Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೀಸಲಾತಿ ವ್ಯವಸ್ಥೆ ಸದಾ ಮುಂದುವರಿಯಲು...

ಮೀಸಲಾತಿ ವ್ಯವಸ್ಥೆ ಸದಾ ಮುಂದುವರಿಯಲು ಸಾಧ್ಯವಿಲ್ಲ, ಅದಕ್ಕೊಂದು ಸಮಯಮಿತಿ ನಿಗದಿಪಡಿಸಬೇಕು ಎಂದ ಸುಪ್ರೀಂಕೋರ್ಟ್‌

8 Nov 2022 4:05 PM IST
share
ಮೀಸಲಾತಿ ವ್ಯವಸ್ಥೆ ಸದಾ ಮುಂದುವರಿಯಲು ಸಾಧ್ಯವಿಲ್ಲ, ಅದಕ್ಕೊಂದು ಸಮಯಮಿತಿ ನಿಗದಿಪಡಿಸಬೇಕು ಎಂದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ಸಾಮಾನ್ಯ ವಿಭಾಗದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಾತಿಗೆ ಒಪ್ಪಿಗೆ ಸೂಚಿಸಿ ಇನ್ನೊಂದು ವಿಧದ ಮೀಸಲಾತಿಗೆ  ಸೋಮವಾರ ಅನುಮೋದನೆ ನೀಡುವ ವೇಳೆ ಸುಪ್ರೀಂ ಕೋರ್ಟ್‌ ಇನ್ನೊಂದು ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಈ ಮೀಸಲಾತಿ ವ್ಯವಸ್ಥೆಯು ಅನಿಯಮಿತ ಕಾಲಾವಧಿಯ ತನಕ ಮುಂದುವರಿಯಲು ಅನುಮತಿಸಬಾರದು ಮತ್ತು ಅದಕ್ಕೊಂದು ಸಮಯಮಿತಿ ನಿಗದಿಪಡಿಸಿ ಮುಂದೆ ಜಾತಿರಹಿತ ಹಾಗೂ ವರ್ಗರಹಿತ ಸಮಾಜ ನಿರ್ಮಾಣಕ್ಕೆ ದಾರಿಮಾಡಿಕೊಡಬೇಕಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಒಂದು ಕಾಲಮಿತಿಯ ನಂತರ ಈ ರೀತಿಯ ಆದ್ಯತೆ ನೀಡುವ ಕ್ರಮವನ್ನು ಕೈಬಿಡಬೇಕು ಎಂದು ದುರ್ಬಲ ವರ್ಗಗಳವರಿಗೆ ಮೀಸಲಾತಿ ಒದಗಿಸಲು 103 ನೇ ಸಂವಿಧಾನಿಕ ತಿದ್ದುಪಡಿಯ ಕಾನೂನುಬದ್ಧತೆಯನ್ನು ಎತ್ತಿ ಹಿಡಿಯುವ ವೇಳೆ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಹಾಗೂ ಜೆ ಬಿ ಪರ್ಡಿವಾಲ ಹೇಳಿದರು.

ʻʻಸಂವಿಧಾನ ರಚನಾಕಾರರ ದೂರದೃಷ್ಟಿಯಂತೆ, 1985 ರಲ್ಲಿ ಸಂವಿಧಾನಿಕ ಪೀಠ ಮುಂದಿಟ್ಟ ಪ್ರಸ್ತಾವನೆಯಂತೆ ಹಾಗೂ  ಸಂವಿಧಾನ ರಚನೆಯ 50 ವರ್ಷಗಳ ಪೂರ್ಣಗೊಳಿಸುವಿಕೆ ಸಂದರ್ಭದ  ಇಚ್ಛೆಯಾನುಸಾರ ಮೀಸಲಾತಿ ನೀತಿಗೆ ಒಂದು ಸಮಯ ಮಿತಿ ಇರಬೇಕು. ಆದರೆ ಅದು ಇನ್ನೂ ಸಾಧ್ಯವಾಗಿಲ್ಲ, ಅಂದರೆ ದೇಶ ತನ್ನ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿದ ವರ್ಷದಲ್ಲೂ ಸಾಧ್ಯವಾಗಿಲ್ಲ. ಮೀಸಲಾತಿ ವ್ಯವಸ್ಥೆಗೆ ದೇಶದ ಪುರಾತನ ಜಾತಿ ವ್ಯವಸ್ಥೆ ಕಾರಣ ಎಂದು ಹೇಳಲು ಸಾಧ್ಯವಿಲ್ಲ. ಪರಿಶಿಷ್ಟ ಜಾತಿ,ವರ್ಗಗಳು ಮತ್ತು ಇತರ ಹಿಂದುಳಿದ ವರ್ಗಗಳು ಹಿಂದಿನಿಂದಲೂ ಎದುರಿಸಿದ್ದ ಅನ್ಯಾಯವನ್ನು ಸರಿಪಡಿಸಲು ಅದನ್ನು ಜಾರಿಗೊಳಿಸಲಾಗಿತ್ತು. ದೇಶದ 75ನೇ ಸ್ವಾತಂತ್ರ್ಯ ವರ್ಷದ ಕೊನೆಯಲ್ಲಿ ನಾವು ಈ ವ್ಯವಸ್ಥೆಯನ್ನು ಸಮಾಜದ ಹಿತದೃಷ್ಟಿಯಿಂದ  ಪರಾಮರ್ಶಿಸಬೇಕಿದೆ,ʼʼ ಎಂದು ಜಸ್ಟಿಸ್‌ ತ್ರಿವೇದಿ ಹೇಳಿದರು.

ʻʻಮೀಸಲಾತಿಯೆಂಬುದು  ಸಾಮಾಜಿಕ ಮತ್ತು ಆರ್ಥಿಕ ನ್ಯಾಯವೊದಗಿಸುವ ಒಂದು ಸಾಧನ ಆದರೆ ಅದನ್ನು ಸ್ಥಾಪಿತ ಹಿತಾಸಕ್ತಿಯನ್ನಾಗಿಸಲು ಆಸ್ಪದ ನೀಡಬಾರದು. ಅಭಿವೃದ್ಧಿ ಮತ್ತು ಶಿಕ್ಷಣದಿಂದಾಗಿ ಹಿಂದುಳಿದ ವರ್ಗಗಳ ಹಲವು ಸದಸ್ಯರು ಉತ್ತಮ ಉದ್ಯೋಗದೊಂದಿಗೆ ಒಳ್ಳೆಯ ಜೀವನ ನಡೆಸುತ್ತಿದ್ದಾರೆ, ಅಂತಹವರನ್ನು ಹಿಂದುಳಿದ ವರ್ಗಗಳಿಂದ ಕೈಬಿಡಬೇಕು ಹಾಗೂ ಇದರಿಂದ  ನಿಜವಾಗಿಯೂ ಸಹಾಯದ ಅಗತ್ಯವಿರುವ ವರ್ಗಗಳತ್ತ ಗಮನ ಹರಿಸುವುದು ಸಾಧ್ಯವಾಗುತ್ತದೆ,ʼʼ ಎಂದು ಜಸ್ಟಿಸ್‌ ಪರ್ಡಿವಾಲ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

share
Next Story
X