Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡು ಸುದ್ದಿ ವಾಹಿನಿಗಳಿಗೆ ತಮ್ಮ...

ಎರಡು ಸುದ್ದಿ ವಾಹಿನಿಗಳಿಗೆ ತಮ್ಮ ಪತ್ರಿಕಾಗೋಷ್ಠಿಗೆ ನಿಷೇಧ ಹೇರಿದ ರಾಜ್ಯಪಾಲರ ವಿರುದ್ಧ ಕೇರಳ ಪತ್ರಕರ್ತರ ಪ್ರತಿಭಟನೆ

8 Nov 2022 5:54 PM IST
share
ಎರಡು ಸುದ್ದಿ ವಾಹಿನಿಗಳಿಗೆ ತಮ್ಮ ಪತ್ರಿಕಾಗೋಷ್ಠಿಗೆ ನಿಷೇಧ ಹೇರಿದ ರಾಜ್ಯಪಾಲರ ವಿರುದ್ಧ ಕೇರಳ ಪತ್ರಕರ್ತರ ಪ್ರತಿಭಟನೆ

ತಿರುವನಂತಪುರಂ: ಸೋಮವಾರ ತಮ್ಮ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುವುದಕ್ಕೆ ಎರಡು ಮಲಯಾಳಂ ಸುದ್ದಿ ವಾಹಿನಿಗಳಿಗೆ ಕೇರಳ ರಾಜ್ಯಪಾಲ (Kerala Governor) ಆರಿಫ್‌ ಮೊಹಮ್ಮದ್‌ ಖಾನ್‌ (Arif Mohammad Khan) ನಿಷೇಧ ಹೇರಿದ ಬೆನ್ನಿಗೆ ಇಂದು ಕೇರಳದಲ್ಲಿ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಪತ್ರಕರ್ತರು (Kerala journalists) ಪ್ರತಿಭಟನೆ ನಡೆಸಿದ್ದಾರೆ. ಕೇರಳ ಕಾರ್ಯನಿರತ ಪತ್ರಕರ್ತರ ಯೂನಿಯನ್‌ ಆಯೋಜಿಸಿದ್ದ ಒಂದು ಕಿಮೀ ದೂರದ ಪ್ರತಿಭಟನಾ ಮೆರವಣಿಗೆ ರಾಜಭವನದ ಸಮೀಪ ಕೊನೆಗೊಂಡಿದೆ.

ಸೋಮವಾರ ರಾಜ್ಯಪಾಲರು ಕೊಚ್ಚಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿ ಸ್ಥಳದಿಂದ ಕೈರಾಳಿ ನ್ಯೂಸ್‌ ಮತ್ತು ಮೀಡಿಯಾ ಒನ್‌ ಪ್ರತಿನಿಧಿಗಳನ್ನು ಹೊರಹೋಗುವಂತೆ ಸೂಚಿಸಿದ್ದರಲ್ಲದೆ ಪತ್ರಕರ್ತರಂತೆ ಸೋಗು ಹಾಕಿದ ರಾಜಕೀಯ ಮಂದಿಯ ಜೊತೆ ತಾವು ಮಾತನಾಡುವುದಿಲ್ಲ ಎಂದಿದ್ದರು.

ಶಾಹ್‌ ಬಾನೋ ಪ್ರಕರಣದ ತಮ್ಮ ನಿಲುವಿಗಾಗಿ ಮೀಡಿಯಾ ಒನ್‌ ತನ್ನನ್ನು ಟಾರ್ಗೆಟ್‌ ಮಾಡುತ್ತಿದೆ ಹಾಗೂ ಕೈರಾಳಿ ನ್ಯೂಸ್‌ ತಮ್ಮ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದೆ, ತಿದ್ದುಪಡಿ ಮಾಡುವಂತೆ ರಾಜಭವನದಿಂದ ಬಂದ ಹಲವು ಮನವಿಗಳನ್ನು ಪುರಸ್ಕರಿಸಿಲ್ಲ ಎಂಬುದು ರಾಜ್ಯಪಾಲರ ಆರೋಪವಾಗಿದೆ.

ರಾಜ್ಯ ಸರ್ಕಾರ ನಡೆಸುವ ವಿವಿಗಳಿಗೆ ಉಪಕುಲಪತಿಗಳ ನೇಮಕಾತಿ ಕುರಿತಂತೆ ರಾಜ್ಯಪಾಲರು ಹಾಗೂ ರಾಜ್ಯದ ಪಿಣರಾಯಿ ವಿಜಯನ್‌ ನೇತೃತ್ವದ ಸರ್ಕಾರದ ನಡುವೆ ಪ್ರಸ್ತುತ ಜಟಾಪಟಿ ನಡೆಯುತ್ತಿದೆ.

ರಾಜ್ಯಪಾಲರ ನಿಲುವು ತಪ್ಪು ಹಾಗೂ ಅವರು ಎರಡು ವಾಹಿನಿಗಳ ವಿರುದ್ಧದ ನಿಷೇಧವನ್ನು ವಾಪಸ್‌ ಪಡೆಯಬೇಕೆಂದು ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹಿಸಿದೆ.

share
Next Story
X