ತೂಗು ಸೇತುವೆ ದುರಸ್ತಿ ಕಾಮಗಾರಿ: ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮಡಿಕೇರಿ ನ.7 : ಕುಶಾಲನಗರ ಕಾವೇರಿ ನಿಸರ್ಗಧಾಮ ಪ್ರವಾಸಿ ಕೇಂದ್ರವನ್ನು ನ.8 ರಿಂದ ಮುಂದಿನ ಆದೇಶದ ವರೆಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ಕಾವೇರಿ ನಿಸರ್ಗಧಾಮಕ್ಕೆ ತೆರಳುವ ತೂಗು ಸೇತುವೆ ಶಿಥಿಲಾವಸ್ಥೆಯಲ್ಲಿದ್ದು, ದುರಸ್ತಿ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಲಾಗಿದೆ ಎಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ಪ್ರಕಟನೆ ನೀಡಿದ್ದಾರೆ.
ಇದನ್ನೂ ಓದಿ; KRS ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ; ಪ್ರವಾಸಿಗರಲ್ಲಿ ಆತಂಕ
Next Story