸಚಿನ್ (ಪ್ರ), ರಾಹುಲ್ ಶುಕ್ರಾ(ದ್ವಿ), ವೆಂಕಟೇಶ್ (ತೃ). ಮಹಿಳೆಯರ ವಿಭಾಗದಲ್ಲಿ ದೀಪಾ ನಾಯಕ್ (ಪ್ರ),ಮೆಹ್ವಿಶ್ ಹುಸೇನ್ (ದ್ವಿ), ಸಂಧ್ಯಾ ಕೆ(ತೃ) ಮತ್ತು 10 ಕಿ.ಮೀ ಓಟದ ಮುಕ್ತ ಪುರುಷರ ವಿಭಾಗದಲ್ಲಿ ಸಿಬಿನ್ ಚಂಗಪ್ಪ  (ಪ್ತ), ದಶರತ್ ಎನ್.ಟಿ (ದ್ವಿ), ಲಾರಾ ಫ್ರಾನ್ಸಿಸ್(ತೃ) ಹಾಗೂ ಮಹಿಳೆಯರ ವಿಭಾಗದಲ್ಲಿ ಸ್ಪಂದನಾ (ಪ್ರ), ಧನಸ್ಸು (ದ್ವಿ), ಚೈತ್ರಾ (ತೃ) ಬಹುಮಾನ ಪಡೆದುಕೊಂಡರು.

share
Next Story
X