Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನ.11ರಿಂದ ಸಹ್ಯಾದ್ರಿ ಕಾಲೇಜ್ ನಲ್ಲಿ 5ನೇ...

ನ.11ರಿಂದ ಸಹ್ಯಾದ್ರಿ ಕಾಲೇಜ್ ನಲ್ಲಿ 5ನೇ ಆವೃತ್ತಿಯ 'ಏರೋಫಿಲಿಯಾ 2022 ಉತ್ಸವ'

7 Nov 2022 11:07 AM IST
share
ನ.11ರಿಂದ ಸಹ್ಯಾದ್ರಿ ಕಾಲೇಜ್ ನಲ್ಲಿ 5ನೇ ಆವೃತ್ತಿಯ ಏರೋಫಿಲಿಯಾ 2022 ಉತ್ಸವ

ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್  ನ ಟೀಮ್ ಚ್ಯಾಲೆಂಜರ್ಸ್ ನ  ಬಹು ನಿರೀಕ್ಷಿತ ಉತ್ಸವಗಳಲ್ಲಿ ಒಂದಾದ 5 ನೇ ಆವೃತ್ತಿಯ ಏರೋಫಿಲಿಯಾ 2022  ನವೆಂಬರ್ 11ರಿಂದ 13ವರಗೆ ನಿಗದಿಪಡಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರಾದ ಡಾ. ಅನುಷ್ ಬೇಕಲ್, ಏರೋಫಿಲಿಯಾ ಮೂರು ದಿನಗಳ ರಾಷ್ಟ್ರೀಯ ಮಟ್ಟದ ಉತ್ಸವ ನಡೆಯಲಿದ್ದು, ನ. 11ರಂದು ಬೆಳಗ್ಗೆ 10.30ಕ್ಕೆ ಉದ್ಘಾಟನೆ ಗೊಳ್ಳಲಿದೆ ಎಂದರು.

ಇದು ಹಲವಾರು ಉದಯೋನ್ಮುಖ ಎಂಜಿನಿಯರ್‌ಗಳು ಮತ್ತು ನವೋದ್ಯಮಿಗಳಿಗೆ ಮತ್ತು ಅವರ ನವೀನ ಚಿಂತನೆಗಳಿಗೆ ರೆಕ್ಕೆಯನ್ನು ನೀಡಿದೆ. ಈ ಉತ್ಸವವು ಯುವ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಅದ್ಭುತಗಳಿಂದ ರೋಮಾಂಚಿತಗೊಳಿಸಲು ಮತ್ತು ಗಣ್ಯ ವ್ಯಕ್ತಿಗಳೊಂದಿಗೆ ಸಂವಹನ ನಡೆಸಲು ಒಂದು ಅವಕಾಶವಾಗಿದೆ. ಏರೋಫಿಲಿಯಾ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ವೇದಿಕೆಯನ್ನು ಒದಗಿಸುವುದಲ್ಲದೇ, ಸಾಮಾಜಿಕ ಮಾನ್ಯತೆಯನ್ನು ಪಡೆಯಲು ಮತ್ತು ವೃತ್ತಿಪರ ಸಂಪರ್ಕವನ್ನು ವಿಸ್ತರಿಸಲು ಉತ್ತಮ ಮಾರ್ಗವಾಗಿದೆ ಎಂದರು.

ರಾಷ್ಟ್ರೀಯ ಉತ್ಸವದ ಈ 5ನೇ ಆವೃತ್ತಿಯು ಏರೋಫಿಲಿಯಾ 2016, 2017, 2018, ಮತ್ತು 2019 ರ ಸಮಗ್ರ ಅನುಭವವಾಗಿದೆ. ಭಾಗವಹಿಸುವವರು ರೇಡಿಯೋ ನಿಯಂತ್ರಿತ ವಿಮಾನವನ್ನು ಅದರ ಆಯಾಮ ಮತ್ತು ಪ್ರೊಪಲ್ಟನ್ ಸಿಸ್ಟಮ್‌ನಲ್ಲಿ ಕೆಲವು ಮಿತಿಗಳೊಂದಿಗೆ ವಿನ್ಯಾಸಗೊಳಿಸುವ ಅನುಭವ ಪಡೆಯುತ್ತಾರೆ. ಅಂತಾರಾಷ್ಟ್ರೀಯ ಖ್ಯಾತಿಯ ಆರ್‌ಸಿ ಫೈಯರ್‌ಗಳು ಏರ್ ಶೋಗಳನ್ನು ನಡೆಸಲಿದ್ದಾರೆ. ಐಐಟಿ ಮತ್ತು ಎನ್‌ಐಟಿಗಳಂತಹ ಗಣ್ಯ ಸಂಸ್ಥೆಗಳ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಏರೋಫಿಲಿಯಾ 2022 ಸುಮಾರು 4,000 ವಿದ್ಯಾರ್ಥಿಗಳನ್ನು ಆಕರ್ಷಿಸುವ ನಿರೀಕ್ಷೆಯಿದೆ. ವೃತ್ತಿಪರ ಫೈಯರ್ಸ್ ಗಳಿಂದ ವೈಮಾನಿಕ ಪ್ರದರ್ಶನ, ಐಷಾರಾಮಿ ಮತ್ತು ವಿದೇಶಿ ಕಾರುಗಳ ಪ್ರದರ್ಶನದೊಂದಿಗೆ ಮಂಗಳೂರಿನ ಅತಿದೊಡ್ಡ ಆಟೋ-ಎಕ್ಸ್‌ಪೋ, ISRO ಅಭಿವೃದ್ಧಿಪಡಿಸಿದ ನಾವಿಕ್  ತಂತ್ರಜ್ಞಾನದಲ್ಲಿನ ಸಮಸ್ಯೆಗಳ  ಕುರಿತು ಹ್ಯಾಕಥಾನ್, ತಾಂತ್ರಿಕ ಭಾಷಣಗಳು, ಛಾಯಾಗ್ರಹಣ ಸ್ಪರ್ಧೆಗಳು ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಭಾಗವಹಿಸುವವರನ್ನು ಆಕರ್ಷಿಸಲಿದೆ ಎಂದು ಕಾರ್ಯ ಕ್ರಮದ ಸಂಯೋಜಕರಾದ ಅಭಿನವ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರೊ. ಚಂದ್ರ ಸಿಂಗ್, ಪ್ರಜ್ವಲ್, ರಚನಾ ಉಪಸ್ಥಿತರಿದ್ದರು.

share
Next Story
X